
ತಾಯ್ತನ (Motherhood) ಎನ್ನುವಂತಹದ್ದು ಸುಂದರ ಅನುಭೂತಿಯಾಗಿದ್ದು, ಎಲ್ಲಾ ಹೆಣ್ಣಿಗೂ ತಾನು ಸಹ ಗರ್ಭಿಣಿಯಾಗಬೇಕು, ಮಗುವನ್ನು ಪಡೆಯಬೇಕು, ಮಗುವನ್ನು ಚೆನ್ನಾಗಿ ಆರೈಕೆ ಮಾಡಬೇಕು ಎಂಬ ಆಸೆ ಇದ್ದೇ ಇರುತ್ತದೆ. ಆದರೆ ಮಗವನ್ನು ಹೆತ್ತರೂ ಸಹ ತಮ್ಮನ್ನು ತಾವು ಹೇಗೆ ಆರೈಕೆ ಮಾಡಬೇಕು ಎನ್ನುವ ಕೊರತೆ ಕೆಲವು ಮಹಿಳೆಯರಿಗೆ ಇರುತ್ತದೆ. ಅಲ್ಲದೆ ಕೆಲವು ಮನೆಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಗರ್ಭಿಣಿಯಾಗಿರುವಾಗ ಹಾಗೂ ಪ್ರಸವದ ಬಳಿಕ ಎಲ್ಲಾ ತಾಯಂದಿರಲ್ಲಿ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ತಾಯಂದಿರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಅತ್ಯಗತ್ಯ. ಆದರೆ ಈ ಆರೈಕೆಯ ಕೊರತೆಯಿಂದಾಗಿ ಗರ್ಭಧಾರಣೆ, ಹೆರಿಗೆ ಮತ್ತು ಹೆರಿಗೆಯ ನಂತರದ ಆರೋಗ್ಯ ಸಮಸ್ಯೆಗಳಿಂದ ಮಹಿಳೆಯರು ಮರಣ ಹೊಂದುತ್ತಿದ್ದಾರೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ, ಹೆರಿಗೆಯ ಸಮಯದಲ್ಲಿ ಮತ್ತು ಪ್ರಸವದ ನಂತರದ ತಾಯಂದಿರಿಗೆ ನೀಡಬೇಕಾದ ಅಗತ್ಯ ಆರೈಕೆಯ ಬಗ್ಗೆ ಅರಿವು ಮೂಡಿಸಲು ಹಾಗೂ ತಾಯಿ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಪ್ರತಿವರ್ಷ ಏಪ್ರಿಲ್ 11 ರಂದು ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರೀಯ ಮಾತೃತ್ವ ದಿನದ ಆಚರಣೆ ‘ವೈಟ್ ರಿಬ್ಬನ್ ಅಲೈಯನ್ಸ್ ಇಂಡಿಯಾದ’ ಪ್ರಯತ್ನದ ಫಲವಾಗಿದೆ. ಭಾರತ ಸರ್ಕಾರವು ವೈಟ್ ರಿಬ್ಬನ್ ಅಲೈಯನ್ಸ್ ಇಂಡಿಯಾದ ಪ್ರಸ್ತಾವನೆಯ ಮೇರೆಗೆ 2003 ರಲ್ಲಿ ಏಪ್ರಿಲ್ 11 ರಂದು ರಾಷ್ಟ್ರೀಯ ಸುರಕ್ಷಿತ ಮಾತೃತ್ವದ ದಿನವನ್ನು ಆಚರಿಸುವುದಾಗಿ ಘೋಷಿಸಿತು. ಏಪ್ರಿಲ್ 13 ಮಹಾತ್ಮ ಗಾಂಧೀಜಿಯ ಪತ್ನಿ ಕಸ್ತೂರ್ಬಾ ಗಾಂಧಿಯವರ ಜನ್ಮ ದಿನವಾಗಿರುವುದರಿಂದ, ಅವರ ಜನ್ಮ ದಿನದ ಸ್ಮರಣಾರ್ಥವಾಗಿ ಇದೇ ದಿನವನ್ನು ಆಯ್ಕೆ ಮಾಡಲಾಯಿತು. ಅಂದಿನಿಂದ ಪ್ರತಿವರ್ಷ ಭಾರತದಲ್ಲಿ ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ಗರ್ಭಧಾರಣೆ, ಹೆರಿಗೆ ಮತ್ತು ಹೆರಿಗೆಯ ನಂತರದ ತಾಯಿ ಹಾಗೂ ಮಗುವಿನ ಆರೋಗ್ಯದ ಬಗ್ಗೆ ವಹಿಸಬೇಕಾದ ಕಾಳಜಿಯ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ.
ಇದನ್ನೂ ಓದಿ: ಏಪ್ರಿಲ್ 5ರಂದೇ ರಾಷ್ಟ್ರೀಯ ಕಡಲ ದಿನವನ್ನು ಆಚರಿಸುವುದು ಏಕೆ?
ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನದ ಮಹತ್ವವೇನು?
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ