
ದಿನದಿಂದ ದಿನಕ್ಕೆ ಮಾಲಿನ್ಯ (Pollution) ಹೆಚ್ಚಾಗುತ್ತಲೇ ಹೋಗುತ್ತಿವೆ. ನಗರೀಕರಣ, ಕೈಗಾರಿಕೀಕರಣ, ವಾಹನ ದಟ್ಟಣೆ ಇವೆಲ್ಲದರ ಕಾರಣದಿಂದಾಗಿ ಶಬ್ದ, ವಾಯು, ಜಲ ಮಾಲಿನ್ಯ ವೇಗವಾಗಿ ಹೆಚ್ಚುತ್ತಿದೆ. ಈ ಮಾಲಿನ್ಯ ಪ್ರಕೃತಿಗೆ ಗಂಭೀರ ಅಪಾಯವನ್ನು ಉಂಟುಮಾಡುತ್ತಿದೆ ಜೊತೆಗೆ ನಮ್ಮ ಆರೋಗ್ಯದ ಮೇಲೂ ಋಣಾತ್ಮಕ ಪರಿಣಾಮವನ್ನು ಬೀರುತ್ತಿದೆ. ಮಾಲಿನ್ಯದಿಂದ ಉಂಟಾಗುತ್ತಿರುವ ಇಂತಹ ಎಲ್ಲಾ ಅಪಾಯಗಳನ್ನು ಗಮನದಲ್ಲಿಟ್ಟುಕೊಂಡು, ಮಾಲಿನ್ಯದಿಂದ ಆರೋಗ್ಯ ಮತ್ತು ಪರಿಸರದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಭಾರತದಲ್ಲಿ ಪ್ರತಿವರ್ಷ ಡಿಸೆಂಬರ್ 2 ರಂದು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸಲಾಗುತ್ತದೆ.
ಪ್ರತಿವರ್ಷ ಡಿಸೆಂಬರ್ 2 ರಂದು ಆಚರಿಸಲಾಗುವ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನದ ಇತಿಹಾಸವು ಭೋಪಾಲ್ ನಗರದಲ್ಲಿ ಸಂಭವಿಸಿದ ಅನಿಲ ದುರಂತಕ್ಕೆ ಸಂಬಂಧಿಸಿದೆ. ವಾಸ್ತವವಾಗಿ ಡಿಸೆಂಬರ್ 2, 1984 ರಂದು ಭೋಪಾಲ್ ನ ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್ನ (UCIL) ಕೀಟನಾಶಕ ಸ್ಥಾವರದಿಂದ ʼಮೀಥೈಲ್ ಐಸೊಸೈನೇಟ್ʼ ಅನಿಲ ಸೋರಿಕೆಯಿಂದಾಗಿ ಸಾವಿರಾರು ಜನರು ಸಾವನ್ನಪ್ಪಿದರು. ಈ ಭೀಕರ ದುರಂತದಲ್ಲಿ ಸಾವನ್ನಪ್ಪಿದವರ ನೆನಪಿಗಾಗಿ ಭಾರತದಲ್ಲಿ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸಲಾಗುತ್ತದೆ.
ಇದನ್ನೂ ಓದಿ: ಗ್ರಾಮೀಣ ಭಾಗದ ಜನರಿಗೆ ಬದುಕು ಕಟ್ಟಿಕೊಟ್ಟ ಹೈನುಗಾರಿಕೆ
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ