Navaratri 2024: ನವರಾತ್ರಿ ಮೂರನೇ ದಿನ ರವಾ ಕೇಸರಿ ತಯಾರಿಸಿ ದೇವಿಗೆ ನೈವೇದ್ಯ ಅರ್ಪಿಸಿ, ಇಲ್ಲಿದೆ ರೆಸಿಪಿ

ನವರಾತ್ರಿ ಹಬ್ಬವು ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು, ನಿನ್ನೆಯಿಂದ ಹಬ್ಬದ ಸಂಭ್ರಮವು ಆರಂಭವಾಗಿದೆ. ಈ ದಿನಗಳಲ್ಲಿ ಪ್ರತಿಯೊಬ್ಬರು ದುರ್ಗಾ ದೇವಿಯ ಒಂಬತ್ತು ವಿಭಿನ್ನ ರೂಪವನ್ನು ಪೂಜಿಸುತ್ತಾರೆ. ನವರಾತ್ರಿಯ ಮೂರನೇ ದಿನ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತದೆ. ಈ ವಿಶೇಷ ದಿನದಂದು ದೇವಿಗೆ ರವಾ ಕೇಸರಿಯನ್ನು ನೈವೇದ್ಯವಾಗಿ ಇಡಬಹುದು. ಹಾಗಾದ್ರೆ ರುಚಿಕರವಾದ ರವಾ ಕೇಸರಿಯನ್ನು ಐದೇ ಐದು ನಿಮಿಷದಲ್ಲಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Navaratri 2024: ನವರಾತ್ರಿ ಮೂರನೇ ದಿನ ರವಾ ಕೇಸರಿ ತಯಾರಿಸಿ ದೇವಿಗೆ ನೈವೇದ್ಯ ಅರ್ಪಿಸಿ, ಇಲ್ಲಿದೆ ರೆಸಿಪಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 04, 2024 | 5:40 PM

ಹಬ್ಬ ಬಂತೆಂದರೆ ಸಾಕು, ಸಡಗರ ಸಂಭ್ರಮವು ಜೋರಾಗಿಯೇ ಇರುತ್ತದೆ. ಆದರೆ ನವರಾತ್ರಿಯ ಹಬ್ಬವು ಒಂಬತ್ತು ದಿನಗಳ ಕಾಲ ನಡೆಯುತ್ತದೆ. ಈ ಬಾರಿ ಅಕ್ಟೋಬರ್ 3 ರಿಂದ ನವರಾತ್ರಿ ಸಡಗರವು ಆರಂಭವಾಗಿದ್ದು, ಒಂಬತ್ತು ದಿನಗಳಲ್ಲಿ ದುರ್ಗಾ ದೇವಿಯ ಒಂಬತ್ತು ವಿಭಿನ್ನ ರೂಪಗಳನ್ನು ಪೂಜಿಸಲಾಗುತ್ತದೆ. ಈ ಒಂಬತ್ತು ದಿನಗಳ ಕಾಲ ದುರ್ಗೆಗೆ ವಿವಿಧ ಬಗೆಯ ಖಾದ್ಯಗಳನ್ನು ನೈವೇದ್ಯದ ರೂಪದಲ್ಲಿ ನೀಡಲಾಗುತ್ತದೆ. ಹೀಗಾಗಿ ಮೂರನೇ ದಿನ ದೇವಿಗೆ ರವಾ ಕೇಸರಿಯನ್ನು ನೈವೇದ್ಯವಾಗಿ ಇಡಬಹುದು. ಈ ಸಿಹಿ ಪದಾರ್ಥಗಳಲ್ಲಿ ಕೇಸರಿಬಾತ್ ಮಾಡುವುದು ಸರಳ, ಆದರೆ ಮಾಡುವ ವಿಧಾನ ತಪ್ಪಿದರೆ ಅದರ ರುಚಿಯಲ್ಲಿ ವ್ಯತ್ಯಾಸವಾಗುತ್ತದೆ.

ರವಾ ಕೇಸರಿಬಾತ್ ಮಾಡಲು ಬೇಕಾಗುವ ಸಾಮಗ್ರಿಗಳು

* ಸಣ್ಣರವೆ

* ತುಪ್ಪ

* ಸನ್‌ಫ್ಲವರ್ ಆಯಿಲ್

* ಎರಡು ಕಪ್ ಸಕ್ಕರೆ

* ಗೋಡಂಬಿ

* ಸ್ವಲ್ಪ ಒಣದ್ರಾಕ್ಷಿ

* ಸ್ವಲ್ಪ ಕೇಸರಿ ಬಣ್ಣ

* ಏಲಕ್ಕಿ ಪುಡಿ

* ರುಚಿಗೆ ತಕ್ಕಷ್ಟು ಉಪ್ಪು

ರವಾ ಕೇಸರಿ ಬಾತ್ ತಯಾರಿಸುವ ವಿಧಾನ

* ಮೊದಲು ಬಾಣಲೆಯನ್ನು ಒಲೆಯ ಮೇಲಿಟ್ಟು ಅದಕ್ಕೆ ತುಪ್ಪ ಹಾಕಿ, ತುಪ್ಪ ಕಾದ ಮೇಲೆ ಗೋಡಂಬಿ, ಒಣದ್ರಾಕ್ಷಿಯನ್ನು ಹಾಕಿ ಕೈಯಾಡಿಸಿಕೊಂಡು ಪಕ್ಕಕ್ಕೆ ಇಟ್ಟುಕೊಳ್ಳಿ.

* ಆ ಬಳಿಕ ಮತ್ತೊಂದು ಬಾಣಲೆಗೆ ತುಪ್ಪ ಹಾಗೂ ಎಣ್ಣೆ ಹಾಕಿ ಕಾಯುತ್ತಿದ್ದಂತೆ ರವೆಯನ್ನು ಹಾಕಿ ಕಂದು ಬಣ್ಣ ಬರುವವರೆಗೆ ಹುರಿದುಕೊಳ್ಳಿ.

* ಆ ಬಳಿಕ ಅಗತ್ಯವಿರುವಷ್ಟು ನೀರು ಸೇರಿಸಿ ಗಂಟಾಗದಂತೆ ಕೈಯಾಡಿಸಿಕೊಳ್ಳಿ. ಇದಕ್ಕೆ ಕೇಸರಿ ಬಣ್ಣ, ಏಲಕ್ಕಿ ಪುಡಿ, ಸಕ್ಕರೆ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಐದು ನಿಮಿಷಗಳ ಕಾಲ ಬೇಯಲು ಬಿಡಿ.

* ಕೊನೆಗೆ ಫ್ರೈ ಮಾಡಿಟ್ಟ ಗೋಡಂಬಿ ದ್ರಾಕ್ಷಿ ಹಾಕಿದರೆ ರುಚಿಕರವಾದ ರವಾ ಕೇಸರಿ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ