AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oats Idli : ಮಲ್ಲಿಗೆಯಂತೆ ಮೃದುವಾದ ಓಟ್ಸ್ ಇಡ್ಲಿ ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ

ದಕ್ಷಿಣ ಭಾರತದ ನೆಚ್ಚಿನ ಉಪಾಹಾರಗಳಲ್ಲಿ ಇಡ್ಲಿ ಕೂಡ ಒಂದು. ಬಿಸಿ ಬಿಸಿಯಾದ ಮೃದುವಾದ ಇಡ್ಲಿಗೆ ಚಟ್ನಿ ಹಾಕಿ ಸವಿದರೆ ಅದರ ಮಜಾನೇ ಬೇರೆ. ಆದರೆ ಒಂದೇ ರೀತಿಯ ಇಡ್ಲಿ ತಿಂದು ಬೋರ್ ಆಗಿದ್ದರೆ ಓಟ್ಸ್ ಇಡ್ಲಿಯನ್ನೊಮ್ಮೆ ಟ್ರೈ ಮಾಡಬಹುದು. ಈ ಓಟ್ಸ್ ಆರೋಗ್ಯಕರ ಆಯ್ಕೆಯಲ್ಲಿ ಒಂದು. ತೂಕ ಇಳಿಕೆಗೂ ಸಹಕಾರಿಯಾಗಿದ್ದು, ಹೀಗಾಗಿ ಇದರಿಂದ ತಯಾರಿಸಿ ಇಡ್ಲಿಯನ್ನು ಬೆಳಗ್ಗಿನ ಉಪಹಾರವಾಗಿ ಸವಿಯಬಹುದು. ಹಾಗಾದರೆ ಮನೆಯಲ್ಲೇ ಸುಲಭವಾಗಿ ಓಟ್ಸ್ ಇಡ್ಲಿ ಮಾಡೋದು ಹೇಗೆ? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Oats Idli : ಮಲ್ಲಿಗೆಯಂತೆ ಮೃದುವಾದ ಓಟ್ಸ್ ಇಡ್ಲಿ ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 05, 2024 | 5:00 PM

Share

ನಮ್ಮ ದಕ್ಷಿಣ ಭಾರತದ ಪ್ರಮುಖ ತಿಂಡಿಗಳಲ್ಲಿ ಬಹುತೇಕರ ನೆಚ್ಚಿನ ತಿಂಡಿ ಈ ಇಡ್ಲಿ. ರವೆ ಇಡ್ಲಿ, ಮಲ್ಲಿಗೆ ಇಡ್ಲಿ, ತಟ್ಟೆ ಇಡ್ಲಿ, ಮೈಸೂರು ಇಡ್ಲಿ, ಮಸಾಲೆ ಇಡ್ಲಿ ಹೀಗೆ ನಾನಾ ತರಹದ ಇಡ್ಲಿಗಳನ್ನು ಮಾಡುತ್ತೇವೆ. ಬೆಳಗ್ಗಿನ ತಿಂಡಿಗೆ ಇಡ್ಲಿ ಮಾಡಬೇಕೆಂದುಕೊಂಡಿದ್ದರೆ ಈ ಓಟ್ಸ್ ಇಡ್ಲಿಯನ್ನೊಮ್ಮೆ ಟ್ರೈ ಮಾಡಬಹುದು. ಬ್ರೇಕ್‌ಫಾಸ್ಟ್‌ಗೆ ಅತಿ ಕಡಿಮೆ ಸಮಯಯಲ್ಲಿ ಮಾಡಬಹುದಾದ ಬೆಸ್ಟ್‌ ರೆಸಿಪಿ ಇದಾಗಿದ್ದು ಆರೋಗ್ಯಕ್ಕೂ ಅಷ್ಟೇ ಒಳ್ಳೆಯದು.

ಓಟ್ಸ್ ಇಡ್ಲಿ ಮಾಡಲು ಬೇಕಾಗುವ ಸಾಮಗ್ರಿಗಳು

* ಕಾಲು ಕಪ್ ಓಟ್ಸ್

* ಒಂದು ಕಪ್ ಉದ್ದಿನ ಬೇಳೆ

* ಅರ್ಧ ಚಮಚ ಶುಂಠಿ ಪೇಸ್ಟ್

* ಒಂದು ಚಮಚ ಹಸಿಮೆಣಸಿನಕಾಯಿ ಪೇಸ್ಟ್

* ಎಣ್ಣೆ

* ರುಚಿಗೆ ತಕ್ಕಷ್ಟು ಉಪ್ಪು

ಓಟ್ಸ್ ಇಡ್ಲಿ ಮಾಡುವ ವಿಧಾನ

* ಓಟ್ಸ್ ಮತ್ತು ಉದ್ದಿನ ಬೇಳೆಯನ್ನು ನೀರು ಹಾಕದೇ ಮಿಕ್ಸಿಯ ಜಾರಿನಲ್ಲಿ ನುಣ್ಣಗೆ ಪುಡಿ ಮಾಡಿಕೊಳ್ಳಿ.

* ಈ ಪುಡಿಗೆ ಅಗತ್ಯವಿರುವಷ್ಟು ನೀರು ಹಾಕಿ ಕಲಸಿ ನುಣ್ಣನೆಯ ಮಿಶ್ರಣ ಮಾಡಿಕೊಳ್ಳಿ.

* ಈ ಮಿಶ್ರಣಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಹಸಿ ಮೆಣಸಿನಕಾಯಿಯ ಪೇಸ್ಟ್ ಹಾಗೂ ಶುಂಠಿ ಪೇಸ್ಟ್ ಸೇರಿಸಿಕೊಳ್ಳಿ.

* ಈ ಹಿಟ್ಟನ್ನು ಒಂದು ಘಂಟೆ ಕಾಲ ಹಾಗೆಯೇ ಹುದುಗಲು ಬಿಡಿ, ತದನಂತರದಲ್ಲಿ ಇಡ್ಲಿ ಪಾತ್ರೆಯ ಲೋಟಕ್ಕೆ ಎಣ್ಣೆ ಸವರಿ ಹಿಟ್ಟನ್ನು ಹಾಕಿ.

* ಸುಮಾರು ಎಂಟರಿಂದ ಹತ್ತು ನಿಮಿಷಗಳ ಕಾಲ ಬೇಯಿಸಿದರೆ ಮೃದುವಾದ ಓಟ್ಸ್ ಇಡ್ಲಿ ಸವಿಯಲು ಸಿದ್ಧವಾಗಿರುತ್ತದೆ. ಇದನ್ನು ತೆಂಗಿನ ಕಾಯಿ ಚಟ್ನಿ ಜೊತೆ ಸವಿಯಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​