AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Tourism Day: ಜ. 25 ರಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನ; ಭಾರತದ ಆದಾಯದ ಭಾಗವೇ ಪ್ರವಾಸೋದ್ಯಮ!

ಭಾರತವು ವೈವಿದ್ಯತೆಯಿಂದ ಕೂಡಿದ ದೇಶವಾಗಿದ್ದು ಆಚಾರ ವಿಚಾರಗಳು ಸಂಸ್ಕೃತಿ ಸಂಪ್ರದಾಯ, ಆಹಾರ ಪದ್ಧತಿಗಳು ಭಿನ್ನವಾಗಿದ್ದು, ಕಣ್ಮನ ಸೆಳೆಯುವ ವಿವಿಧ ಪ್ರವಾಸೀಯ ತಾಣಗಳನ್ನು ಒಳಗೊಂಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಪ್ರವಾಸಿಗರ ಕಣ್ಮನ ಸೆಳೆಯುವ ವಿವಿಧ ತಾಣಗಳನ್ನು ಹೊಂದಿದೆ. ಈ ಪ್ರವಾಸಿ ತಾಣಗಳನ್ನು ಇನ್ನಷ್ಟು ಉತ್ತೇಜಿಸುವ ಸಲುವಾಗಿ ಪ್ರತಿ ವರ್ಷವು ಜನವರಿ 25 ರಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಆಚರಣೆಯ ಹಿಂದಿನ ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

National Tourism Day: ಜ. 25 ರಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನ; ಭಾರತದ ಆದಾಯದ ಭಾಗವೇ ಪ್ರವಾಸೋದ್ಯಮ!
National Tourism DayImage Credit source: Pinterest
ಸಾಯಿನಂದಾ
| Edited By: |

Updated on: Jan 23, 2024 | 6:32 PM

Share

ಪ್ರವಾಸ ಎಂದರೆ ಯಾರಿಗೆ ಇಷ್ಟ ಹೇಳಿ, ನಾಳೆ ಪ್ರವಾಸಕ್ಕೆ ಹೋಗುವುದೆಂದರೆ ಇವತ್ತು ನಿದ್ದೆ ಕೂಡ ಬರುವುದಿಲ್ಲ. ಅಷ್ಟರ ಮಟ್ಟಿಗೆ ಈ ಪ್ರವಾಸವೆನ್ನುವುದು ಎಲ್ಲಾ ಟೆನ್ಶನ್ ಗಳನ್ನು ಮರೆಸಿ ರಿಲ್ಯಾಕ್ಸ್ ಆಗಿಸುತ್ತದೆ. ಹೀಗಾಗಿ ಬಿಡುವು ಸಿಕ್ಕ ಕೂಡಲೇ ವಿವಿಧ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗಿರುವ ಕಾರಣ ಭಾರತದಲ್ಲಿ ಪ್ರವಾಸಿ ತಾಣಗಳಿಗೇನು ಕೊರತೆಯಿಲ್ಲ. ಪ್ರತಿ ರಾಜ್ಯದಲ್ಲಿಯೂ ವಿವಿಧ ಆಕರ್ಷಿಣೀಯ ತಾಣಗಳಿದ್ದು, ರಜೆಯ ಸಮಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಈ ತಾಣಗಳಿಗೆ ಭೇಟಿ ನೀಡುತ್ತಾರೆ. ಹೀಗಾಗಿ ಭಾರತದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಮಹತ್ವವನ್ನು ನೀಡಲಾಗುತ್ತಿದ್ದು ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆಗೆ ಇಂತಹ ತಾಣಗಳಿಂದಲೇ ಆದಾಯವು ಬರುತ್ತಿದೆ ಎನ್ನುವುದು ಗಮರ್ನಾಹ ಸಂಗತಿಯಾಗಿದೆ.

ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಇತಿಹಾಸ:

ಭಾರತದಲ್ಲಿ ಪ್ರವಾಸೋದ್ಯಮ ದಿನವನ್ನು ಜನವರಿ 25 ರಂದು ಆಚರಿಸಲಾಗುತ್ತಿದ್ದು, 1948ರಲ್ಲಿ ದೇಶಕ್ಕೆ ಸ್ವಾತಂತ್ರ್ಯದ ಬಳಿಕ, ಭಾರತದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪ್ರವಾಸೋದ್ಯಮ ಸಾರಿಗೆ ಸಮಿತಿಯನ್ನು ರಚಿಸಲಾಯಿತು. 1998 ರಲ್ಲಿ ಪ್ರವಾಸೋದ್ಯಮ ಮತ್ತು ಸಂಪರ್ಕ ಸಚಿವಾಲಯದ ಅಡಿಯಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಆರಂಭಿಸಲಾಯಿತು.

ಇದನ್ನೂ ಓದಿ: ಮತದಾನ ಮಾಡಲು ಒಬ್ಬ ವ್ಯಕ್ತಿಗೆ ಯಾವೆಲ್ಲಾ ಅರ್ಹತೆಗಳಿರಬೇಕು? ಇದರ ಹಿಂದಿರುವ ಮಹತ್ವ ಏನು?

ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಮಹತ್ವ:

ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ಆಚರಿಸುವುದರ ಉದ್ದೇಶವೇನೆಂದರೆ ದೇಶದ ಆರ್ಥಿಕತೆಗೆ ಪ್ರವಾಸೋದ್ಯಮದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು. ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಯ ನಿರೀಕ್ಷೆಗಳು ಹಾಗೂ ಭಾರತದ ಆರ್ಥಿಕ ಅಭಿವೃದ್ಧಿಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎನ್ನುವುದರ ಬಗ್ಗೆ ಅರಿವು ಮೂಡಿಸುವುದಾಗಿದೆ. ಹೀಗಾಗಿ ರಾಷ್ಟ್ರೀಯ ಪ್ರವಾಸೋದ್ಯಮ ದಿನದಂದು ರಾಜ್ಯಗಳು ತಮ್ಮ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸೆಮಿನಾರ್‌ಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಇತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ