AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri 2025: ನವಜೋಡಿಗೆ ಉಡುಗೊರೆಯಾಗಿ ನೀಡಲಾಗುತ್ತೆ ಈ ಪಟ್ಟದ ಗೊಂಬೆ, ಇಲ್ಲಿದೆ ವಿಶೇಷತೆ

ನವರಾತ್ರಿ ಹಬ್ಬದ ಸಂಭ್ರಮವು ಜೋರಾಗಿದೆ, ಕೆಲವರ ಮನೆಯಲ್ಲಿ ವಿಭಿನ್ನ ಆಕರ್ಷಕ ಗೊಂಬೆಗಳನ್ನು ಕೂರಿಸಲಾಗಿದೆ. ಇದೊಂದು ಸಂಪ್ರದಾಯಿಕ ಆಚರಣೆಯಾಗಿದ್ದು, ಇದರಲ್ಲಿ ಪಟ್ಟದ ಗೊಂಬೆ ತುಂಬಾನೇ ವಿಶೇಷ. ಹೊಸದಾಗಿ ಮದುವೆಯಾದ ಜೋಡಿಗೆ ಈ ಗೊಂಬೆಯನ್ನು ಉಡುಗೊರೆಯಾಗಿ ನೀಡುವ ಸಂಪ್ರದಾಯವು ಇದೆ. ಹಾಗಾದ್ರೆ ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Navaratri 2025: ನವಜೋಡಿಗೆ ಉಡುಗೊರೆಯಾಗಿ ನೀಡಲಾಗುತ್ತೆ ಈ ಪಟ್ಟದ ಗೊಂಬೆ, ಇಲ್ಲಿದೆ ವಿಶೇಷತೆ
ಪಟ್ಟದ ಗೊಂಬೆ
ಸಾಯಿನಂದಾ
|

Updated on: Sep 27, 2025 | 6:54 PM

Share

ದಸರಾ (Dasara) ಎಂದರೆ ಮೊದಲು ನೆನಪಿಗೆ ಬರುವುದೇ ಈ ಗೊಂಬೆಗಳು. ಸಿಂಗರಿಸಿಟ್ಟ ಬಣ್ಣ ಬಣ್ಣದ ಸಾಲು ಬೊಂಬೆಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ನವರಾತ್ರಿಯ (Navaratri) ಸಂದರ್ಭದಲ್ಲಿ ಪುರಾಣದ ಕಥೆಯನ್ನು ಹೇಳುವ ಈ ಗೊಂಬೆಗಳನ್ನು ತಮ್ಮ ಮನೆಯಲ್ಲಿ ಕೂರಿಸಿ ಪೂಜೆ ಸಲ್ಲಿಸಲಾಗುತ್ತದೆ.  ರಾಮಾಯಣ, ಮಹಾಭಾರತ ಕಥೆಗಳು, ಹಳ್ಳಿ ಜೀವನ, ಗಣಪತಿ, ದೇವರ ಪ್ರತಿಮೆಗಳು ಹೀಗೆ ವಿವಿಧ ಕಥೆಗಳನ್ನು ಸಾರುವ ಗೊಂಬೆಗಳನ್ನು ಒಳಗೊಂಡಿರುತ್ತವೆ. ಅದರಲ್ಲೂ ಪಟ್ಟದ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರುತ್ತದೆ. ಹಾಗಾದ್ರೆ ಈ ಪಟ್ಟದ ಗೊಂಬೆಗಳ ವಿಶೇಷತೆಗಳೇನು? ನವಜೋಡಿಗೆ ಈ ಗೊಂಬೆಯನ್ನು ಉಡುಗೊರೆಯಾಗಿ ನೀಡುವುದು ಏಕೆ? ಈ ಬಗ್ಗೆ ನೀವು ತಿಳಿದುಕೊಳ್ಳಿ.

ಪಟ್ಟದ ಗೊಂಬೆಯ ವಿಶೇಷ

ದಸರಾದ ವೇಳೆ ತಮ್ಮ ಮನೆಯಲ್ಲಿ ಕೂರಿಸುವ ಗೊಂಬೆಗಳಲ್ಲಿ ಈ ಪಟ್ಟದ ಗೊಂಬೆಗಳಿಗೆ ಹೆಚ್ಚು ಪ್ರಾಮುಖ್ಯತೆ, ಅಲಂಕಾರ ಮತ್ತು ಗೌರವವನ್ನು ನೀಡಲಾಗುತ್ತದೆ. ಈ ಪಟ್ಟದ ಗೊಂಬೆಗಳನ್ನು ಶ್ರೀನಿವಾಸ-ಪದ್ಮಾವತಿ ಅಥವಾ ಶಿವ-ಪಾರ್ವತಿಯಂತಹ ದೇವತಾ ಸ್ವರೂಪಗಳಾಗಿ ಪೂಜಿಸುವುದು ವಿಶೇಷ.ಮುಖ್ಯವೆಂದು ಪರಿಗಣಿಸಲಾಗುವ ಈ ಪಟ್ಟದ ಗೊಂಬೆಗಳು ಗಂಡು ಹೆಣ್ಣನ್ನು ಪ್ರತಿನಿಧಿಸುತ್ತದೆ.

ಇದನ್ನೂ ಓದಿ: Navaratri 2025: ಮೈಸೂರು ದಸರಾಕ್ಕಿಂತ ಕುಡ್ಲದ ದಸರಾ ಭಿನ್ನ; ಶಾರದಾ ದೇವಿಯ ವಿಗ್ರಹವೇ ಪ್ರಮುಖ ಆಕರ್ಷಣೆ

ಇದನ್ನೂ ಓದಿ
Image
ಮಧುಮೇಹಿಗಳೇ... ನವರಾತ್ರಿ ಹಬ್ಬದ ನಿಮ್ಮ ಉಪವಾಸ ಈ ರೀತಿ ಇರಲಿ
Image
ಮೈಸೂರು ದಸರಾಕ್ಕಿಂತ ಕುಡ್ಲದ ದಸರಾ ವಿಭಿನ್ನ, ಆಕರ್ಷಣೆ
Image
ನವರಾತ್ರಿಯ ಮೊದಲ ದಿನ ದೇವಿಗೆ ನೈವೇದ್ಯವಾಗಿ ಮಖಾನಾ ಪಾಯಸ ಅರ್ಪಿಸಿ
Image
ನವರಾತ್ರಿಯ 9 ದಿನ ಈ ನವ ವರ್ಣದ ಬಟ್ಟೆಗಳನ್ನು ಧರಿಸಿದರೆ ಶುಭವಂತೆ

ಪಟ್ಟದ ಗೊಂಬೆ ನೀಡುವುದರ ಹಿಂದಿದೆ ಈ ಕಾರಣ

ಪಟ್ಟದ ಗೊಂಬೆಗಳು ವಿವಾಹವಾದ ಗಂಡು ಹೆಣ್ಣಿನ ಜೋಡಿಯಾಗಿದೆ. ಕೆಲವು ಕಡೆಗಳಲ್ಲಿ ಈ ಗೊಂಬೆಯನ್ನು ಮದುವೆಯ ಸಂಪ್ರದಾಯದ ವೇಳೆ ಮಗಳಿಗೆ ನೀಡುವ ಸಂಪ್ರದಾಯವು ತಲೆಮಾರುಗಳಿಂದಲೂ ಬಂದಿದೆ. ಹೌದು, ಮಗಳು ಮದುವೆಯಾದಾಗ ಪೋಷಕರು ಸಂಪ್ರದಾಯದಂತೆ ಒಂದು ಜೊತೆ ಪಟ್ಟದ ಗೊಂಬೆಗಳನ್ನು ನವಜೋಡಿಗೆ ನೀಡುತ್ತಾರೆ. ಇದು ಹೊಸ ಕುಟುಂಬ ಪ್ರಾರಂಭಿಸಲು ಮತ್ತು ಗೊಂಬೆ ಹಬ್ಬದ ಸಂಪ್ರದಾಯವನ್ನು ಮುಂದುವರಿಸಲು ಹೇಳುವುದರ ಸಂಕೇತ ಎನ್ನಲಾಗಿದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ