AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾಗಿ ಮೊಬೈಲ್ ಬಳಸುತ್ತೀರಾ? ಪೋಷಕರು ಓದಲೇಬೇಕಾದ ಸುದ್ದಿಯಿದು

ಜನರು ತಮ್ಮ ಸ್ಮಾರ್ಟ್‌ಫೋನ್ ಬಳಕೆಯ ಮೇಲೆ ನಿಯಂತ್ರಣ ಸಾಧಿಸಲು ಸಹಾಯ ಮಾಡಲು ವಿವೋ ಇಂಡಿಯಾ ಡಿಸೆಂಬರ್ 20ರಂದು ತಮ್ಮ ಡಿಜಿಟಲ್ ಸ್ಕ್ರೀನ್‌ಗಳನ್ನು ಒಂದು ಗಂಟೆಯವರೆಗೆ ಸ್ವಿಚ್ ಆಫ್ ಮಾಡಲು ಮತ್ತು ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಗುಣಮಟ್ಟದ ಸಮಯವನ್ನು ಕಳೆಯಲು ಅಭಿಯಾನ ನಡೆಸುತ್ತಿದೆ.

ಅತಿಯಾಗಿ ಮೊಬೈಲ್ ಬಳಸುತ್ತೀರಾ? ಪೋಷಕರು ಓದಲೇಬೇಕಾದ ಸುದ್ದಿಯಿದು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Dec 08, 2023 | 4:36 PM

Share

ಸ್ಮಾರ್ಟ್‌ಫೋನ್​ನ ಮಿತಿಮೀರಿದ ಬಳಕೆಯು ಪೋಷಕರು-ಮಕ್ಕಳ ಸಂಬಂಧದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮೊಬೈಲ್​ಗೆ ಅಡಿಕ್ಟ್​ ಆದ ತಂದೆ-ತಾಯಿ ತಮ್ಮ ಮಕ್ಕಳ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ. ಶೇ. 93ರಷ್ಟು ಪೋಷಕರು ತಮ್ಮ ಮಕ್ಕಳೊಂದಿಗೆ ತಮಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ, ಅದಕ್ಕೆ ಅತಿಯಾದ ಸ್ಮಾರ್ಟ್‌ಫೋನ್ ಬಳಕೆಯೇ ಕಾರಣವೆಂದು ವಿವೋ ಸ್ವಿಚ್ ಆಫ್ ರಿಸರ್ಚ್ ಅಧ್ಯಯನ ಹೇಳಿದೆ.

ಶೇ. 77ರಷ್ಟು ಪೋಷಕರು ತಮ್ಮ ಮಕ್ಕಳು ತಾವು ಅತಿಯಾಗಿ ಸ್ಮಾರ್ಟ್​ಫೋನ್ ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಾರೆ ಎಂದು ಹೇಳಿಕೊಂಡಿದ್ದಾರೆ. ಶೇ. 96ರಷ್ಟು ಪೋಷಕರು ಮತ್ತು ಶೇ. 93ರಷ್ಟು ಮಕ್ಕಳು ಕ್ರಮವಾಗಿ ತಮ್ಮ ಮಕ್ಕಳು ಮತ್ತು ಪೋಷಕರೊಂದಿಗೆ ಗಟ್ಟಿಯಾದ ಸಂಬಂಧವನ್ನು ಹೊಂದಲು ಬಯಸುತ್ತಾರೆ. ಜನರು ತಮ್ಮ ಸ್ಮಾರ್ಟ್‌ಫೋನ್ ಬಳಕೆಯ ಮೇಲೆ ನಿಯಂತ್ರಣ ಸಾಧಿಸಲು ಸಹಾಯ ಮಾಡಲು ವಿವೋ ಇಂಡಿಯಾ ಡಿಸೆಂಬರ್ 20ರಂದು ತಮ್ಮ ಡಿಜಿಟಲ್ ಸ್ಕ್ರೀನ್‌ಗಳನ್ನು ಒಂದು ಗಂಟೆಯವರೆಗೆ ಸ್ವಿಚ್ ಆಫ್ ಮಾಡಲು ಮತ್ತು ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಗುಣಮಟ್ಟದ ಸಮಯವನ್ನು ಕಳೆಯಲು ಅಭಿಯಾನ ನಡೆಸುತ್ತಿದೆ.

ಇದನ್ನೂ ಓದಿ: ಅತಿಯಾಗಿ ಟಿವಿ, ಮೊಬೈಲ್ ನೋಡುವ ಮಕ್ಕಳನ್ನು ನಿಯಂತ್ರಿಸೋದು ಹೇಗೆ?

ಮಾಹಿತಿಯನ್ನು ಪಡೆದುಕೊಳ್ಳಲು ಮತ್ತು ಪೋಷಕರಲ್ಲಿ ಸಾಮಾಜಿಕ ಸಂಪರ್ಕಗಳನ್ನು ಬೆಳೆಸಲು ಸ್ಮಾರ್ಟ್‌ಫೋನ್‌ಗಳು ಅನಿವಾರ್ಯ ಸಾಧನಗಳಾಗಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಶೇ. 70ರಷ್ಟು ಪೋಷಕರು ಪ್ರಪಂಚದ ಬಗ್ಗೆ ತಮ್ಮ ಜ್ಞಾನವನ್ನು ಹೆಚ್ಚಿಸುವಲ್ಲಿ ಸ್ಮಾರ್ಟ್‌ಫೋನ್‌ಗಳ ಮಹತ್ವ ಇದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಅದೇ ರೀತಿ, ಶೇ. 60ಕ್ಕಿಂತ ಹೆಚ್ಚು ಪೋಷಕರು ಸ್ಮಾರ್ಟ್‌ಫೋನ್‌ಗಳನ್ನು ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಂಪರ್ಕಿಸಲು ಅಮೂಲ್ಯವೆಂದು ಪರಿಗಣಿಸುತ್ತಾರೆ. ಆದರೆ ಸುಮಾರು ಶೇ. 60ರಷ್ಟು ಜನರು ಶಾಪಿಂಗ್‌ಗೆ ಮೊಬೈಲ್​ ಆ್ಯಪ್​ಗಳನ್ನು ಬಳಸಲು ಹೆಚ್ಚು ಉಪಯೋಗಿಸುತ್ತಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು