AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oatsmeal: ಓಟ್ಸ್​​​ ಮೀಲ್ ತೂಕ ನಷ್ಟಕ್ಕೆ ಮಾತ್ರವಲ್ಲ, ಚರ್ಮದ ರಕ್ಷಣೆಗೂ ಉತ್ತಮ ಆಯ್ಕೆ..!

ಓಟ್ಸ್​​​ ಮೀಲ್​​ ಆರೋಗ್ಯದ ದೃಷ್ಟಿಯಿಂದ ಪೌಷ್ಟಿಕ ಆಹಾರವಾಗಿದೆ. ಅದರ ಸೇವನೆಯು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ಅವು ಚರ್ಮಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತವೆ.

Oatsmeal: ಓಟ್ಸ್​​​ ಮೀಲ್ ತೂಕ ನಷ್ಟಕ್ಕೆ ಮಾತ್ರವಲ್ಲ, ಚರ್ಮದ ರಕ್ಷಣೆಗೂ ಉತ್ತಮ ಆಯ್ಕೆ..!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 24, 2022 | 7:02 AM

Share

ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದರೊಂದಿಗೆ ಕ್ಯಾನ್ಸರ್‌ನಂತಹ ರೋಗಗಳ ಅಪಾಯವನ್ನು ಕಡಿಮೆ ಮಾಡುವುದು ಮತ್ತು ಮಲಬದ್ಧತೆಯ ಸಮಸ್ಯೆಯನ್ನು ಹೋಗಲಾಡಿಸುವಂತಹ ಹಲವಾರು ಪ್ರಯೋಜನಗಳಿವೆ ಎಂಬುದು ಓಟ್ಸ್​​​ ಮೀಲ್ (Oatsmeal) ಸೇವನೆಯಿಂದ ತಿಳಿದುಬಂದಿದೆ. ವಾಸ್ತವವಾಗಿ ಇದು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್​ನ್ನು ಹೊಂದಿದ್ದು, ಓಟ್ಸ್​​ ಮೀಲ್ ತಿಂದ ನಂತರ ಹೊಟ್ಟೆ ತುಂಬಾ ಹೊತ್ತು ತುಂಬಿದ ಅನುಭವವಾಗುತ್ತದೆ. ಇದರಿಂದಾಗಿ ತೂಕ ಕಡಿಮೆ ಮಾಡಿಕೊಳ್ಳಲು ಸಹ ಸಹಕಾರಿಯಾಗಿದೆ. ಆದರೆ ಇದು ಚರ್ಮವನ್ನು ಹಾನಿಯಾಗದಂತೆ ಸಹಾಯ ಮಾಡುತ್ತದೆ. ಮೆಡಿಕಲ್ ನ್ಯೂಸ್ ಟುಡೇ ಪ್ರಕಾರ, ಓಟ್ಸ್​ ಮೀಲ್ ಸೇವನೆಯು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಏಕೆಂದರೆ ಇದರಲ್ಲಿ ಬೀಟಾ ಗ್ಲುಕನ್ (ನೀರನ್ನು ಹೀರಿಕೊಳ್ಳುತ್ತದೆ), ಆಂಟಿ-ಆಕ್ಸಿಡೆಂಟ್ ಆಗಿರುವ ಫಿನಾಲ್ ಇರುವುದರಿಂದ ಚರ್ಮವನ್ನು ಸ್ವಚ್ಛವಾಗಿಡಲು ಸಹಾಯ ಮಾಡುವ ಸಪೋನಿನ್ ಅಂಶಗಳಿವೆ. ಓಟ್ಸ್​ ಮೀಲ್ ಚರ್ಮಕ್ಕೆ ಹೇಗೆ ಪ್ರಯೋಜನಕಾರಿಯಾಗಿದೆ ಎಂಬುದನ್ನು ತಿಳಿಯಿರಿ.

ನೀರಿನಂಶ ಕಡಿಮೆ ಮಾಡುತ್ತದೆ:

ಮುಂಜಾನೆ ಓಟ್ಸ್ ಅಥವಾ ಗಂಜಿ ಸೇವಿಸುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ. ಇದರೊಂದಿಗೆ, ಮುಖದ ಮೇಲೆ, ಕಣ್ಣುಗಳ ಕೆಳಗೆ ಊತ ಮತ್ತು ಕಪ್ಪು ಕಲೆಗಳನ್ನು ಹೋಗಲಾಡಿಸಬಹುದು. ಅದಕ್ಕಾಗಿಯೇ ಇದನ್ನು ಉತ್ತಮ ಬ್ರೇಕ್ ಫಾಸ್ಟ್ ಆಯ್ಕೆ ಎಂದು ಪರಿಗಣಿಸಲಾಗುತ್ತದೆ.

ಚರ್ಮದ ಶುದ್ಧೀಕರಣ:

ಓಟ್ಸ್​ ಮೀಲ್‌ನಲ್ಲಿರುವ ಸಪೋನಿನ್‌ಗಳು ಚರ್ಮದ ಶುದ್ಧೀಕರಣ ಏಜೆಂಟ್‌ಗಳಾಗಿ ಕಾರ್ಯನಿರ್ವಹಿಸುತ್ತವೆ. ಈ ರೀತಿ ಓಟ್ಸ್​​​ ಮೀಲ್ ಸೇವನೆಯಿಂದ ಚರ್ಮ ಕೊಳೆಯಿಂದ ದೂರ ಉಳಿದು ಸ್ವಚ್ಛವಾಗಿರುತ್ತದೆ. ನೀವು ಚರ್ಮದ ಮೇಲಿನ ಕಲೆಗಳನ್ನು ಸಹ ಹೋಗಲಾಡಿಸಬಹುದು.

ಎಣ್ಣೆಯುಕ್ತ ಚರ್ಮಕ್ಕೆ ಉತ್ತಮ:

ಓಟ್ಸ್​​ ಮೀಲ್​ನ್ನು ಮುಲ್ತಾನಿ ಮಿಟ್ಟಿಯೊಂದಿಗೆ ಬೆರೆಸಿ ಫೇಸ್ ಪ್ಯಾಕ್ ಮಾಡಿ ಹಚ್ಚಿದರೆ, ಅದು ಚರ್ಮದಿಂದ ಹೆಚ್ಚುವರಿ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಆದ್ದರಿಂದ ಎಣ್ಣೆಯುಕ್ತ ಚರ್ಮ ಹೊಂದಿರುವ ಜನರು ಈ ಫೇಸ್ ಪ್ಯಾಕ್​ನ್ನು ಟ್ರೈ ಮಾಡಬಹುದು.

ಒಣ ಚರ್ಮಕ್ಕೆ ಮುಕ್ತಿ:

ಎರಡು ಚಮಚ ಓಟ್ಸ್​​ ಮೀಲ್, ಒಂದು ಮೊಟ್ಟೆ, ನಿಂಬೆ ಮತ್ತು ಜೇನುತುಪ್ಪವನ್ನು ಬೆರೆಸಿ ಪೇಸ್ಟ್ ತಯಾರಿಸಿ. ಇದನ್ನು ತ್ವಚೆಗೆ  ಹಚ್ಚುವುದರಿಂದ ಒಣ ತ್ವಚೆಯ ಸಮಸ್ಯೆಯನ್ನು ಹೋಗಲಾಡಿಸಬಹುದು. ಏಕೆಂದರೆ ಈ ಪ್ಯಾಕ್ ತ್ವಚೆಗೆ ಹೈಡ್ರೇಟಿಂಗ್ ಗುಣಗಳನ್ನು ಒದಗಿಸುತ್ತದೆ. ಈ ಫೇಸ್ ಪ್ಯಾಕ್ ಮಳೆಗಾಲದಲ್ಲಿ ತುಂಬಾ ಉಪಯುಕ್ತವಾಗಿದೆ. ಏಕೆಂದರೆ ಈ ಸಮಯದಲ್ಲಿ ಅನೇಕ ಜನರು ಒಣ ತ್ವಚೆಯ ಸಮಸ್ಯೆಯನ್ನು ಎದುರಿಸುತ್ತಾರೆ.

ಇದನ್ನೂ ಓದಿ: chameleon changes colour: ಮೈಬಣ್ಣ ಬದಲಿಸುವ ಊಸರವಳ್ಳಿಯ ಒಳಗುಟ್ಟು ಏನು ಗೊತ್ತಾ..!

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ