AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri 2024:.ನವರಾತ್ರಿಗೆ ಆರನೇ ದಿನ ಬಾಳೆಹಣ್ಣಿನ ಬರ್ಫಿ ಮಾಡಿ ದೇವಿಗೆ ನೈವೇದ್ಯ ಅರ್ಪಿಸಿ, ಇಲ್ಲಿದೆ ಪಾಕವಿಧಾನ

ನವರಾತ್ರಿಗೆ ಬಂತೆಂದರೆ ಸಾಕು, ಒಂಬತ್ತು ದಿನಗಳ ವಿಶೇಷ ಅಡುಗೆಗಳನ್ನು ಮಾಡಿ ದೇವರಿಗೆ ನೈವೇದ್ಯವಾಗಿ ಇಡಲಾಗುತ್ತದೆ. ಆದರೆ ಅಡುಗೆ ರುಚಿಯ ಜೊತೆಗೆ ಮಾಡಲು ಸುಲಭವಾಗಿದ್ದರೆ ಎಲ್ಲರು ಅಂತಹ ಅಡುಗೆಯನ್ನು ಮಾಡಬಯಸುತ್ತಾರೆ. ಮನೆಯಲ್ಲಿ ಸುಲಭವಾಗಿ ಬಾಳೆಹಣ್ಣಿನ ಬರ್ಫಿ ಮಾಡಿ ದೇವಿಗೆ ನೈವೇದ್ಯವಾಗಿ ಇಡಬಹುದಾಗಿದ್ದು, ಈ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Navaratri 2024:.ನವರಾತ್ರಿಗೆ ಆರನೇ ದಿನ ಬಾಳೆಹಣ್ಣಿನ ಬರ್ಫಿ ಮಾಡಿ ದೇವಿಗೆ ನೈವೇದ್ಯ ಅರ್ಪಿಸಿ, ಇಲ್ಲಿದೆ ಪಾಕವಿಧಾನ
ಬಾಳೆಹಣ್ಣಿನ ಬರ್ಫಿ
ಸಾಯಿನಂದಾ
| Edited By: |

Updated on:Oct 07, 2024 | 6:27 PM

Share

ನವರಾತ್ರಿಯು ದುರ್ಗಾ ದೇವಿಯ ಆರಾಧನೆ ಸಮಯ. ಹಿಂದೂ ಧರ್ಮದಲ್ಲಿ ನವರಾತ್ರಿಯನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಶಾರದೀಯ ನವರಾತ್ರಿಯು ಅಶ್ವಿನಿ ಮಾಸದ ಶುಕ್ಲ ಪಕ್ಷದ ಪ್ರತಿಪದ ದಿನಾಂಕದಿಂದ ಪ್ರಾರಂಭವಾಗುತ್ತದೆ. ಈ ಬಾರಿ ಅಕ್ಟೋಬರ್ 3 ರಿಂದ 12 ರವರೆಗೆ ಒಂಬತ್ತು ದಿನಗಳ ಕಾಲ ದೇವಿಯನ್ನು ಆರಾಧಿಸಲಾಗುತ್ತದೆ. ಈ ಒಂಬತ್ತು ದಿನಗಳ ಉತ್ಸವದಲ್ಲಿ, ದುರ್ಗೆಗೆ ಬಗೆಬಗೆ ಖಾದ್ಯಗಳನ್ನು ನೈವೇದ್ಯದ ರೂಪದಲ್ಲಿ ನೀಡಲಾಗುತ್ತದೆ. ಆರನೇ ದಿನದಂದು ದೇವಿಗೆ ಬಾಳೆಹಣ್ಣಿನ ಬರ್ಫಿಯನ್ನು ನೈವೇದ್ಯವಾಗಿ ಅರ್ಪಿಸಬಹುದಾಗಿದೆ.

ಬಾಳೆಹಣ್ಣಿನ ಬರ್ಫಿ ಮಾಡಲು ಬೇಕಾಗುವ ಸಾಮಗ್ರಿಗಳು

* ಮೂರರಿಂದ ನಾಲ್ಕು ಬಾಳೆಹಣ್ಣು

* ಬೆಲ್ಲ

* ಕಾಲು ಕಪ್ ರವ

* ಕಾಲು ಕಪ್ ಗೋಧಿ ಹಿಟ್ಟು

* ಏಲಕ್ಕಿ ಪುಡಿ

* ತುಪ್ಪ

* ಗೋಡಂಬಿ ಬಾದಾಮಿ

* ನೀರು

ಬಾಳೆಹಣ್ಣಿನ ಬರ್ಫಿ ಮಾಡುವ ವಿಧಾನ

* ಬಾಳೆಹಣ್ಣು ಬರ್ಫಿ ಮಾಡಲು ಬಾಳೆಹಣ್ಣನ್ನು ಕತ್ತರಿಸಿ ನುಣ್ಣಗೆ ರುಬ್ಬಿಕೊಳ್ಳಿ

* ತದನಂತರದಲ್ಲಿ ಒಂದು ಬಾಣಲೆಗೆ ಬೆಲ್ಲ ಹಾಕಿ ಅದರ ಅರ್ಧದಷ್ಟು ನೀರು ಹಾಕಿ ಪಾಕ ಮಾಡಿಟ್ಟುಕೊಳ್ಳಿ.

* ಆ ಬಳಿಕ ಇನ್ನೊಂದು ಬಾಣಲೆಗೆ ತುಪ್ಪ ಹಾಕಿ ಬಿಸಿಯಾಗುತ್ತಿದ್ದಂತೆ ಗೋಧಿ ಹಿಟ್ಟು ಹಾಗೂ ರವಾ ಹಾಕಿ ಮಧ್ಯಮ ಹುರಿಯಲ್ಲಿ ಉರಿದುಕೊಳ್ಳಿ.

* ಈಗಾಗಲೇ ರುಬ್ಬಿಟ್ಟ ಬಾಳೆಹಣ್ಣಿನ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.

* ನಂತರದಲ್ಲಿ ಪಾಕ ಮಾಡಿಕೊಂಡ ಬೆಲ್ಲ ಹಾಕಿ ಮಧ್ಯಮ ಹುರಿಯಲ್ಲಿ ಚೆನ್ನಾಗಿ ಬೇಯಿಸಿಕೊಳ್ಳಿ. ಇದಕ್ಕೆ ಏಲಕ್ಕಿ ಪುಡಿ ಹಾಗೂ ಬೇಕಿದ್ದರೆ ತುಪ್ಪ ಸೇರಿಸಿಕೊಳ್ಳಿ.

* ಮಿಶ್ರಣವು ಗಟ್ಟಿಯಾಗುತ್ತಿದ್ದಂತೆ ಕತ್ತರಿಸಿಟ್ಟ ಗೋಡಂಬಿ ಹಾಗೂ ಬಾದಾಮಿಯನ್ನು ಸೇರಿಸಿಕೊಳ್ಳಿ.

* ಒಂದು ತಟ್ಟೆಗೆ ತುಪ್ಪ ಸವರಿ ಈ ಮಿಶ್ರಣವನ್ನು ಹಾಕಿಕೊಳ್ಳಿ. ಇದನ್ನು ಬೇಕಾದ ಆಕಾರದಲ್ಲಿ ಕತ್ತರಿಸಿ ಎರಡು ಗಂಟೆಗಳ ಕಾಲ ಇಟ್ಟರೆ ಬಾಳೆಹಣ್ಣಿನ ಬರ್ಫಿ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Mon, 7 October 24

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ