AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care Tips in Kannada : ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿದೆ ಸುಲಭ ಪರಿಹಾರ

ಸುಡುವ ಸೂರ್ಯನ ಬಿಸಿಲಿನ ನಡುವೆ ಬೇಸಿಗೆ ಕಾಲ ಬೇಡವೇ ಬೇಡ ಎಂದು ಯಾರಿಗಾದರೂ ಎನಿಸದೇ ಇರದು. ಬಿಸಿಯ ತಾಪಮಾನಕ್ಕೆ ಚರ್ಮ, ದೇಹದ ಬಗ್ಗೆ ಅಷ್ಟೇ ಅಲ್ಲದೇ, ನಿಮ್ಮ ಕೂದಲಿನ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿರುತ್ತದೆ. ಬೇಸಿಗೆಯಲ್ಲಿ ಎಣ್ಣೆಯುಕ್ತ ಕೂದಲಿನ ಸಮಸ್ಯೆಯು ಕಾಡುವುದು ಸಹಜ. ಹೀಗಾದಾಗ ಮನೆಯಲ್ಲೇ ಈ ರೀತಿಯ ಕೆಲವು ಸಲಹೆಗಳನ್ನು ಪಾಲಿಸಿ ಮೂಲಕ ಕೂದಲಿನ ಆರೈಕೆ ಮಾಡುವುದು ಸುಲಭ.

Hair Care Tips in Kannada : ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿದೆ ಸುಲಭ ಪರಿಹಾರ
ಸಾಯಿನಂದಾ
| Edited By: |

Updated on: May 02, 2024 | 6:35 PM

Share

ಹೆಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದೇ ಈ ಕೂದಲು. ಆದರೆ ಈ ಬೇಸಿಗೆಯಲ್ಲಿ ಕೂದಲನ್ನು ಆರೈಕೆ ಮಾಡುವುದು ಕಷ್ಟಕರ. ಈ ಸಮಯದಲ್ಲಿ ಹಲವು ರೀತಿ ಕೂದಲಿನ ಸಮಸ್ಯೆಗಳು ಉಂಟಾಗುತ್ತದೆ. ಬಹುತೇಕರಲ್ಲಿ ಒಣ ಹಾಗೂ ಸುಕ್ಕುಗಟ್ಟಿದ ಕೂದಲಿನ ಸಮಸ್ಯೆಯು ಕಂಡು ಬರುತ್ತದೆ. ಇದರಿಂದ ಕೂದಲು ಉದುರುವುದಕ್ಕೂರುವುದಕ್ಕೂ ಆರಂಭವಾಗುತ್ತದೆ. ನಿರ್ಲಕ್ಷ್ಯ ಮಾಡಿದರೆ ಕ್ರಮೇಣವಾಗಿ ಕೂದಲಿನ ಸೌಂದರ್ಯವೇ ಹಾಳಾಗುತ್ತದೆ.

  • ಬೇಸಿಗೆಯಲ್ಲಿ ನಿಮ್ಮ ಕೂದಲು ತುಂಬಾ ಎಣ್ಣೆಯುಕ್ತವಾಗಿದ್ದರೆ ಸ್ನಾನ ಮಾಡುವಾಗ ಶಾಂಪೂ ಬಳಸುವುದು ಒಳ್ಳೆಯ ಅಭ್ಯಾಸ.
  • ವಾರಕ್ಕೆ ಎರಡು ಬಾರಿಯಾದರೂ ಮೊಸರಿನ ಹೇರ್ ಪ್ಯಾಕ್ ಬಳಸುತ್ತಿದ್ದರೆ ಒಳ್ಳೆಯದು. ಒಂದು ಕಪ್ ಮೊಸರು, ಒಂದು ಚಮಚದಷ್ಟು ನಿಂಬೆ ರಸ, ಅಡುಗೆ ಸೋಡಾ, ಒಂದು ಮೊಟ್ಟೆಯ ಬಿಳಿಭಾಗವನ್ನು ಬೆರೆಸಿ ಕೂದಲಿಗೆ ಹಚ್ಚಿ ಸ್ನಾನ ಮಾಡಿದರೆ ಈ ಸಮಸ್ಯೆಯು ಪರಿಹಾರವಾಗುತ್ತದೆ.
  • ಬೇಸಿಗೆಯಲ್ಲಿ ಎಣ್ಣೆಯುಕ್ತ ಕೂದಲಿನ ಸಮಸ್ಯೆಯಿಂದ ಮುಕ್ತಿ ಹೊಂದಲು ನಿಂಬೆ ಮತ್ತು ಕಿತ್ತಳೆ ಸಿಪ್ಪೆಯನ್ನು ಬಳಸುವುದು ಪರಿಣಾಮಕಾರಿಯಾಗಿದೆ. ಸಿಪ್ಪೆಗಳನ್ನು ಒಣಗಿಸಿ ಮಾಡಿದ ಪುಡಿಗೆ ಸ್ವಲ್ಪ ನೀರು ಬೆರೆಸಿ ಕೂದಲಿಗೆ ಹಚ್ಚಿ ತೊಳೆದರೆ ಈ ಸಮಸ್ಯೆಯಿಂದ ಸುಲಭವಾಗಿ ಪಾರಾಗಬಹುದು.
  • ಲೋಳೆಸರಕ್ಕೆ ಒಂದು ಚಮಚ ನಿಂಬೆ ರಸವನ್ನು ಬೆರೆಸಿ ಕೂದಲು ಮತ್ತು ನೆತ್ತಿಗೆ ಹಚ್ಚಿ ಹತ್ತು ಹದಿನೈದು ನಿಮಿಷಗಳ ಕಾಲ ತೊಳೆದರೆ ಎಣ್ಣೆಯುಕ್ತ ಕೂದಲು ನಿವಾರಣೆಯಾಗುತ್ತದೆ.
  • ಜೇನುತುಪ್ಪಕ್ಕೆ ಒಂದೆರಡು ಹನಿ ನೀರು ಬೆರೆಸಿ ಕೂದಲಿಗೆ ಹಚ್ಚಿ ಸ್ನಾನ ಮಾಡುವುದರಿಂದ ಶೀಘ್ರ ಪರಿಹಾರ ದೊರೆಯುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆ ಪಡೆಯುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ