AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Vaccination Day 2024: ಹೆತ್ತವರೇ ಮಕ್ಕಳ ಆರೋಗ್ಯ ನಿಮ್ಮ ಕೈಯಲ್ಲಿ, ಲಸಿಕೆ ಹಾಕಿಸಿ ಜಾಗೃತಿ ಮೂಡಿಸಿ

ಇತ್ತೀಚೆಗಿನ ದಿನಗಳಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಹೀಗಾಗಿ ಉತ್ತಮ ದೇಹಾರೋಗ್ಯವನ್ನು ಪಡೆಯುವುದು ಕಷ್ಟವೆನ್ನುವಂತಾಗಿದೆ. ವಯಸ್ಸು ಆದಂತೆ ಬರುವ ಕಾಯಿಲೆಗಳು ಒಂದೆಡೆಯಾದರೆ ಮಕ್ಕಳಾಗಿದ್ದಾಗ ಕೆಲವು ಕಾಯಿಲೆಗಳು ಬಾರದಂತೆ ಚುಚ್ಚು ಮದ್ದು ಹಾಕುವುದು ಬಹಳ ಮುಖ್ಯ. ಹೀಗಾಗಿ ಪ್ರತಿ ವರ್ಷ ಮಾರ್ಚ್ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಮಹತ್ವ ಹಾಗೂ ಇತಿಹಾಸದ ಕುರಿತಾದ ಸಂಪೂರ್ಣ ಮಾಹಿತಿಯು ಇಲ್ಲಿದೆ.

National Vaccination Day 2024: ಹೆತ್ತವರೇ ಮಕ್ಕಳ ಆರೋಗ್ಯ ನಿಮ್ಮ ಕೈಯಲ್ಲಿ, ಲಸಿಕೆ ಹಾಕಿಸಿ ಜಾಗೃತಿ ಮೂಡಿಸಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 15, 2024 | 12:23 PM

ಆರೋಗ್ಯದ ಬಗ್ಗೆ ಎಷ್ಟೇ ಎಚ್ಚರಿಕೆ ವಹಿಸಿದರೂ ಸಾಲುವುದಿಲ್ಲ. ಎಷ್ಟೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೂ ಕೆಲ ಕಾಯಿಲೆಗಳು ಬಂದೇ ಬಿಡುತ್ತದೆ. ಇನ್ನು ಕೆಲವು ಆರೋಗ್ಯ ಸಮಸ್ಯೆಗಳನ್ನು ಬಾರದಂತೆ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕಾಗುತ್ತದೆ. ಈ ಲಸಿಕೆಗಳು ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ಸಹಕಾರಿಯಾಗಿದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಆರೋಗ್ಯವನ್ನು ಕಾಪಾಡುತ್ತದೆ. ಮಗು ಹುಟ್ಟಿದಾಗಿನಿಂದ ಐದು ವರ್ಷದವರೆಗೆ ಮಗುವಿನ ವಯಸ್ಸಿಗೆ ತಕ್ಕಂತೆ ಲಸಿಕೆಯನ್ನು ನೀಡಲಾಗುತ್ತದೆ. ಆದರೆ ಯಾವ ಯಾವ ವರ್ಷಕ್ಕೆ ಯಾವ ಯಾವ ಲಸಿಕೆಯನ್ನು ನೀಡಬೇಕು ಎನ್ನುವುದನ್ನು ಈಗಾಗಲೇ ಅರೋಗ್ಯ ಇಲಾಖೆಯು ನಿಗದಿ ಪಡಿಸಿದೆ. ಪ್ರತಿ ವರ್ಷ ಮಾರ್ಚ್ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ರಾಷ್ಟ್ರೀಯ ಲಸಿಕೆ ದಿನದ ಇತಿಹಾಸ

ರಾಷ್ಟ್ರೀಯ ಲಸಿಕೆ ದಿನವನ್ನು ರಾಷ್ಟ್ರೀಯ ರೋಗನಿರೋಧಕ ದಿನ ಎಂದೂ ಕರೆಯಲಾಗುತ್ತದೆ. ದೇಶದಲ್ಲಿ 1995ರ ಮಾರ್ಚ್ 16ರಂದು ಮೊದಲ ಲಸಿಕೆ ದಿನಾಚರಣೆಯನ್ನು ಆಚರಿಸಲಾಯಿತು. ಅಂದು ದೇಶದಲ್ಲಿ ಪೋಲಿಯೊ ಹನಿ ಹಾಕುವ ‘ಪಲ್ಸ್ ಪೋಲಿಯೊ’ ಅಭಿಯಾನಕ್ಕೆ ಚಾಲನೆ ಸಿಕ್ಕಿತು. . ಎರಡು ದಶಕಗಳ ಬಳಿಕಭಾರತ ದೇಶದಲ್ಲಿ ಪೋಲಿಯೊ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ, 2014ರಲ್ಲಿ ಭಾರತವನ್ನು ಪೋಲಿಯೊ ಮುಕ್ತ ಎಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷವು ಈ ದಿನದಂದು ಚುಚ್ಚು ಮದ್ದುಗಳನ್ನುಗಳನ್ನು ನೀಡುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ನಿದ್ರಾಹೀನತೆಯಿಂದ ಹದಿಹರೆಯದವರಲ್ಲಿ ನರವೈಜ್ಞಾನಿಕ ಸಮಸ್ಯೆ ಉಂಟಾದೀತು!

ರಾಷ್ಟ್ರೀಯ ಲಸಿಕೆ ದಿನದ ಮಹತ್ವ

ಲಸಿಕೆಗಳು ಆರೋಗ್ಯ ಹದಗೆಡದಂತೆ, ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳನ್ನು ದೇಹದಿಂದ ಸಂಪೂರ್ಣವಾಗಿ ತೆಗೆದುಹಾಕಲು ಸಹಾಯ ಮಾಡುತ್ತದೆ. ಈ ದಿನದಂದು ಲಸಿಕೆಯ ಅವಶ್ಯಕತೆ ಕುರಿತು ಜನರಲ್ಲಿ ಅರಿವು ಮೂಡಿಸಲು ಕೆಲಸವನ್ನು ಮಾಡಲಾಗುತ್ತದೆ. ಈ ದಿನದಂದು ಮಕ್ಕಳಿಗೆ ಪೋಲಿಯೊ ಲಸಿಕೆಯ ಮಾತ್ರವಲ್ಲದೇ ದಡಾರ, ಸಿಡುಬು, ಕ್ಷಯಗಳ ಲಸಿಕೆಗಳನ್ನು ನೀಡಲಾಗುತ್ತದೆ. ಅದಲ್ಲದೇ ಲಸಿಕೆ ಹಾಕಿಸುವುದರಿಂದ ಮಕ್ಕಳನ್ನು ಈ ಕೆಲವು ರೋಗಗಳಿಂದ ಹೇಗೆ ರಕ್ಷಿಸಬಹುದು ಎನ್ನುವ ಬಗ್ಗೆ ಮಾಹಿತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಮಕ್ಕಳ ಆರೋಗ್ಯವನ್ನು ಕಾಪಾಡುವಲ್ಲಿ ಲಸಿಕೆ ಎಷ್ಟು ಮುಖ್ಯ ಎನ್ನುವ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಗುತ್ತದೆ. ಈ ರಾಷ್ಟ್ರೀಯ ಲಸಿಕೆ ದಿನದಂದು ಲಸಿಕಾ ಅಭಿಯಾನಗಳು ನಡೆಯುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ