AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri 2024: ಹಬ್ಬಕ್ಕೆ ಮನೆಯಲ್ಲಿಯೇ ತಯಾರಿಸಿ ಸಾಂಪ್ರದಾಯಿಕ ಖಾದ್ಯ ಎರಿಯಪ್ಪ, ಇಲ್ಲಿದೆ ಪಾಕವಿಧಾನ

ಹಬ್ಬ ಹರಿದಿನಗಳಲ್ಲಿ ಸಿಹಿ ತಿನಿಸುಗಳು ಇಲ್ಲದೇ ಹೋದರೆ ಯಾವುದೇ ಹಬ್ಬವು ಪೂರ್ಣವಾಗುವುದೆ ಇಲ್ಲ. ಈ ನವರಾತ್ರಿ ಹಬ್ಬ ಬಂತೆಂದರೆ ಸಾಕು, ವಿವಿಧ ಸಿಹಿ ತಿಂಡಿಗಳನ್ನು ಮನೆಯಲ್ಲೇ ತಯಾರಿಸುತ್ತಾರೆ. ಒಂಬತ್ತು ದಿನಗಳ ಕಾಲ ಮನೆಯಲ್ಲೇ ವಿವಿಧ ಸಿಹಿ ಖಾದ್ಯಗಳನ್ನು ಮಾಡಿ ದೇವಿಗೆ ನೈವೇದ್ಯ ಅರ್ಪಿಸಲಾಗುತ್ತದೆ. ಈ ಬಾರಿಯ ನವರಾತ್ರಿಯ ಹಬ್ಬಕ್ಕೆ ಮನೆಯಲ್ಲಿಯೇ ಸಾಂಪ್ರದಾಯಿಕ ಸಿಹಿ ತಿನಿಸು ಎರಿಯಪ್ಪ ತಯಾರಿಸಿ ನೈವೇದ್ಯವಾಗಿ ಇಡಬಹುದು. ಹಾಗಾದ್ರೆ ಎರಿಯಪ್ಪ ರೆಸಿಪಿಯ ಪಾಕವಿಧಾನದ ಬಗೆಗಿನ ಮಾಹಿತಿ ಇಲ್ಲಿದೆ.

Navaratri 2024: ಹಬ್ಬಕ್ಕೆ ಮನೆಯಲ್ಲಿಯೇ ತಯಾರಿಸಿ ಸಾಂಪ್ರದಾಯಿಕ ಖಾದ್ಯ ಎರಿಯಪ್ಪ, ಇಲ್ಲಿದೆ ಪಾಕವಿಧಾನ
ಸಾಯಿನಂದಾ
| Edited By: |

Updated on: Oct 02, 2024 | 3:56 PM

Share

ನವರಾತ್ರಿ ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದು. ಹೀಗಾಗಿ ಭಾರತದಲ್ಲಿ ಈ ಹಬ್ಬವನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ. ಈ ಬಾರಿ ಶಾರದೀಯ ನವರಾತ್ರಿ ಅಕ್ಟೋಬರ್ 3 ರಿಂದ ಪ್ರಾರಂಭವಾಗುತ್ತಿದ್ದು, ದೇವಿಯ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ. ಈ ಒಂಬತ್ತು ದಿನಗಳ ಕಾಲ ದೇವಿಗೆ ಒಂಬತ್ತು ರೀತಿಯ ನೈವೇದ್ಯವನ್ನು ಅರ್ಪಿಸಲಾಗುತ್ತದೆ. ಈ ಬಾರಿಯ ನವರಾತ್ರಿಗೆ ದೇವಿಗೆ ಸಾಂಪ್ರದಾಯಿಕ ಸಿಹಿತಿನಿಸುಗಳಲ್ಲಿ ಒಂದಾದ ಎರಿಯಪ್ಪ ಮಾಡಿ ನೈವೇದ್ಯವಿಡಬಹುದು. ಈ ರೆಸಿಪಿ ಮಾಡುವ ವಿಧಾನವು ಸರಳವಾಗಿದ್ದು, ಕೆಲವೇ ಕೆಲವು ಐಟಂಗಳಿದ್ದರೆ ಸಾಕು.

ಎರಿಯಪ್ಪ ಮಾಡಲು ಬೇಕಾಗುವ ಸಾಮಗ್ರಿಗಳು

* ಒಂದು ಕಪ್ ಅಕ್ಕಿ

* ಅರ್ಧ ಕಪ್ ತೆಂಗಿನ ಕಾಯಿತುರಿ

* ಒಂದು ಕಪ್ ಬೆಲ್ಲದ ಪುಡಿ

* ರುಚಿಗೆ ತಕ್ಕಷ್ಟು ಉಪ್ಪು

* ಒಂದು ಚಮಚ ಗಸಗಸೆ

* ಅರ್ಧ ಚಮಚ ಏಲಕ್ಕಿ ಪುಡಿ

* ನೀರು

* ಎಣ್ಣೆ

ಎರಿಯಪ್ಪ ತಯಾರಿಸುವ ವಿಧಾನ

* ಅಕ್ಕಿಯನ್ನು ನಾಲ್ಕರಿಂದ ಐದು ಗಂಟೆಗಳ ಕಾಲ ನೆನೆ ಹಾಕಿಕೊಳ್ಳಬೇಕು.

* ನಂತರ ಅಕ್ಕಿ ತೊಳೆದು ಮಿಕ್ಸಿಯಲ್ಲಿ ಹಾಕಿ. ಅದಕ್ಕೆ ತೆಂಗಿನತುರಿ, ಬೆಲ್ಲದ ಪುಡಿ, ಉಪ್ಪು ಮತ್ತು ಅರ್ಧ ಕಪ್ ನೀರನ್ನು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ.

* ರುಬ್ಬಿದ ಮಿಶ್ರಣ ದೋಸೆ ಹಿಟ್ಟಿನ ಹದಕ್ಕೆ ಇರಲಿ. ಈ ಹಿಟ್ಟಿಗೆ ಗಸಗಸೆ ಮತ್ತು ಏಲಕ್ಕಿ ಪುಡಿಯನ್ನು ಸೇರಿಸಿ ಮಿಶ್ರಣ ಮಾಡಿಕೊಳ್ಳಿ.

* ಬಾಣಲೆಯಲ್ಲಿ ಸ್ಟವ್ ಮೇಲೆ ಇಟ್ಟು ಎಣ್ಣೆಯನ್ನು ಬಿಸಿ ಮಾಡಿಕೊಳ್ಳಿ. ಎಣ್ಣೆ ಕಾಯುತ್ತಿದ್ದಂತೆ ಚಿಕ್ಕ ಸೌಟಿನಲ್ಲಿ ಒಂದು ಸೌಟು ಹಿಟ್ಟನ್ನು ಹಾಕಿ.

* ಎರಡೂ ಬದಿಯನ್ನೂ ಕೆಂಬಣ್ಣ ಬರುವಂತೆ ಕರಿದರೆ ರುಚಿಕರವಾದ ಎರಿಯಪ್ಪ ಸವಿಯಲು ಸಿದ್ದ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ