AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri 2024: ಹಬ್ಬಕ್ಕೆ ಮನೆಯಲ್ಲಿಯೇ ತಯಾರಿಸಿ ಸಾಂಪ್ರದಾಯಿಕ ಖಾದ್ಯ ಎರಿಯಪ್ಪ, ಇಲ್ಲಿದೆ ಪಾಕವಿಧಾನ

ಹಬ್ಬ ಹರಿದಿನಗಳಲ್ಲಿ ಸಿಹಿ ತಿನಿಸುಗಳು ಇಲ್ಲದೇ ಹೋದರೆ ಯಾವುದೇ ಹಬ್ಬವು ಪೂರ್ಣವಾಗುವುದೆ ಇಲ್ಲ. ಈ ನವರಾತ್ರಿ ಹಬ್ಬ ಬಂತೆಂದರೆ ಸಾಕು, ವಿವಿಧ ಸಿಹಿ ತಿಂಡಿಗಳನ್ನು ಮನೆಯಲ್ಲೇ ತಯಾರಿಸುತ್ತಾರೆ. ಒಂಬತ್ತು ದಿನಗಳ ಕಾಲ ಮನೆಯಲ್ಲೇ ವಿವಿಧ ಸಿಹಿ ಖಾದ್ಯಗಳನ್ನು ಮಾಡಿ ದೇವಿಗೆ ನೈವೇದ್ಯ ಅರ್ಪಿಸಲಾಗುತ್ತದೆ. ಈ ಬಾರಿಯ ನವರಾತ್ರಿಯ ಹಬ್ಬಕ್ಕೆ ಮನೆಯಲ್ಲಿಯೇ ಸಾಂಪ್ರದಾಯಿಕ ಸಿಹಿ ತಿನಿಸು ಎರಿಯಪ್ಪ ತಯಾರಿಸಿ ನೈವೇದ್ಯವಾಗಿ ಇಡಬಹುದು. ಹಾಗಾದ್ರೆ ಎರಿಯಪ್ಪ ರೆಸಿಪಿಯ ಪಾಕವಿಧಾನದ ಬಗೆಗಿನ ಮಾಹಿತಿ ಇಲ್ಲಿದೆ.

Navaratri 2024: ಹಬ್ಬಕ್ಕೆ ಮನೆಯಲ್ಲಿಯೇ ತಯಾರಿಸಿ ಸಾಂಪ್ರದಾಯಿಕ ಖಾದ್ಯ ಎರಿಯಪ್ಪ, ಇಲ್ಲಿದೆ ಪಾಕವಿಧಾನ
ಸಾಯಿನಂದಾ
| Edited By: |

Updated on: Oct 02, 2024 | 3:56 PM

Share

ನವರಾತ್ರಿ ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದು. ಹೀಗಾಗಿ ಭಾರತದಲ್ಲಿ ಈ ಹಬ್ಬವನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ. ಈ ಬಾರಿ ಶಾರದೀಯ ನವರಾತ್ರಿ ಅಕ್ಟೋಬರ್ 3 ರಿಂದ ಪ್ರಾರಂಭವಾಗುತ್ತಿದ್ದು, ದೇವಿಯ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ. ಈ ಒಂಬತ್ತು ದಿನಗಳ ಕಾಲ ದೇವಿಗೆ ಒಂಬತ್ತು ರೀತಿಯ ನೈವೇದ್ಯವನ್ನು ಅರ್ಪಿಸಲಾಗುತ್ತದೆ. ಈ ಬಾರಿಯ ನವರಾತ್ರಿಗೆ ದೇವಿಗೆ ಸಾಂಪ್ರದಾಯಿಕ ಸಿಹಿತಿನಿಸುಗಳಲ್ಲಿ ಒಂದಾದ ಎರಿಯಪ್ಪ ಮಾಡಿ ನೈವೇದ್ಯವಿಡಬಹುದು. ಈ ರೆಸಿಪಿ ಮಾಡುವ ವಿಧಾನವು ಸರಳವಾಗಿದ್ದು, ಕೆಲವೇ ಕೆಲವು ಐಟಂಗಳಿದ್ದರೆ ಸಾಕು.

ಎರಿಯಪ್ಪ ಮಾಡಲು ಬೇಕಾಗುವ ಸಾಮಗ್ರಿಗಳು

* ಒಂದು ಕಪ್ ಅಕ್ಕಿ

* ಅರ್ಧ ಕಪ್ ತೆಂಗಿನ ಕಾಯಿತುರಿ

* ಒಂದು ಕಪ್ ಬೆಲ್ಲದ ಪುಡಿ

* ರುಚಿಗೆ ತಕ್ಕಷ್ಟು ಉಪ್ಪು

* ಒಂದು ಚಮಚ ಗಸಗಸೆ

* ಅರ್ಧ ಚಮಚ ಏಲಕ್ಕಿ ಪುಡಿ

* ನೀರು

* ಎಣ್ಣೆ

ಎರಿಯಪ್ಪ ತಯಾರಿಸುವ ವಿಧಾನ

* ಅಕ್ಕಿಯನ್ನು ನಾಲ್ಕರಿಂದ ಐದು ಗಂಟೆಗಳ ಕಾಲ ನೆನೆ ಹಾಕಿಕೊಳ್ಳಬೇಕು.

* ನಂತರ ಅಕ್ಕಿ ತೊಳೆದು ಮಿಕ್ಸಿಯಲ್ಲಿ ಹಾಕಿ. ಅದಕ್ಕೆ ತೆಂಗಿನತುರಿ, ಬೆಲ್ಲದ ಪುಡಿ, ಉಪ್ಪು ಮತ್ತು ಅರ್ಧ ಕಪ್ ನೀರನ್ನು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ.

* ರುಬ್ಬಿದ ಮಿಶ್ರಣ ದೋಸೆ ಹಿಟ್ಟಿನ ಹದಕ್ಕೆ ಇರಲಿ. ಈ ಹಿಟ್ಟಿಗೆ ಗಸಗಸೆ ಮತ್ತು ಏಲಕ್ಕಿ ಪುಡಿಯನ್ನು ಸೇರಿಸಿ ಮಿಶ್ರಣ ಮಾಡಿಕೊಳ್ಳಿ.

* ಬಾಣಲೆಯಲ್ಲಿ ಸ್ಟವ್ ಮೇಲೆ ಇಟ್ಟು ಎಣ್ಣೆಯನ್ನು ಬಿಸಿ ಮಾಡಿಕೊಳ್ಳಿ. ಎಣ್ಣೆ ಕಾಯುತ್ತಿದ್ದಂತೆ ಚಿಕ್ಕ ಸೌಟಿನಲ್ಲಿ ಒಂದು ಸೌಟು ಹಿಟ್ಟನ್ನು ಹಾಕಿ.

* ಎರಡೂ ಬದಿಯನ್ನೂ ಕೆಂಬಣ್ಣ ಬರುವಂತೆ ಕರಿದರೆ ರುಚಿಕರವಾದ ಎರಿಯಪ್ಪ ಸವಿಯಲು ಸಿದ್ದ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ