AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ottu Shavige : ಒತ್ತು ಶಾವಿಗೆಗೆ ಕಾಯಿ ಹಾಲು, ವ್ಹಾವ್ ಸೂಪರ್​​​ ಕಾಂಬಿನೇಷನ್

ಸಿಹಿ ತಿಂಡಿಯೆಂದರೆ ಯಾರಿಗೆ ಇಷ್ಟ ಹೇಳಿ? ಸಕ್ಕರೆಗಿಂತ ಬೆಲ್ಲ ಹಾಕಿ ಮಾಡಿದ ಸಿಹಿ ತಿನಿಸನ್ನು ಇಷ್ಟಪಟ್ಟು ತಿನ್ನುವವರೇ ಹೆಚ್ಚು. ಹೀಗಾಗಿ ಯಾವುದೇ ಖರ್ಚು ಇಲ್ಲದೇ ಮನೆಯಲ್ಲಿ ಮಾಡಬಹುದಾದ ತಿನಿಸುಗಳಲ್ಲಿ ಒತ್ತು ಶಾವಿಗೆ ಹಾಗೂ ಕಾಯಿ ಹಾಲು ಕೂಡ ಒಂದು. ಕರ್ನಾಟಕದ ಈ ಸಾಂಪ್ರದಾಯಿಕ ತಿನಿಸನ್ನು ಮಾಡುವುದು ಎಷ್ಟು ಸುಲಭದಾಯಕವೋ, ರುಚಿಯು ಅಷ್ಟೇ ಅದ್ಭುತವಾಗಿರುತ್ತದೆ. ಹಾಗಾದ್ರೆ ಒತ್ತು ಶಾವಿಗೆ ಹಾಗೂ ಕಾಯಿ ಹಾಲು ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ

Ottu Shavige : ಒತ್ತು ಶಾವಿಗೆಗೆ ಕಾಯಿ ಹಾಲು, ವ್ಹಾವ್ ಸೂಪರ್​​​ ಕಾಂಬಿನೇಷನ್
ಒತ್ತು ಶಾವಿಗೆ
ಸಾಯಿನಂದಾ
| Edited By: |

Updated on: Sep 12, 2024 | 9:34 AM

Share

ಬೆಳಗ್ಗಿನ ತಿಂಡಿಗೆ ದೋಸೆ, ಇಡ್ಲಿ, ಚಪಾತಿ ಮಾಡೋದು ಸರ್ವೇ ಸಾಮಾನ್ಯ. ಆದರೆ ಮನೆಯಲ್ಲೇ ಇರುವ ಈ ಐಟಂಗಳಿಂದ ಒತ್ತು ಶಾವಿಗೆ ಹಾಗೂ ಕಾಯಿ ಹಾಲನ್ನು ಸುಲಭವಾಗಿ ಮಾಡಬಹುದು. ಕರ್ನಾಟಕದ ಸಾಂಪ್ರದಾಯಿಕ ರೆಸಿಪಿಗಳಲ್ಲಿ ಒಂದಾಗಿರುವ ಇದನ್ನು ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಹೆಚ್ಚಾಗಿ ಮಾಡುತ್ತಾರೆ. ಈ ಒತ್ತು ಶಾವಿಗೆಯನ್ನು ಚಟ್ನಿ, ಸಾಂಬಾರು ಹಾಗೂ ಚಿಕನ್ ಸಾರಿನೊಂದಿಗೆ ಸವಿಯಬಹುದು. ಆದರೆ ಈ ಕಾಯಿ ಹಾಲಿನೊಂದಿಗೆ ಸವಿದರೆ ಅದರ ರುಚಿಯೇ ಬೇರೆ.

ಒತ್ತು ಶಾವಿಗೆಗೆ ಬೇಕಾಗುವ ಸಾಮಗ್ರಿಗಳು:

* ಒಂದು ಕಾಲು ಕಪ್ ದೋಸೆ ಅಕ್ಕಿ

* ಅರ್ಧ ಕಪ್ ತೆಂಗಿನ ತುರಿ

* ರುಚಿಗೆ ತಕ್ಕಷ್ಟು ಉಪ್ಪು

* ತುಪ್ಪ

ಒತ್ತು ಶಾವಿಗೆ ಮಾಡುವ ವಿಧಾನ:

* ಮೊದಲಿಗೆ ಮಿಕ್ಸಿ ಜಾರಿಗೆ ನೆನೆಸಿದ ದೋಸೆ ಅಕ್ಕಿ ಹಾಗೂ ಅರ್ಧ ಕಪ್ ತೆಂಗಿನ ತುರಿ ಹಾಗೂ ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

* ಈ ಹಿಟ್ಟನ್ನು ಒಂದು ಬಾಣಲೆಗೆ ಹಾಕಿ, ಎರಡು ಕಪ್ ನೀರು, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕಲಸಿಕೊಳ್ಳಿ.

* ಈ ಮಿಶ್ರಣವನ್ನು ಸಣ್ಣ ಉರಿಯಲ್ಲಿ ಬೇಯಲು ಬಿಡಿ, ಆಗಾಗ ಒಂದೆರಡು ಚಮಚ ತುಪ್ಪ ಹಾಕಿ ಕಲಸುತ್ತ ಇರಿ. ಐದರಿಂದ ಹತ್ತು ನಿಮಿಷಗಳ ಬಳಿಕ ಸ್ಟವ್ ಆಫ್ ಮಾಡಿ.

* ತದನಂತರದಲ್ಲಿ ಅಂಗೈಗೆ ಸ್ವಲ್ಪ ತುಪ್ಪ ಸವರಿಕೊಂಡು ಈ ಮಿಶ್ರಣವನ್ನು ಉಂಡೆಗಳಾಗಿ ಮಾಡಿಕೊಂಡು ಇಡ್ಲಿ ಪಾತ್ರೆಯಲ್ಲಿ ಇಟ್ಟು 10 ರಿಂದ 12 ನಿಮಿಷಗಳ ಕಾಲ ಬೇಯಿಸಿಕೊಳ್ಳಿ.

* ಆ ಬಳಿಕ ಶಾವಿಗೆ ಅಚ್ಚಿಗೆ ಎಣ್ಣೆ ಸವರಿ, ಅದಕ್ಕೆ ಈ ಉಂಡೆಗಳನ್ನು ಹಾಕಿ ಒತ್ತಿದ್ದರೆ ಒತ್ತು ಶಾವಿಗೆ ಸಿದ್ಧ.

ಇದನ್ನೂ ಓದಿ: ಬೆಳೆಯುತ್ತಿರುವ ಮಗುವಿನ ಮುಂದೆ ಈ ಮಾತುಗಳನ್ನು ಆಡಲೇಬೇಡಿ

ಕಾಯಿ ಹಾಲು ಮಾಡಲು ಬೇಕಾಗುವ ಸಾಮಗ್ರಿಗಳು:

* ಒಂದು ಚಮಚ ನೆನೆಸಿರುವ ಅಕ್ಕಿ

* ತೆಂಗಿನ ತುರಿ

* ಗಸೆ ಗಸೆ

* ಬೆಲ್ಲ

* ಒಂದುವರೆ ಕಪ್ ತೆಂಗಿನಕಾಯಿ ಹಾಲು

* ರುಚಿಗೆ ತಕ್ಕಷ್ಟು ಉಪ್ಪು

* ಏಲಕ್ಕಿ ಪುಡಿ

ಕಾಯಿ ಹಾಲು ಮಾಡುವ ವಿಧಾನ:

* ಮಿಕ್ಸಿ ಜಾರಿಗೆ ನೆನೆಸಿರುವ ಅಕ್ಕಿ, ತೆಂಗಿನ ತುರಿ, ನೆನೆಸಿದ ಗಸ ಗಸೆ, ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

* ಆ ಬಳಿಕ ಒಂದು ಪಾತ್ರೆಗೆ ಅರ್ಧ ಕಪ್ ಬೆಲ್ಲ, ಕಾಲು ಕಪ್ ನೀರು ಹಾಕಿ ಬೆಲ್ಲ ಕರಗುವ ತನಕ ಬಿಸಿ ಮಾಡಿ ರುಬ್ಬಿಕೊಂಡ ಮಿಶ್ರಣ ಹಾಗೂ ತೆಳುವಾದ ತೆಂಗಿನಕಾಯಿ ಹಾಲು ಹಾಕಿ ಕಲಸಿಕೊಳ್ಳಿ.

* ರುಚಿಗೆ ತಕ್ಕಷ್ಟು ಉಪ್ಪು, ಏಲಕ್ಕಿ ಪುಡಿ ಹಾಕಿ ಮಧ್ಯಮ ಉರಿಯಲ್ಲಿ ಮೂರರಿಂದ ನಾಲ್ಕು ನಿಮಿಷಗಳ ಕುದಿಸಿದರೆ ಕಾಯಿ ಹಾಲು ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!