AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Mango Day 2026: ರಾಷ್ಟ್ರೀಯ ಮಾವು ದಿನದ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ

ಮಾವು ಕೇವಲ ಹಣ್ಣಲ್ಲ, ಭಾವನೆಗಳು, ಸಂಪ್ರದಾಯಗಳು ಮತ್ತು ಕೃಷಿ ಪರಂಪರೆಯೊಂದಿಗೆ ಸಂಬಂಧ ಹೊಂದಿರುವ ವಿಶೇಷ ಹಣ್ಣಾಗಿದ್ದು, ಈ ಹಣ್ಣಿನ ಜನಪ್ರಿಯತೆ, ಅವುಗಳ ಪ್ರಬೇಧ, ಸಾಂಸ್ಕೃತಿಕ ಮಹತ್ವವನ್ನು ಆಚರಿಸುವ ಸಲುವಾಗಿ ಪ್ರತಿ ವರ್ಷ ಜುಲೈ 22 ರಂದು ರಾಷ್ಟ್ರೀಯ ಮಾವು ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

National Mango Day 2026: ರಾಷ್ಟ್ರೀಯ ಮಾವು ದಿನದ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ
ರಾಷ್ಟ್ರೀಯ ಮಾವು ದಿನImage Credit source: Getty Images
ಮಾಲಾಶ್ರೀ ಅಂಚನ್​
| Edited By: |

Updated on:Jul 22, 2026 | 11:26 AM

Share

ಭಾರತದಲ್ಲಿ ಮಾವು (Mango) ಕೇವಲ ಹಣ್ಣಲ್ಲ, ಬದಲಾಗಿ ಅದು ಹಣ್ಣುಗಳ ರಾಜ. ಅಷ್ಟೇ ಅಲ್ಲದೆ ಇದು ರಾಷ್ಟ್ರೀಯ ಹಣ್ಣು ಕೂಡ ಹೌದು. ಬೇಸಿಗೆಯ ಆಗಮನದೊಂದಿಗೆ ವಿವಿಧ ಪ್ರಭೇದದ ಮಾವಿನ ಹಣ್ಣುಗಳು ಕಾಣಿಸಿಕೊಳ್ಳುತ್ತವೆ. ಭಾರತದಲ್ಲಿನ ಈ ವಿವಿಧ ಪ್ರಭೇದ ಮಾವುಗಳಿಗೆ ವಿಶ್ವಾದ್ಯಂತ ಬೇಡಿಕೆಯಿದ್ದು, ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಮಾವು ಬೆಳೆಯುವ ಮತ್ತು ರಫ್ತು ಮಾಡುವ ರಾಷ್ಟ್ರವಾಗಿದೆ. ಈ ಹಣ್ಣಿನ ಜನಪ್ರಿಯತೆ, ಅವುಗಳ ಪ್ರಬೇಧ, ಸಾಂಸ್ಕೃತಿಕ ಮಹತ್ವದ ಬಗ್ಗೆ ಜನರಿಗೆ ತಿಳಿಸಲು ಹಾಗೂ ಮಾವಿನ ಹಣ್ಣಿನ ಗೌರವಾರ್ಥವಾಗಿ ಪ್ರತಿವರ್ಷ ಜುಲೈ 22 ರಂದು ರಾಷ್ಟ್ರೀಯ ಮಾವು ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ರಾಷ್ಟ್ರೀಯ ಮಾವು ದಿನದ ಇತಿಹಾಸವೇನು?

ಮಾವು ಭಾರತೀಯ ಸಾಂಸ್ಕೃತಿಕ ಸಮೃದ್ಧಿಯ ಸಂಕೇತವೆಂದು ಪರಿಗಣಿಸಲ್ಪಟ್ಟಿದೆ ಮತ್ತು ಪ್ರಕೃತಿಯೊಂದಿಗೆ ಸಂಬಂಧ ಹೊಂದಿದೆ. ರಾಷ್ಟ್ರೀಯ ಮಾವಿನ ದಿನವನ್ನು ಮೊದಲ ಬಾರಿಗೆ ಜುಲೈ 22, 2005 ರಂದು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಭಾರತದಲ್ಲಿ ಈ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ಈ ದಿನದ ಉದ್ದೇಶ ಮಾವಿನ ಹಣ್ಣಿನ ಮಹತ್ವ ಮತ್ತು ಅದರ ಇತರ ಪ್ರಯೋಜನಕಾರಿ ಗುಣಗಳು, ಈ ಹಣ್ಣಿನ ಜನಪ್ರಿಯತೆ, ಅವುಗಳ ಪ್ರಬೇಧ, ಸಾಂಸ್ಕೃತಿಕ ಮಹತ್ವವನ್ನು ಎತ್ತಿ ತೋರಿಸುವುದಾಗಿದೆ.

ಮಾವಿನ ದಿನದ ಮಹತ್ವವೇನು?

  • ಮಾವಿನಹಣ್ಣಿನ ಮೇಲಿನ ಜನರ ಪ್ರೀತಿ ಮತ್ತು ಅವುಗಳ ಸಾಂಸ್ಕೃತಿಕ ಮಹತ್ವವನ್ನು ಆಚರಿಸುವುದು ಈ ದಿನದ ಉದ್ದೇಶವಾಗಿದೆ.
  • ಈ ದಿನವು ಮಾವಿನ ವೈವಿಧ್ಯತೆ ಮತ್ತು ಅದಕ್ಕೆ ಸಂಬಂಧಿಸಿದ ರುಚಿಯ ಆಚರಣೆಯನ್ನು ಸೂಚಿಸುತ್ತದೆ.
  • ಮಾವಿನ ವಿವಿಧ ಪ್ರಭೇದಗಳು, ಅದರ ಪೌಷ್ಟಿಕಾಂಶದ ಮೌಲ್ಯ ಮತ್ತು ಭಾರತೀಯ ಸಂಸ್ಕೃತಿಯಲ್ಲಿ ಅದರ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ರಾಷ್ಟ್ರೀಯ ಮಾವಿನ ದಿನದ ಪ್ರಮುಖ ಉದ್ದೇಶವಾಗಿದೆ.

ಇದನ್ನೂ ಓದಿ: ತ್ರಿವರ್ಣ ಧ್ವಜ ಭಾರತದ ಹೆಮ್ಮೆಯ ಸಂಕೇತ

ಮಾವಿನ ಹಣ್ಣಿನ ಆರೋಗ್ಯ ಪ್ರಯೋಜನಗಳೇನು?

  • ಮಾವು ಹಣ್ಣುಗಳ ರಾಜ ಮಾತ್ರವಲ್ಲ, ಪೋಷಕಾಂಶಗಳ ನಿಧಿಯೂ ಆಗಿದೆ. ಮಾವಿನಹಣ್ಣು ಮೆಗ್ನೀಸಿಯಮ್, ಪೊಟ್ಯಾಸಿಯಮ್, ಪ್ರೋಟೀನ್, ವಿಟಮಿನ್‌ಗಳು ಮತ್ತು ಫೋಲೇಟ್ ಸೇರಿದಂತೆ ಅನೇಕ ಪೋಷಕಾಂಶಗಳನ್ನು ಹೊಂದಿವೆ.
  • ಮಾವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ.
  • ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
  • ಮಾವಿನಹಣ್ಣು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.
  • ಮಾವು ಹೃದಯದ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಹಣ್ಣು ಏಕೆಂದರೆ ಇದು ಪೊಟ್ಯಾಸಿಯಮ್‌ನಲ್ಲಿ ಸಮೃದ್ಧವಾಗಿದೆ.
  • ಮಾವಿನಹಣ್ಣಿನಲ್ಲಿ ಲುಟೀನ್, ಜಿಯಾಕ್ಸಾಂಥಿನ್ ಮತ್ತು ವಿಟಮಿನ್ ಎ ಇದ್ದು, ಇವೆಲ್ಲವೂ ಕಣ್ಣಿನ ಆರೋಗ್ಯಕ್ಕೆ ಪ್ರಯೋಜನಕಾರಿ.
  • ಮಾವಿನಹಣ್ಣು ನಿಮ್ಮ ದೇಹದ ತೂಕವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ.
  • ಮಾವಿನಹಣ್ಣಿನಲ್ಲಿರುವ ಪಾಲಿಫಿನಾಲ್‌ಗಳು ಆಕ್ಸಿಡೇಟಿವ್ ಒತ್ತಡದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Wed, 22 July 26

Follow Us
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ