AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oats Idli : ಮಲ್ಲಿಗೆಯಂತೆ ಮೃದುವಾದ ಓಟ್ಸ್ ಇಡ್ಲಿ ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ

ದಕ್ಷಿಣ ಭಾರತದ ನೆಚ್ಚಿನ ಉಪಾಹಾರಗಳಲ್ಲಿ ಇಡ್ಲಿ ಕೂಡ ಒಂದು. ಬಿಸಿ ಬಿಸಿಯಾದ ಮೃದುವಾದ ಇಡ್ಲಿಗೆ ಚಟ್ನಿ ಹಾಕಿ ಸವಿದರೆ ಅದರ ಮಜಾನೇ ಬೇರೆ. ಆದರೆ ಒಂದೇ ರೀತಿಯ ಇಡ್ಲಿ ತಿಂದು ಬೋರ್ ಆಗಿದ್ದರೆ ಓಟ್ಸ್ ಇಡ್ಲಿಯನ್ನೊಮ್ಮೆ ಟ್ರೈ ಮಾಡಬಹುದು. ಈ ಓಟ್ಸ್ ಆರೋಗ್ಯಕರ ಆಯ್ಕೆಯಲ್ಲಿ ಒಂದು. ತೂಕ ಇಳಿಕೆಗೂ ಸಹಕಾರಿಯಾಗಿದ್ದು, ಹೀಗಾಗಿ ಇದರಿಂದ ತಯಾರಿಸಿ ಇಡ್ಲಿಯನ್ನು ಬೆಳಗ್ಗಿನ ಉಪಹಾರವಾಗಿ ಸವಿಯಬಹುದು. ಹಾಗಾದರೆ ಮನೆಯಲ್ಲೇ ಸುಲಭವಾಗಿ ಓಟ್ಸ್ ಇಡ್ಲಿ ಮಾಡೋದು ಹೇಗೆ? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Oats Idli : ಮಲ್ಲಿಗೆಯಂತೆ ಮೃದುವಾದ ಓಟ್ಸ್ ಇಡ್ಲಿ ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 05, 2024 | 5:00 PM

Share

ನಮ್ಮ ದಕ್ಷಿಣ ಭಾರತದ ಪ್ರಮುಖ ತಿಂಡಿಗಳಲ್ಲಿ ಬಹುತೇಕರ ನೆಚ್ಚಿನ ತಿಂಡಿ ಈ ಇಡ್ಲಿ. ರವೆ ಇಡ್ಲಿ, ಮಲ್ಲಿಗೆ ಇಡ್ಲಿ, ತಟ್ಟೆ ಇಡ್ಲಿ, ಮೈಸೂರು ಇಡ್ಲಿ, ಮಸಾಲೆ ಇಡ್ಲಿ ಹೀಗೆ ನಾನಾ ತರಹದ ಇಡ್ಲಿಗಳನ್ನು ಮಾಡುತ್ತೇವೆ. ಬೆಳಗ್ಗಿನ ತಿಂಡಿಗೆ ಇಡ್ಲಿ ಮಾಡಬೇಕೆಂದುಕೊಂಡಿದ್ದರೆ ಈ ಓಟ್ಸ್ ಇಡ್ಲಿಯನ್ನೊಮ್ಮೆ ಟ್ರೈ ಮಾಡಬಹುದು. ಬ್ರೇಕ್‌ಫಾಸ್ಟ್‌ಗೆ ಅತಿ ಕಡಿಮೆ ಸಮಯಯಲ್ಲಿ ಮಾಡಬಹುದಾದ ಬೆಸ್ಟ್‌ ರೆಸಿಪಿ ಇದಾಗಿದ್ದು ಆರೋಗ್ಯಕ್ಕೂ ಅಷ್ಟೇ ಒಳ್ಳೆಯದು.

ಓಟ್ಸ್ ಇಡ್ಲಿ ಮಾಡಲು ಬೇಕಾಗುವ ಸಾಮಗ್ರಿಗಳು

* ಕಾಲು ಕಪ್ ಓಟ್ಸ್

* ಒಂದು ಕಪ್ ಉದ್ದಿನ ಬೇಳೆ

* ಅರ್ಧ ಚಮಚ ಶುಂಠಿ ಪೇಸ್ಟ್

* ಒಂದು ಚಮಚ ಹಸಿಮೆಣಸಿನಕಾಯಿ ಪೇಸ್ಟ್

* ಎಣ್ಣೆ

* ರುಚಿಗೆ ತಕ್ಕಷ್ಟು ಉಪ್ಪು

ಓಟ್ಸ್ ಇಡ್ಲಿ ಮಾಡುವ ವಿಧಾನ

* ಓಟ್ಸ್ ಮತ್ತು ಉದ್ದಿನ ಬೇಳೆಯನ್ನು ನೀರು ಹಾಕದೇ ಮಿಕ್ಸಿಯ ಜಾರಿನಲ್ಲಿ ನುಣ್ಣಗೆ ಪುಡಿ ಮಾಡಿಕೊಳ್ಳಿ.

* ಈ ಪುಡಿಗೆ ಅಗತ್ಯವಿರುವಷ್ಟು ನೀರು ಹಾಕಿ ಕಲಸಿ ನುಣ್ಣನೆಯ ಮಿಶ್ರಣ ಮಾಡಿಕೊಳ್ಳಿ.

* ಈ ಮಿಶ್ರಣಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಹಸಿ ಮೆಣಸಿನಕಾಯಿಯ ಪೇಸ್ಟ್ ಹಾಗೂ ಶುಂಠಿ ಪೇಸ್ಟ್ ಸೇರಿಸಿಕೊಳ್ಳಿ.

* ಈ ಹಿಟ್ಟನ್ನು ಒಂದು ಘಂಟೆ ಕಾಲ ಹಾಗೆಯೇ ಹುದುಗಲು ಬಿಡಿ, ತದನಂತರದಲ್ಲಿ ಇಡ್ಲಿ ಪಾತ್ರೆಯ ಲೋಟಕ್ಕೆ ಎಣ್ಣೆ ಸವರಿ ಹಿಟ್ಟನ್ನು ಹಾಕಿ.

* ಸುಮಾರು ಎಂಟರಿಂದ ಹತ್ತು ನಿಮಿಷಗಳ ಕಾಲ ಬೇಯಿಸಿದರೆ ಮೃದುವಾದ ಓಟ್ಸ್ ಇಡ್ಲಿ ಸವಿಯಲು ಸಿದ್ಧವಾಗಿರುತ್ತದೆ. ಇದನ್ನು ತೆಂಗಿನ ಕಾಯಿ ಚಟ್ನಿ ಜೊತೆ ಸವಿಯಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ