Sign In

By signing in or creating an account, you agree with Associated Broadcasting Company's Terms & Conditions and Privacy Policy.

Oats Idli : ಮಲ್ಲಿಗೆಯಂತೆ ಮೃದುವಾದ ಓಟ್ಸ್ ಇಡ್ಲಿ ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ

ದಕ್ಷಿಣ ಭಾರತದ ನೆಚ್ಚಿನ ಉಪಾಹಾರಗಳಲ್ಲಿ ಇಡ್ಲಿ ಕೂಡ ಒಂದು. ಬಿಸಿ ಬಿಸಿಯಾದ ಮೃದುವಾದ ಇಡ್ಲಿಗೆ ಚಟ್ನಿ ಹಾಕಿ ಸವಿದರೆ ಅದರ ಮಜಾನೇ ಬೇರೆ. ಆದರೆ ಒಂದೇ ರೀತಿಯ ಇಡ್ಲಿ ತಿಂದು ಬೋರ್ ಆಗಿದ್ದರೆ ಓಟ್ಸ್ ಇಡ್ಲಿಯನ್ನೊಮ್ಮೆ ಟ್ರೈ ಮಾಡಬಹುದು. ಈ ಓಟ್ಸ್ ಆರೋಗ್ಯಕರ ಆಯ್ಕೆಯಲ್ಲಿ ಒಂದು. ತೂಕ ಇಳಿಕೆಗೂ ಸಹಕಾರಿಯಾಗಿದ್ದು, ಹೀಗಾಗಿ ಇದರಿಂದ ತಯಾರಿಸಿ ಇಡ್ಲಿಯನ್ನು ಬೆಳಗ್ಗಿನ ಉಪಹಾರವಾಗಿ ಸವಿಯಬಹುದು. ಹಾಗಾದರೆ ಮನೆಯಲ್ಲೇ ಸುಲಭವಾಗಿ ಓಟ್ಸ್ ಇಡ್ಲಿ ಮಾಡೋದು ಹೇಗೆ? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Oats Idli : ಮಲ್ಲಿಗೆಯಂತೆ ಮೃದುವಾದ ಓಟ್ಸ್ ಇಡ್ಲಿ ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 05, 2024 | 5:00 PM

ನಮ್ಮ ದಕ್ಷಿಣ ಭಾರತದ ಪ್ರಮುಖ ತಿಂಡಿಗಳಲ್ಲಿ ಬಹುತೇಕರ ನೆಚ್ಚಿನ ತಿಂಡಿ ಈ ಇಡ್ಲಿ. ರವೆ ಇಡ್ಲಿ, ಮಲ್ಲಿಗೆ ಇಡ್ಲಿ, ತಟ್ಟೆ ಇಡ್ಲಿ, ಮೈಸೂರು ಇಡ್ಲಿ, ಮಸಾಲೆ ಇಡ್ಲಿ ಹೀಗೆ ನಾನಾ ತರಹದ ಇಡ್ಲಿಗಳನ್ನು ಮಾಡುತ್ತೇವೆ. ಬೆಳಗ್ಗಿನ ತಿಂಡಿಗೆ ಇಡ್ಲಿ ಮಾಡಬೇಕೆಂದುಕೊಂಡಿದ್ದರೆ ಈ ಓಟ್ಸ್ ಇಡ್ಲಿಯನ್ನೊಮ್ಮೆ ಟ್ರೈ ಮಾಡಬಹುದು. ಬ್ರೇಕ್‌ಫಾಸ್ಟ್‌ಗೆ ಅತಿ ಕಡಿಮೆ ಸಮಯಯಲ್ಲಿ ಮಾಡಬಹುದಾದ ಬೆಸ್ಟ್‌ ರೆಸಿಪಿ ಇದಾಗಿದ್ದು ಆರೋಗ್ಯಕ್ಕೂ ಅಷ್ಟೇ ಒಳ್ಳೆಯದು.

ಓಟ್ಸ್ ಇಡ್ಲಿ ಮಾಡಲು ಬೇಕಾಗುವ ಸಾಮಗ್ರಿಗಳು

* ಕಾಲು ಕಪ್ ಓಟ್ಸ್

* ಒಂದು ಕಪ್ ಉದ್ದಿನ ಬೇಳೆ

* ಅರ್ಧ ಚಮಚ ಶುಂಠಿ ಪೇಸ್ಟ್

* ಒಂದು ಚಮಚ ಹಸಿಮೆಣಸಿನಕಾಯಿ ಪೇಸ್ಟ್

* ಎಣ್ಣೆ

* ರುಚಿಗೆ ತಕ್ಕಷ್ಟು ಉಪ್ಪು

ಓಟ್ಸ್ ಇಡ್ಲಿ ಮಾಡುವ ವಿಧಾನ

* ಓಟ್ಸ್ ಮತ್ತು ಉದ್ದಿನ ಬೇಳೆಯನ್ನು ನೀರು ಹಾಕದೇ ಮಿಕ್ಸಿಯ ಜಾರಿನಲ್ಲಿ ನುಣ್ಣಗೆ ಪುಡಿ ಮಾಡಿಕೊಳ್ಳಿ.

* ಈ ಪುಡಿಗೆ ಅಗತ್ಯವಿರುವಷ್ಟು ನೀರು ಹಾಕಿ ಕಲಸಿ ನುಣ್ಣನೆಯ ಮಿಶ್ರಣ ಮಾಡಿಕೊಳ್ಳಿ.

* ಈ ಮಿಶ್ರಣಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಹಸಿ ಮೆಣಸಿನಕಾಯಿಯ ಪೇಸ್ಟ್ ಹಾಗೂ ಶುಂಠಿ ಪೇಸ್ಟ್ ಸೇರಿಸಿಕೊಳ್ಳಿ.

* ಈ ಹಿಟ್ಟನ್ನು ಒಂದು ಘಂಟೆ ಕಾಲ ಹಾಗೆಯೇ ಹುದುಗಲು ಬಿಡಿ, ತದನಂತರದಲ್ಲಿ ಇಡ್ಲಿ ಪಾತ್ರೆಯ ಲೋಟಕ್ಕೆ ಎಣ್ಣೆ ಸವರಿ ಹಿಟ್ಟನ್ನು ಹಾಕಿ.

* ಸುಮಾರು ಎಂಟರಿಂದ ಹತ್ತು ನಿಮಿಷಗಳ ಕಾಲ ಬೇಯಿಸಿದರೆ ಮೃದುವಾದ ಓಟ್ಸ್ ಇಡ್ಲಿ ಸವಿಯಲು ಸಿದ್ಧವಾಗಿರುತ್ತದೆ. ಇದನ್ನು ತೆಂಗಿನ ಕಾಯಿ ಚಟ್ನಿ ಜೊತೆ ಸವಿಯಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್