AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Small Industries Day 2025: ಸಣ್ಣ ಉದ್ಯಮಗಳ ಪ್ರಾರಂಭಿಸಲು ಪ್ರೋತ್ಸಾಹಿಸುವುದೇ ಈ ದಿನದ ಉದ್ದೇಶ

ಸಣ್ಣ, ಉದ್ಯಮ ಮತ್ತು ಗುಡಿ ಕೈಗಾರಿಕೆಗಳು ಭಾರತದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ. ಇವುಗಳು ಅನೇಕ ಜನರಿಗೆ ಉದ್ಯೋಗಾವಕಾಶವನ್ನು ಒದಗಿಸುವುದರ ಜೊತೆಗೆ ದೇಶದ ಆರ್ಥಿಕತೆಗೂ ಕೂಡ ತನ್ನ ಕೊಡುಗೆಯನ್ನು ನೀಡುತ್ತಿದೆ. ಈ ನಿಟ್ಟಿನಲ್ಲಿ ರಾಷ್ಟ್ರದ ಆರ್ಥಿಕತೆಗೆ ಸಣ್ಣ ಕೈಗಾರಿಕೆಗಳ ಕೊಡುಗೆಯನ್ನು ಗುರುತಿಸುವ ಉದ್ದೇಶದಿಂದ ಭಾರತದಲ್ಲಿ ಪ್ರತಿವರ್ಷ ಆಗಸ್ಟ್ 30 ರಂದು ರಾಷ್ಟ್ರೀಯ ಸಣ್ಣ ಕೈಗಾರಿಕೆ ದಿನವನ್ನು ಆಚರಿಸಲಾಗುತ್ತದೆ. ಹಾಗಾದರೆ ಈ ಆಚರಣೆಯ ಹಿಂದಿನ ಇತಿಹಾಸವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

Small Industries Day 2025: ಸಣ್ಣ ಉದ್ಯಮಗಳ ಪ್ರಾರಂಭಿಸಲು ಪ್ರೋತ್ಸಾಹಿಸುವುದೇ ಈ ದಿನದ ಉದ್ದೇಶ
Small Industries In India
ಪ್ರೀತಿ ಭಟ್​, ಗುಣವಂತೆ
|

Updated on: Aug 30, 2025 | 9:36 AM

Share

ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದಲ್ಲಿ ಸಣ್ಣ ಮತ್ತು ಗುಡಿ ಕೈಗಾರಿಕೆಗಳು (Cottage Industry) ನಗರ ಮತ್ತು ಗ್ರಾಮೀಣ ಪ್ರದೇಶದ ಹಲವಾರು ಜನರಿಗೆ ಉದ್ಯೋಗಾವಕಾಶವನ್ನು ಒದಗಿಸುತ್ತಿದೆ. ಜೊತೆಗೆ ದೇಶದ ಆರ್ಥಿಕತೆಗೂ ಕೂಡ ತನ್ನ ಕೊಡುಗೆಯನ್ನು ನೀಡುತ್ತಿದೆ. ಈ ನಿಟ್ಟಿನಲ್ಲಿ ರಾಷ್ಟ್ರದ ಆರ್ಥಿಕತೆಗೆ ಸಣ್ಣ ಕೈಗಾರಿಕೆಗಳ (Small industry) ಕೊಡುಗೆಯನ್ನು ಗುರುತಿಸುವ ಉದ್ದೇಶದಿಂದ ಹಾಗೂ ಯುವ ಉದ್ಯಮಿಗಳು ತಮ್ಮದೇ ಆದ ಸಣ್ಣ ಉದ್ಯಮಗಳನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಭಾರತದಲ್ಲಿ ರಾಷ್ಟ್ರೀಯ ಸಣ್ಣ ಕೈಗಾರಿಕೆ ದಿನವನ್ನು ಪ್ರತಿ ವರ್ಷ ಆಗಸ್ಟ್ 30 ರಂದು ಆಚರಿಸಲಾಗುತ್ತದೆ. ಈ ದಿನವನ್ನು ಭಾರತದ ಸಣ್ಣ ಪ್ರಮಾಣದ ಕೈಗಾರಿಕೆಗಳ (SSI) ಮಹತ್ವದ ಕೊಡುಗೆಗಳನ್ನು ಗುರುತಿಸಲು, ಉದ್ಯೋಗಾವಕಾಶಗಳನ್ನು ಸೃಷ್ಟಿಸಲು, ಮತ್ತು ಅವುಗಳ ಬೆಳವಣಿಗೆಗೆ ಬೆಂಬಲ ನೀಡಲು ಮೀಸಲಿಡಲಾಗಿದೆ.

ಈ ದಿನದ ಇತಿಹಾಸವೇನು?

ಆಗಿನ ಕೇಂದ್ರ ಸರ್ಕಾರವು ಆಗಸ್ಟ್ 30, 2000ನೇ ಇಸವಿಯಲ್ಲಿ ಭಾರತದಲ್ಲಿ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಸಮಗ್ರ ನೀತಿ ಪ್ಯಾಕೇಜ್​​​ನ್ನು ಸಿದ್ಧಪಡಿಸಿತು. ಅದೇ ದಿನವನ್ನು ಸಣ್ಣ ಕೈಗಾರಿಕೆಗಳ ದಿನವನ್ನಾಗಿ ಆಚರಿಸಲು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯವು (SSI) ನಿರ್ಧರಿಸಿತು. ಬಳಿಕ ಆಗಸ್ಟ್ 30, 2001ರಲ್ಲಿ ಮೊದಲ ಬಾರಿಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯವು ನವದೆಹಲಿಯಲ್ಲಿ ಸಣ್ಣ ಪ್ರಮಾಣದ ಕೈಗಾರಿಕೆಗಳಲ್ಲಿನ ಉದ್ಯಮಿಗಳಿಗಾಗಿ ಸಮ್ಮೇಳನವನ್ನು ಆಯೋಜಿಸಿತು. ಮತ್ತು ಈ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿಗಳನ್ನು ಕೂಡಾ ನೀಡಿ ಗೌರವಿಸಿತು. ಅಂದಿನಿಂದ ಪ್ರತಿವರ್ಷ ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೈಗಾರಿಕಾ ದಿನವನ್ನು ಆಚರಿಸಲಾಗುತ್ತಿದೆ.

ಈ ದಿನದ ಉದ್ದೇಶ

  • ದೇಶದ ಆರ್ಥಿಕ ಬೆಳವಣಿಗೆಗೆ ಸಣ್ಣ ಕೈಗಾರಿಕೆಗಳು ನೀಡುವ ಕೊಡುಗೆಗಳನ್ನು ಗುರುತಿಸುವುದು.
  • ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಮತ್ತು ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸುವುದು.
  • ಸಣ್ಣ ಉದ್ಯಮಗಳನ್ನು ಮತ್ತಷ್ಟು ಬೆಳೆಸಲು ಸರ್ಕಾರಿ ನೀತಿಗಳನ್ನು ಮತ್ತು ಬೆಂಬಲ ಕ್ರಮಗಳನ್ನು ಘೋಷಿಸುವುದು.
  • ಸಣ್ಣ ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮತ್ತು ಪರಿಹಾರಗಳನ್ನು ಕಂಡುಕೊಳ್ಳಲು ಒಂದು ವೇದಿಕೆಯನ್ನು ಒದಗಿಸುವುದು.

ಇದನ್ನೂ ಓದಿ: National Sports Day 2025: ಆಗಸ್ಟ್‌ 29 ರಂದೇ ಏಕೆ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ ಗೊತ್ತಾ?

ಸಣ್ಣ ಕೈಗಾರಿಕೆಗಳ ಪ್ರಾಮುಖ್ಯತೆ

  • ಇವುಗಳು ದೊಡ್ಡ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ವಿಶೇಷವಾಗಿ ಗ್ರಾಮೀಣ ಮತ್ತು ಅರೆ- ನಗರ ಪ್ರದೇಶಗಳಲ್ಲಿ.
  • ದೇಶದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ತಲಾ ಆದಾಯವನ್ನು ಹೆಚ್ಚಿಸಲು ಪ್ರಮುಖ ಕೊಡುಗೆ ನೀಡುತ್ತವೆ.
  • ದೇಶದ ಜಿಡಿಪಿ (ಒಟ್ಟು ದೇಶೀಯ ಉತ್ಪನ್ನ) ಮತ್ತು ರಫ್ತುಗಳಿಗೆ ಇವುಗಳು ಗಣನೀಯವಾಗಿ ಕೊಡುಗೆ ನೀಡುತ್ತವೆ.

ಸಣ್ಣ ಕೈಗಾರಿಕೆಗಳ ಪ್ರಮುಖ ಲಕ್ಷಣಗಳು

ಸೀಮಿತ ಬಂಡವಾಳ ಹೂಡಿಕೆ

ಈ ಕೈಗಾರಿಕೆಗಳಲ್ಲಿ, ಸಸ್ಯ ಮತ್ತು ಯಂತ್ರೋಪಕರಣಗಳಲ್ಲಿ ಹೂಡಿಕೆ ಒಂದು ನಿರ್ದಿಷ್ಟ ಮಿತಿಯಲ್ಲಿರುತ್ತದೆ, ಉದಾಹರಣೆಗೆ 10 ಕೋಟಿ ರೂಪಾಯಿಗಳಿಗಿಂತ ಹೆಚ್ಚಿರುವುದಿಲ್ಲ.

ಉದ್ಯೋಗ ಸೃಷ್ಟಿ

ಇವುಗಳು ಸಣ್ಣ ಯಂತ್ರಗಳನ್ನು ಮತ್ತು ಸೀಮಿತ ಮಾನವ ಸಂಪನ್ಮೂಲವನ್ನು ಬಳಸುತ್ತವೆ, ಇದು ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಿದೆ.

ಸ್ಥಳೀಯ ಕಚ್ಚಾ ವಸ್ತುಗಳ ಬಳಕೆ

ಸಣ್ಣ ಕೈಗಾರಿಕೆಗಳು ಸ್ಥಳೀಯವಾಗಿ ಲಭ್ಯವಿರುವ ಕಚ್ಚಾ ವಸ್ತುಗಳನ್ನು ಹೆಚ್ಚಾಗಿ ಬಳಸಿಕೊಳ್ಳುವ ಮೂಲಕ ದೇಶದ ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ.

ನಮ್ಯತೆ:

ಸಣ್ಣ ಪ್ರಮಾಣದ ಕೈಗಾರಿಕೆಗಳು ಮಾರುಕಟ್ಟೆಯ ಬದಲಾಗುತ್ತಿರುವ ಬೇಡಿಕೆಗಳಿಗೆ ತ್ವರಿತವಾಗಿ ಸ್ಪಂದಿಸುವ ಸಾಮರ್ಥ್ಯವನ್ನು ಹೊಂದಿವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ