National Statistics Day 2024 : ಪ್ರೊ. ಪ್ರಶಾಂತ ಚಂದ್ರ ಮಹಲನೋಬಿಸ್‌ ಅವರ ಜನ್ಮದಿನದಂದು ರಾಷ್ಟ್ರೀಯ ಅಂಕಿ ಅಂಶ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

ಪ್ರತಿ ವರ್ಷ ಜೂನ್ 29 ರಂದು ರಾಷ್ಟ್ರೀಯ ಅಂಕಿ ಅಂಶ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಭಾರತದ ಖ್ಯಾತ ಸಂಖ್ಯಾಶಾಸ್ತ್ರಜ್ಞ ಪ್ರೊ. ಪ್ರಶಾಂತ ಚಂದ್ರ ಮಹಲನೋಬಿಸ್‌ ಅವರ ಜನ್ಮದಿನವಾಗಿದೆ. ಅದಲ್ಲದೇ, ಅಂಕಿ ಅಂಶಗಳ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

National Statistics Day 2024 : ಪ್ರೊ. ಪ್ರಶಾಂತ ಚಂದ್ರ ಮಹಲನೋಬಿಸ್‌ ಅವರ ಜನ್ಮದಿನದಂದು ರಾಷ್ಟ್ರೀಯ ಅಂಕಿ ಅಂಶ ದಿನವನ್ನು ಆಚರಿಸುವುದು ಏಕೆ?  ಇಲ್ಲಿದೆ ಮಾಹಿತಿ
Follow us
| Updated By: ಅಕ್ಷತಾ ವರ್ಕಾಡಿ

Updated on: Jun 28, 2024 | 6:17 PM

ದಿನನಿತ್ಯದ ಬದುಕಿನಲ್ಲಿ ನಾವು ಅಂಕಿ ಅಂಶಗಳನ್ನು ಬಳಕೆ ಮಾಡುತ್ತೇವೆ. ಅದಲ್ಲದೇ ದೇಶದ ಪ್ರಗತಿಯಲ್ಲಿ ಮಾಹಿತಿಯನ್ನು ಪಡೆಯಲು ಹಾಗೂ ಸರಕಾರಿ ಯೋಜನೆಗಳನ್ನು ರೂಪಿಸುವಲ್ಲಿ ಅಂಕಿ ಸಂಖ್ಯೆಗಳ ಪಾತ್ರವು ಅಗಾಧವಾಗಿದೆ. ಈ ನಿಟ್ಟಿನಲ್ಲಿ ಈ ಅಂಕಿ ಅಂಶಗಳ ಬಳಕೆಯನ್ನು ಮತ್ತಷ್ಟು ಜನಪ್ರಿಯಗೊಳಿಸಲು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜೂನ್ 29 ರಂದು ರಾಷ್ಟ್ರೀಯ ಅಂಕಿ ಅಂಶ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಪ್ರೊ.ಪಿ.ಸಿ.ಮಹಾಲನೋಬಿಸ್ ಅವರ ಜನ್ಮ ದಿನವಾಗಿದ್ದು, ಮಹಲನೋಬಿಸ್‌ ಅವರು ಗಣಿತಶಾಸ್ತ್ರಕ್ಕೆ ನೀಡಿದ ಕೊಡುಗೆಗೆ ಗೌರವ ಸಲ್ಲಿಸಲಾಗುತ್ತದೆ.

ರಾಷ್ಟ್ರೀಯ ಅಂಕಿ ಅಂಶ ದಿನದ ಇತಿಹಾಸ:

ಸ್ಟ್ಯಾಟಿಸ್ಟಿಕ್ಸ್ ಅಥವಾ ಸಂಖ್ಯಾಶಾಸ್ತ್ರಕ್ಕೆ ಪ್ರಶಾಂತ ಚಂದ್ರ ಮಹಲನೋಬಿಸ್ ಅವರು ನೀಡಿದ ಕೊಡುಗೆಯನ್ನು ಗೌರವಿಸುವ ಉದ್ದೇಶದಿಂದ 2006ರಲ್ಲಿ ಭಾರತವು ಸರ್ಕಾರವು ಅವರ ಜನ್ಮದಿನವನ್ನು ರಾಷ್ಟ್ರೀಯ ಅಂಕಿ-ಅಂಶ ದಿನವೆಂದು ಫೋಷಿಸಲು ನಿರ್ಧಾರ ಮಾಡಿತು. ಜೂನ್‌ 5, 2007 ರಂದು ಭಾರತೀಯ ಗಜೆಟ್‌ನಲ್ಲಿ ಈ ದಿನವನ್ನು ಅಧಿಕೃತವಾಗಿ ಘೋಷಣೆ ಮಾಡುವ ಮೂಲಕ ಪ್ರಕಟಿಸಲಾಯಿತು. ಜೂನ್‌ 29, 2007 ರಂದು ಮೊದಲ ಬಾರಿ ರಾಷ್ಟ್ರೀಯ ಅಂಕಿ-ಅಂಶ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷವು ರಾಷ್ಟ್ರೀಯ ಅಂಕಿಅಂಶ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

ಇದನ್ನೂ ಓದಿ: ನಿಮ್ಮ ಮಗ ಹುಡುಗಿಯ ಹಿಂದೆ ಬಿದ್ದಿದ್ದಾನೆ ಎಂದು ಪತ್ತೆ ಮಾಡುವುದು ಹೇಗೆ?

ರಾಷ್ಟ್ರೀಯ ಅಂಕಿ ಅಂಶದ ದಿನದ ಮಹತ್ವ ಹಾಗೂ ಆಚರಣೆ:

ದೇಶದ ಪ್ರಗತಿಯನ್ನು ತಿಳಿಯಲು ಅಂಕಿ ಅಂಶಗಳ ಮಾಹಿತಿಯು ಅಗತ್ಯವಾಗಿದೆ. ಹೀಗಾಗಿ ಆರ್ಥಿಕ ಯೋಜನೆ ಮತ್ತು ನೀತಿ ನಿರೂಪಣೆಯಲ್ಲಿ ಸಂಖ್ಯಾಶಾಸ್ತ್ರದ ಪಾತ್ರ ಮತ್ತು ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಡಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ. ಅದಲ್ಲದೇ ಸಂಖ್ಯಾಶಾಸ್ತ್ರ ಕ್ಷೇತ್ರದಲ್ಲಿ ಪ್ರೊಫೆಸರ್ ಮಹಲನೋಬಿಸ್ ಅವರು ನೀಡಿದ ಕೊಡುಗೆಗಳನ್ನು ಜನರಿಗೆ ತಿಳಿಸುವುದು ಮುಖ್ಯವಾಗಿದೆ. ಸರ್ಕಾರದ ಅಂಕಿ-ಅಂಶ ವ್ಯವಸ್ಥೆಗೆ ಕೊಡುಗೆ ನೀಡಿದವರನ್ನು ಗೌರವಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ದೇಶದ ಪ್ರಗತಿಗೆ ಅಂಕಿ ಅಂಶಗಳ ಪಾತ್ರವೇನು ಎನ್ನುವುದನ್ನು ತಿಳಿಸಲು ಸೆಮಿನಾರ್ ಗಳು, ಸಮ್ಮೇಳನಗಳು ಹಾಗೂ ಚರ್ಚಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?