AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion : ಈ ಚಿತ್ರದಲ್ಲಿ ನೀವು ಮೊದಲು ಕಂಡದ್ದೇನು? ಇದುವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವ

ಆಫ್ಟಿಕಲ್ ಇಲ್ಯೂಷನ್ ಹಾಗೂ ಪರ್ಸನಾಲಿಟಿ ಟೆಸ್ಟ್ ಗೆ ಸಂಬಂಧಿಸಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಈ ಫೋಟೋಗಳು ಸಹವಾಗಿ ನಮ್ಮ ಮೆದುಳು ಹಾಗೂ ಬುದ್ಧಿಗೆ ಕೆಲಸ ಕೊಡುತ್ತದೆ. ಕೆಲವೊಮ್ಮೆ ನಾವು ನೋಡುವುದಕ್ಕಿಂತ ವಿಭಿನ್ನವಾದ ಚಿತ್ರಗಳು ಕಾಣಿಸಿಕೊಳ್ಳುವ ಮೂಲಕ ಭ್ರಮೆಯಲ್ಲಿ ತೇಲುವಂತೆ ಮಾಡುತ್ತದೆ. ಆದರೆ ಈ ಚಿತ್ರದಲ್ಲಿ ಮೊದಲು ಏನು ಕಾಣಿಸಿತು ಎನ್ನುವ ಆಧಾರದ ಮೇಲೆ ನಮ್ಮ ವ್ಯಕ್ತಿತ್ವವನ್ನು ನಿರ್ಣಯಿಸಬಹುದು. ಈ ಫೋಟೋದಲ್ಲಿ ನೀವು ಮಹಿಳೆ ಮುಖ ಅಥವಾ ಕೈಯಲ್ಲಿ ಬುಟ್ಟಿ ಹಿಡಿದು ಸೇಬುಗಳನ್ನು ಆರಿಸಿಕೊಳ್ಳುವ ಮಹಿಳೆ, ಇದರಲ್ಲಿ ಯಾವುದನ್ನೂ ಮೊದಲು ನೋಡಿದ್ದೀರಾ ಎನ್ನುವುದು ನೀವು ಹೇಗೆ ಎಂದು ಬಹಿರಂಗ ಪಡಿಸುತ್ತದೆ, ಈ ಕುರಿತಾದ ಕುತೂಹಲಕಾರಿ ಮಾಹಿತಿ ಇಲ್ಲಿದೆ.

Optical Illusion : ಈ ಚಿತ್ರದಲ್ಲಿ ನೀವು ಮೊದಲು ಕಂಡದ್ದೇನು? ಇದುವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವ
ಆಪ್ಟಿಕಲ್ ಐಕ್ಯೂ
ಸಾಯಿನಂದಾ
| Edited By: |

Updated on: Apr 07, 2025 | 5:31 PM

Share

ಈ ಭೂಮಿಯ ಮೇಲಿರುವ ಪ್ರತಿಯೊಬ್ಬ ವ್ಯಕ್ತಿಗಳು ಒಂದೇ ರೀತಿ ಇರಲು ಸಾಧ್ಯವಿಲ್ಲ. ಎಲ್ಲರಿಗೂ ಕೂಡ ಅವರವರ ವ್ಯಕ್ತಿತ್ವ (personality) ತಿಳಿದುಕೊಳ್ಳಬೇಕೆಂದು ಇರುತ್ತದೆ. ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಕಣ್ಣು, ಕಿವಿ, ಮೂಗು, ಕೂದಲು, ತುಟಿ ಇವುಗಳ ಆಧಾರದ ಮೇಲೆ ವ್ಯಕ್ತಿತ್ವ ನಿರ್ಣಯಿಸಬಹುದು. ಹಾಗೆಯೇ ಒಂದು ಚಿತ್ರ (photo) ದಲ್ಲಿ ಮೊದಲು ಏನು ಕಾಣಿಸಿತು ಎನ್ನುವುದು ಕೂಡ ನಿಗೂಢ ವ್ಯಕ್ತಿತ್ವ ಬಹಿರಂಗಪಡಿಸುತ್ತದೆ. ಆದರೆ ಕೆಲವು ಸೆಕೆಂಡುಗಳ ಕಾಲ ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಈ ಚಿತ್ರದಲ್ಲಿ ಮಹಿಳೆಯ ಮುಖ (women face) ಹಾಗೂ ಸೇಬು (apple) ಎತ್ತಕೊಳ್ಳುವ ಮಹಿಳೆಯನ್ನು ನೋಡಬಹುದು. ಆದರೆ ಈ ಚಿತ್ರ ಒಂದು ಕ್ಷಣ ಭ್ರಮೆಯನ್ನು ಉಂಟು ಮಾಡಿದರೂ ನೀವು ಮೊದಲು ಏನನ್ನೂ ಗುರುತಿಸುತ್ತೀರಿ ಎನ್ನುವುದೇ ವ್ಯಕ್ತಿತ್ವ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ.

  • ಮೊದಲು ಮಹಿಳೆ ಮುಖ ಗುರುತಿಸಿದರೆ ಈ ಜನರು ಶ್ರಮಜೀವಿಗಳಾಗಿದ್ದು, ಕೆಲಸ ಕಾರ್ಯಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಸಂದರ್ಭ ಸನ್ನಿವೇಶಗಳು ಹೇಗೆ ಇದ್ದರೂ ಸಾಧಿಸಬೇಕೆನ್ನುವ ಛಲ ಇವರಲ್ಲಿ ಹೆಚ್ಚಿರುತ್ತದೆ. ಹೊಸ ಹೊಸ ವಿಷಯಗಳನ್ನು ತಿಳಿದುಕೊಳ್ಳಲು ಮುಂದಾಗುವ ವ್ಯಕ್ತಿತ್ವ ಇವರದ್ದು. ದೃಢ ನಿಶ್ಚಯ ಹೊಂದಿದ್ದು, ಗುರಿ ಸಾಧಿಸಲು ಕಷ್ಟ ಪಡುತ್ತಾರೆ. ಅದಲ್ಲದೆ, ತನ್ನ ಸುತ್ತಮುತ್ತಲು ಸದಾ ಪ್ರೋತ್ಸಾಹದಾಯಕ ವಾತಾವರಣವನ್ನು ಸೃಷ್ಟಿಸಿಕೊಳ್ಳಲು ಇಷ್ಟ ಪಡುತ್ತಾರೆ.
  • ಕೈಯಲ್ಲಿ ಬುಟ್ಟಿ ಹಿಡಿದು ಸೇಬುಗಳನ್ನು ಆರಿಸಿಕೊಳ್ಳುವ ಮಹಿಳೆಯನ್ನು ಮೊದಲು ಗುರುತಿಸಿದರೆ ಈ ವ್ಯಕ್ತಿಗಳು ಮೃದು ಸ್ವಭಾವವನ್ನು ಹೊಂದಿದ್ದು, ಎಲ್ಲರ ಮಾತಿಗೆ ಬೇಗನೇ ಕರಗುತ್ತಾರೆ. ತಮಗೆ ಏನು ಅನಿಸುತ್ತದೆಯೊ ಅದನ್ನು ಮೊದಲು ಮಾಡಿ ಮುಗಿಸುತ್ತಾರೆ. ವಿಶ್ವಾಸರ್ಹ ವ್ಯಕ್ತಿಯಾಗಿದ್ದು ಕಷ್ಟ ಎನ್ನುವವರಿಗೆ ಬೇಗನೇ ಸಹಾಯ ಮಾಡುತ್ತಾರೆ. ತಾವು ನೀಡಿದ ಭರವಸೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ಹೋರಾಡುತ್ತಾರೆ. ಈ ಗುಣದಿಂದಲೇ ಅತೀ ಹೆಚ್ಚು ಸ್ನೇಹಿತರನ್ನು ಸಂಪಾದಿಸುತ್ತಾರೆ. ಈ ಜನರು ಬುದ್ಧಿವಂತರಾಗಿದ್ದು, ತನ್ನ ಸುತ್ತಮುತ್ತಲಿನವರಿಗೆ ಸಲಹೆ ನೀಡುವ ವ್ಯಕ್ತಿಗಳಾಗಿರುತ್ತಾರೆ. ಹೀಗಾಗಿ ಹೆಚ್ಚಿನವರು ಸಲಹೆ ಸೂಚನೆಗಳಿಗಾಗಿ ಈ ವ್ಯಕ್ತಿಗಳನ್ನೆ ಅವಲಂಬಿಸಿರುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ