AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ದ್ರಾಕ್ಷಿ ರಾಶಿಗಳ ಮಧ್ಯೆ ಮರೆಯಾಗಿರುವ ಬೆಕ್ಕನ್ನು ಕಂಡುಹಿಡಿಯಲು ನಿಮ್ಮಿಂದ ಸಾಧ್ಯವೆ?

ಈಗಂತೂ ಸೋಷಿಯಲ್‌ ಮೀಡಿಯಾಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದುಕೊಂಡಿವೆ. ಕಣ್ಣಿಗೆ ಭ್ರಮೆಯನ್ನು ಉಂಟು ಮಾಡುವ ಈ ಚಿತ್ರಗಳು ಮೆದುಳಿಗೆ ವ್ಯಾಯಾಮವನ್ನು ನೀಡುವ ಒಂದೊಳ್ಳೆ ಮಾರ್ಗವೂ ಆಗಿದೆ. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ದ್ರಾಕ್ಷಿ ರಾಶಿಗಳ ಮಧ್ಯೆ ಮರೆಯಾಗಿರುವ ಬೆಕ್ಕನ್ನು ಹುಡುಕಲು ನಿಮಗೆ ಸವಾಲನ್ನು ನೀಡಲಾಗಿದೆ. ನೀವು ಕೇವಲ 10 ಸೆಕೆಂಡುಗಳ ಒಳಗಾಗಿ ಈ ಸವಾಲನ್ನು ಪೂರ್ಣಗೊಳಿಸಬೇಕು.

Optical Illusion: ದ್ರಾಕ್ಷಿ ರಾಶಿಗಳ ಮಧ್ಯೆ ಮರೆಯಾಗಿರುವ ಬೆಕ್ಕನ್ನು ಕಂಡುಹಿಡಿಯಲು ನಿಮ್ಮಿಂದ ಸಾಧ್ಯವೆ?
ಆಪ್ಟಿಕಲ್‌ ಇಲ್ಯೂಷನ್‌Image Credit source: Social Media
ಮಾಲಾಶ್ರೀ ಅಂಚನ್​
|

Updated on:Oct 02, 2025 | 5:34 PM

Share

ಕಣ್ಣುಗಳು ಹಾಗೂ ಬುದ್ಧಿವಂತಿಕೆಗೆ ಸವಾಲು ಎಸೆಯುವಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳನ್ನು ಆಡುವುದೇ ಒಂದು ರೀತಿಯ ಮಜಾ. ಇಂತಹ ಮೋಜಿನ  ಕ್ಲಿಷ್ಟಕರ ಆಟಗಳು ತಲೆಗೆ ಹುಳ ಬಿಡುವುದು ಮಾತ್ರವಲ್ಲದೆ, ನಮ್ಮ ಬುದ್ಧಿವಂತಿಕೆ, ಏಕಾಗ್ರತೆ, ದೃಷ್ಟಿ ತೀಕ್ಷ್ಣತೆಯನ್ನು ಹೆಚ್ಚಿಸಲು ಕೂಡ ಸಹಕಾರಿಯಾಗಿದೆ. ಆಪ್ಟಿಕಲ್‌ ಇಲ್ಯೂಷನ್‌ನಂತಹ ಒಗಟಿನ ಆಟಗಳು ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಈ ಆಟಗಳನ್ನು ಆಡುವ ಮೂಲಕ ನೀವು ಸಹ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿರುತ್ತೀರಿ ಅಲ್ವಾ. ಇಲ್ಲೊಂದು ಅಂತಹದ್ದೇ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಹರಿದಾಡುತ್ತಿದ್ದು, ಆ ಚಿತ್ರದಲ್ಲಿ ದ್ರಾಕ್ಷಿಗಳ ರಾಶಿಯ ನಡುವೆ ಮರೆಯಾಗಿರುವ ಬೆಕ್ಕನ್ನು ಹುಡುಕಲು ಸವಾಲನ್ನು ನೀಡಲಾಗಿದೆ. ನೀವು ಬರೀ 10 ಸೆಕೆಂಡುಗಳ ಒಳಗೆ ಆ ಬೆಕ್ಕನ್ನು ಹುಡುಕಬೇಕು.

ದ್ರಾಕ್ಷಿ ರಾಶಿಗಳ ನಡುವೆ ಅಡಗಿರುವ ಬೆಕ್ಕನ್ನು ಹುಡುಕಲು ನಿಮ್ಮಿಂದ ಸಾಧ್ಯವೆ?

Optical Illusion1

ಈ ಮೇಲಿನ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ರಾಶಿ ರಾಶಿ ದ್ರಾಕ್ಷಿಗಳಿರುವುದನ್ನು ನೀವು ಗಮನಿಸಿರುತ್ತೀರಿ ಅಲ್ವಾ. ಈ ರಾಶಿ ದ್ರಾಕ್ಷಿಗಳ ನಡುವೆ ಬೆಕ್ಕೊಂದು ಮರೆಯಾಗಿದೆ. ಆ ಮರೆಯಾದ ಬೆಕ್ಕನ್ನು ಹುಡುಕಲು ನಿಮಗೆ ಸವಾಲನ್ನು ನೀಡಲಾಗಿದೆ. ನೀವು ಬರೀ 10 ಸೆಕೆಂಡುಗಳ ಒಳಗಾಗಿ ಅದನ್ನು ಹುಡುಕಬೇಕು. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು DramatizeMe Deutsch ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
ನೀವು ಸಕಾರಾತ್ಮಕ ವ್ಯಕ್ತಿಯೇ ಎಂಬುದನ್ನು ಈ ಚಿತ್ರ ತಿಳಿಸುತ್ತದೆ
Image
ಈ ಚಿತ್ರದಲ್ಲಿ ಮರೆಯಾಗಿರುವ ಹುಲಿಯನ್ನು ಹುಡುಕಿ ನೋಡೋಣ
Image
ಕಾರು ಎತ್ತ ಕಡೆ ಸಾಗುತ್ತಿದೆ ಎಂಬ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ಹೇಳುತ್ತೆ
Image
ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಈ ಚಿತ್ರದ ಮೂಲಕ ಪರೀಕ್ಷಿಸಿ

ಸವಾಲನ್ನು ಸ್ವೀಕರಿಸಲು ಸಿದ್ಧರಿದ್ದೀರಾ?

ಈ ಚಿತ್ರದಲ್ಲಿ ರಾಶಿ ರಾಶಿ ದ್ರಾಕ್ಷಿ ಗೊಂಚಲುಗಳು ಇರುವಂತಹದ್ದು ನಿಮಗೆ ಗೋಚರಿಸಬಹುದಲ್ವಾ. ಆದ್ರೆ ದ್ರಾಕ್ಷಿ ರಾಶಿಗಳ ಮಧ್ಯೆ ಬೆಕ್ಕೊಂದು ಮರೆಯಾಗಿದೆ. ತೀಕ್ಷ್ಣ ದೃಷ್ಟಿ, ಸಮಸ್ಯೆ ಬಗೆಹರಿಸುವ ಕೌಶಲ್ಯ ಇರುವ ಜಾಣರಿಗೆ ಮಾತ್ರ ಆ ಬೆಕ್ಕನ್ನು ಕಂಡುಹಿಡಿಯಲು ಸಾಧ್ಯವಂತೆ. ನೀವು ಕೂಡಾ ಏಕಾಗ್ರತೆ ವಹಿಸಿ ಚಿತ್ರವನ್ನು ನೋಡಿದರೆ ನಿಮಗೆ ಬೆಕ್ಕನ್ನು ಕಂಡು ಹಿಡಿಯಲು ಸಾಧ್ಯವಾಗುತ್ತದೆ.

ಪೋಸ್ಟ್ ಇಲ್ಲಿದೆ ನೋಡಿ:

ಇದನ್ನೂ ಓದಿ: ಚಿತ್ರದಲ್ಲಿ ಮರೆಯಾಗಿರುವ ಹುಲಿಯನ್ನು ಹುಡುಕಿ; ನಿಮ್ಮ ಕಣ್ಣು ಎಷ್ಟು ಶಾರ್ಪ್‌ ಇದೆ ಪರೀಕ್ಷಿಸಿ

ಇಲ್ಲಿದೆ ಉತ್ತರ:

ಹತ್ತು ಸೆಕೆಂಡುಗಳ ಒಳಗಾಗಿ ದ್ರಾಕ್ಷಿ ರಾಶಿಗಳ ಮಧ್ಯೆ ಮರೆಯಾಗಿರುವ ಬೆಕ್ಕನ್ನು ಕಂಡು ಹಿಡಿದವರಿಗೆ ಅಭಿನಂದನೆಗಳು. ನೀವು ಉತ್ತಮ ದೃಷ್ಟಿ ಕೌಶಲ್ಯ, ಏಕಾಗ್ರತೆಯನ್ನು ಹೊಂದಿದ್ದೀರಿ ಎಂದರ್ಥ. ಬೆಕ್ಕನ್ನು ಕಂಡುಹಿಡಿಯಲು ಸಾಧ್ಯವಾಗದಿದ್ದರೆ ಚಿಂತೆ ಬೇಡ, ಇಲ್ಲಿದೆ ನೋಡಿ ಉತ್ತರ. ನೀವು ಈ ಚಿತ್ರದಲ್ಲಿರು ಹಸಿರು ಎಲೆಯತ್ತ ನೋಡಿದರೆ, ಅಲ್ಲೇ ಪಕ್ಕದಲ್ಲಿ ದ್ರಾಕ್ಷಿಯಂತೆ ಕಾಣುವ ಪುಟಾಣಿ ಬೆಕ್ಕೊಂದು ಅಡಕವಾಗಿರುವುದನ್ನು ಗಮನಿಸಬಹುದು. ಇಂತಹ ಒಗಟಿನ ಆಟಗಳು ನಮ್ಮ ಬುದ್ದಿವಂತಿಕೆ, ದೃಷ್ಟಿ ಕೌಶಲ್ಯವನ್ನು ಹೆಚ್ಚಿಸಲು ಇರುವಂತಹ ಉತ್ತಮ ಮಾರ್ಗವಾಗಿದೆ.

Optical Illusion2

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Thu, 2 October 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ