Navaratri 2024:.ನವರಾತ್ರಿಗೆ ಆರನೇ ದಿನ ಬಾಳೆಹಣ್ಣಿನ ಬರ್ಫಿ ಮಾಡಿ ದೇವಿಗೆ ನೈವೇದ್ಯ ಅರ್ಪಿಸಿ, ಇಲ್ಲಿದೆ ಪಾಕವಿಧಾನ

ನವರಾತ್ರಿಗೆ ಬಂತೆಂದರೆ ಸಾಕು, ಒಂಬತ್ತು ದಿನಗಳ ವಿಶೇಷ ಅಡುಗೆಗಳನ್ನು ಮಾಡಿ ದೇವರಿಗೆ ನೈವೇದ್ಯವಾಗಿ ಇಡಲಾಗುತ್ತದೆ. ಆದರೆ ಅಡುಗೆ ರುಚಿಯ ಜೊತೆಗೆ ಮಾಡಲು ಸುಲಭವಾಗಿದ್ದರೆ ಎಲ್ಲರು ಅಂತಹ ಅಡುಗೆಯನ್ನು ಮಾಡಬಯಸುತ್ತಾರೆ. ಮನೆಯಲ್ಲಿ ಸುಲಭವಾಗಿ ಬಾಳೆಹಣ್ಣಿನ ಬರ್ಫಿ ಮಾಡಿ ದೇವಿಗೆ ನೈವೇದ್ಯವಾಗಿ ಇಡಬಹುದಾಗಿದ್ದು, ಈ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Navaratri 2024:.ನವರಾತ್ರಿಗೆ ಆರನೇ ದಿನ ಬಾಳೆಹಣ್ಣಿನ ಬರ್ಫಿ ಮಾಡಿ ದೇವಿಗೆ ನೈವೇದ್ಯ ಅರ್ಪಿಸಿ, ಇಲ್ಲಿದೆ ಪಾಕವಿಧಾನ
ಬಾಳೆಹಣ್ಣಿನ ಬರ್ಫಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 07, 2024 | 6:27 PM

ನವರಾತ್ರಿಯು ದುರ್ಗಾ ದೇವಿಯ ಆರಾಧನೆ ಸಮಯ. ಹಿಂದೂ ಧರ್ಮದಲ್ಲಿ ನವರಾತ್ರಿಯನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಶಾರದೀಯ ನವರಾತ್ರಿಯು ಅಶ್ವಿನಿ ಮಾಸದ ಶುಕ್ಲ ಪಕ್ಷದ ಪ್ರತಿಪದ ದಿನಾಂಕದಿಂದ ಪ್ರಾರಂಭವಾಗುತ್ತದೆ. ಈ ಬಾರಿ ಅಕ್ಟೋಬರ್ 3 ರಿಂದ 12 ರವರೆಗೆ ಒಂಬತ್ತು ದಿನಗಳ ಕಾಲ ದೇವಿಯನ್ನು ಆರಾಧಿಸಲಾಗುತ್ತದೆ. ಈ ಒಂಬತ್ತು ದಿನಗಳ ಉತ್ಸವದಲ್ಲಿ, ದುರ್ಗೆಗೆ ಬಗೆಬಗೆ ಖಾದ್ಯಗಳನ್ನು ನೈವೇದ್ಯದ ರೂಪದಲ್ಲಿ ನೀಡಲಾಗುತ್ತದೆ. ಆರನೇ ದಿನದಂದು ದೇವಿಗೆ ಬಾಳೆಹಣ್ಣಿನ ಬರ್ಫಿಯನ್ನು ನೈವೇದ್ಯವಾಗಿ ಅರ್ಪಿಸಬಹುದಾಗಿದೆ.

ಬಾಳೆಹಣ್ಣಿನ ಬರ್ಫಿ ಮಾಡಲು ಬೇಕಾಗುವ ಸಾಮಗ್ರಿಗಳು

* ಮೂರರಿಂದ ನಾಲ್ಕು ಬಾಳೆಹಣ್ಣು

* ಬೆಲ್ಲ

* ಕಾಲು ಕಪ್ ರವ

* ಕಾಲು ಕಪ್ ಗೋಧಿ ಹಿಟ್ಟು

* ಏಲಕ್ಕಿ ಪುಡಿ

* ತುಪ್ಪ

* ಗೋಡಂಬಿ ಬಾದಾಮಿ

* ನೀರು

ಬಾಳೆಹಣ್ಣಿನ ಬರ್ಫಿ ಮಾಡುವ ವಿಧಾನ

* ಬಾಳೆಹಣ್ಣು ಬರ್ಫಿ ಮಾಡಲು ಬಾಳೆಹಣ್ಣನ್ನು ಕತ್ತರಿಸಿ ನುಣ್ಣಗೆ ರುಬ್ಬಿಕೊಳ್ಳಿ

* ತದನಂತರದಲ್ಲಿ ಒಂದು ಬಾಣಲೆಗೆ ಬೆಲ್ಲ ಹಾಕಿ ಅದರ ಅರ್ಧದಷ್ಟು ನೀರು ಹಾಕಿ ಪಾಕ ಮಾಡಿಟ್ಟುಕೊಳ್ಳಿ.

* ಆ ಬಳಿಕ ಇನ್ನೊಂದು ಬಾಣಲೆಗೆ ತುಪ್ಪ ಹಾಕಿ ಬಿಸಿಯಾಗುತ್ತಿದ್ದಂತೆ ಗೋಧಿ ಹಿಟ್ಟು ಹಾಗೂ ರವಾ ಹಾಕಿ ಮಧ್ಯಮ ಹುರಿಯಲ್ಲಿ ಉರಿದುಕೊಳ್ಳಿ.

* ಈಗಾಗಲೇ ರುಬ್ಬಿಟ್ಟ ಬಾಳೆಹಣ್ಣಿನ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.

* ನಂತರದಲ್ಲಿ ಪಾಕ ಮಾಡಿಕೊಂಡ ಬೆಲ್ಲ ಹಾಕಿ ಮಧ್ಯಮ ಹುರಿಯಲ್ಲಿ ಚೆನ್ನಾಗಿ ಬೇಯಿಸಿಕೊಳ್ಳಿ. ಇದಕ್ಕೆ ಏಲಕ್ಕಿ ಪುಡಿ ಹಾಗೂ ಬೇಕಿದ್ದರೆ ತುಪ್ಪ ಸೇರಿಸಿಕೊಳ್ಳಿ.

* ಮಿಶ್ರಣವು ಗಟ್ಟಿಯಾಗುತ್ತಿದ್ದಂತೆ ಕತ್ತರಿಸಿಟ್ಟ ಗೋಡಂಬಿ ಹಾಗೂ ಬಾದಾಮಿಯನ್ನು ಸೇರಿಸಿಕೊಳ್ಳಿ.

* ಒಂದು ತಟ್ಟೆಗೆ ತುಪ್ಪ ಸವರಿ ಈ ಮಿಶ್ರಣವನ್ನು ಹಾಕಿಕೊಳ್ಳಿ. ಇದನ್ನು ಬೇಕಾದ ಆಕಾರದಲ್ಲಿ ಕತ್ತರಿಸಿ ಎರಡು ಗಂಟೆಗಳ ಕಾಲ ಇಟ್ಟರೆ ಬಾಳೆಹಣ್ಣಿನ ಬರ್ಫಿ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Mon, 7 October 24

ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ