AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Milk Day 2022: ಇಂದು ರಾಷ್ಟ್ರೀಯ ಕ್ಷೀರ ದಿನ, ಗ್ರಾಮೀಣ ಭಾಗದ ಜನರಿಗೆ ಕ್ಷೀರೋದ್ಯಮದ ದಾರಿ ತೋರಿಸಿಕೊಟ್ಟ ಡಾ ವರ್ಗೀಸ್​ರನ್ನ ನೆನೆಯಲೇ ಬೇಕು

ಇಂದು 'ಭಾರತದ ಶ್ವೇತ ಕ್ರಾಂತಿಯ ಪಿತಾಮಹ', ಕ್ಷೀರ ಕ್ರಾಂತಿಯ ಪಿತಾಮಹ ಎಂದು ಸಹ ಹೆಸರು ಗಳಿಸಿರುವ ಡಾ ವರ್ಗೀಸ್ ಕುರಿಯನ್ ಅವರ 101ನೇ ಜನ್ಮ ವಾರ್ಷಿಕೋತ್ಸವ ಹೀಗಾಗಿ ಅವರ ಸ್ಮರಣಾರ್ಥ ರಾಷ್ಟ್ರೀಯ ಕ್ಷೀರ ದಿನವನ್ನು ಆಚರಿಸಲಾಗುತ್ತದೆ.

National Milk Day 2022: ಇಂದು ರಾಷ್ಟ್ರೀಯ ಕ್ಷೀರ ದಿನ, ಗ್ರಾಮೀಣ ಭಾಗದ ಜನರಿಗೆ ಕ್ಷೀರೋದ್ಯಮದ ದಾರಿ ತೋರಿಸಿಕೊಟ್ಟ ಡಾ ವರ್ಗೀಸ್​ರನ್ನ ನೆನೆಯಲೇ ಬೇಕು
ರಾಷ್ಟ್ರೀಯ ಕ್ಷೀರ ದಿನ
TV9 Web
| Edited By: |

Updated on:Nov 26, 2022 | 8:21 AM

Share

ಭಾರತವು ಹಾಲಿನ ಉತ್ಪಾದನೆ ಮತ್ತು ಅದರ ಪೂರೈಕೆಯಲ್ಲಿ ಬಹಳ ಯಶಸ್ಸನ್ನು ಪಡೆದುಕೊಂಡಿದೆ. ಪ್ರಸ್ತುತ ಅಂಕಿಅಂಶಗಳ ಪ್ರಕಾರ, ನಮ್ಮ ದೇಶವು 210 ಮಿಲಿಯನ್ ಟನ್ ಹಾಲು ಉತ್ಪಾದಿಸಲು ಪ್ರಾರಂಭಿಸಿದೆ ಎಂದು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ತಿಳಿಸಿದೆ. ಇಂದು ‘ಭಾರತದ ಶ್ವೇತ ಕ್ರಾಂತಿಯ ಪಿತಾಮಹ’, ಕ್ಷೀರ ಕ್ರಾಂತಿಯ ಪಿತಾಮಹ ಎಂದು ಸಹ ಹೆಸರು ಗಳಿಸಿರುವ ಡಾ ವರ್ಗೀಸ್ ಕುರಿಯನ್(Dr Verghese Kurien) ಅವರ 101ನೇ ಜನ್ಮ ವಾರ್ಷಿಕೋತ್ಸವ ಹೀಗಾಗಿ ಅವರ ಸ್ಮರಣಾರ್ಥ ರಾಷ್ಟ್ರೀಯ ಕ್ಷೀರ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಹಾಲಿನ ಪ್ರಾಮುಖ್ಯತೆ ಮತ್ತು ಅದರ ಪ್ರಯೋಜನಗಳನ್ನು ಎತ್ತಿ ಹಿಡಿಯಲಾಗುತ್ತದೆ. ಪ್ರತಿ ವರ್ಷ ನವೆಂಬರ್ 26 ರಂದು ರಾಷ್ಟ್ರೀಯ ಹಾಲು ದಿನವನ್ನು(National Milk Day)  ಆಚರಿಸಲಾಗುತ್ತದೆ.

ರಾಷ್ಟ್ರೀಯ ಕ್ಷೀರ ದಿನ 2022 ಇತಿಹಾಸ

ಭಾರತದಲ್ಲಿ ಅತಿದೊಡ್ಡ ಸ್ವಾವಲಂಬಿ ಉದ್ಯಮವು 2014 ರಲ್ಲಿ ಅಸ್ತಿತ್ವಕ್ಕೆ ಬಂದಿತು. ಭಾರತೀಯ ಡೈರಿ ಅಸೋಸಿಯೇಷನ್ ​​(IDA) ಈ ದಿನವನ್ನು ಪ್ರಾರಂಭಿಸಿತು. 2014ರ ನವೆಂಬರ್ 26ರಂದು ಮೊದಲ ಬಾರಿ ರಾಷ್ಟ್ರೀಯ ಕ್ಷೀರ ದಿನ ಆಚರಿಸಿದ್ದು, 22 ರಾಜ್ಯಗಳ ಹಾಲು ಉತ್ಪಾದಕರು ಇದರಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Milk Benefits: ಮಲಗುವ ಮುನ್ನ ಹಾಲು ಕುಡಿದರೆ ನಿಮ್ಮ ಈ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ

ದೇಶವು ಅಧಿಕ ಹಾಲು ಉತ್ಪಾದಕ ಕೇಂದ್ರಗಳನ್ನು ಹೊಂದಿ, ಸ್ವಾವಲಂಬಿಯಾಗಬೇಕು ಎಂಬ ಉದ್ದೇಶದೊಂದಿಗೆ ಡಾ ವರ್ಗೀಸ್ ಕುರಿಯನ್ ಅವರು ಅಮುಲ್ ಮಾದರಿ ಹೈನುಗಾರಿಕೆ, ಹೊನಲು ಕಾರ್ಯಾಚರಣೆ ಆರಂಭಿಸಿದ್ದು, ಇವು ಭಾರತದಲ್ಲಿ ಯಶಸ್ವಿಯಾದವು. ಈ ಮೂಲಕ ಗ್ರಾಮೀಣ ಹೈನುಗಾರಿಕೆ ಕ್ಷೇತ್ರವೂ ಅಭಿವೃದ್ಧಿ ಸಾಧಿಸಿತು. ಹೀಗಾಗೇ ಕುರಿಯನ್ ಅವರನ್ನು “ರಾಷ್ಟ್ರೀಯ ಕ್ಷೀರ ಕ್ರಾಂತಿಯ ಪಿತಾಮಹ” ಎಂದು ಕರೆಯಲಾಗುತ್ತೆ.

ರಾಷ್ಟ್ರೀಯ ಕ್ಷೀರ ದಿನ 2022 ಆಚರಣೆ

ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ಈ ವರ್ಷದ “ರಾಷ್ಟ್ರೀಯ ಹಾಲು ದಿನ” ವನ್ನು “ಆಜಾದಿ ಕಾ ಅಮೃತ್ ಮಹೋತ್ಸವ” ದ ಅಂಗವಾಗಿ 26 ನವೆಂಬರ್ 2022 ರಂದು ಭಾರತದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಪ್ರತಿಷ್ಠಿತ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿ 2022ನ್ನು ಸಹ ವಿತರಿಸಲಾಗುವುದು. ಸಮಾರಂಭದಲ್ಲಿ ವರ್ಗೀಸ್ ಕುರಿಯನ್ ಅವರ ಜೀವನ ಪುಸ್ತಕ ಮತ್ತು ಹಾಲಿನ ಕಲಬೆರಕೆ ಕುರಿತ ಕಿರುಪುಸ್ತಕವನ್ನು ಗಣ್ಯರು ಬಿಡುಗಡೆಗೊಳಿಸಲಿದ್ದಾರೆ.

ಯಾರು ಈ ಡಾ ವರ್ಗೀಸ್ ಕುರಿಯನ್?

ಡಾ ವರ್ಗೀಸ್ ಕುರಿಯನ್, 1921ರಲ್ಲಿ ಕೇರಳದ ಕೋಯಿಕೋಡ್ ನಲ್ಲಿ ಜನಿಸಿದರು. ಇವರು ಗ್ರಾಮೀಣ ಭಾಗದ ಜನರಿಗೆ ಹೈನುಗಾರಿಕೆ, ಕ್ಷೀರೋದ್ಯಮದಲ್ಲಿ ಹೊಸ ದಾರಿ ತೋರಿಸಿಕೊಟ್ಟವರು. ಮದರಾಸ್ ವಿವಿಯಿಂದ ವಿಜ್ಞಾನ ಮತ್ತು ಎಂಜಿನಿಯರಿಂಗ್ ಪದವಿ ಪಡೆದು ಬಳಿಕ ಅಮೆರಿಕದ ಮಿಚಿಗನ್ ಸ್ಟೇಟ್ ಯುನಿವರ್ಸಿಟಿಯಲ್ಲಿ ಲೋಹ ವಿಜ್ಞಾನ ಮತ್ತು ನ್ಯೂಕ್ಲಿಯರ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಕ್ಷೀರ ಕ್ರಾಂತಿಯ ಮೂಲಕ ದೇಶ ಸಬಲತೆ, ಸ್ವಾವಲಂಬನೆಗೆ ನೆರವಾಗುವಲ್ಲಿ ವರ್ಗೀಸ್ ಕುರಿಯನ್ ಅವರ ಕೊಡುಗೆ ಅಪಾರ.

Published On - 8:21 am, Sat, 26 November 22

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು