AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮದ್ದು: ಬೆಳಗ್ಗೆ ಎದ್ದೇಳುತ್ತಲೇ ಮೈ ಕೈ ನೋವು ಕಾಣಿಸಿಕೊಳ್ಳುತ್ತಾ, ಈ ಸಮಸ್ಯೆಗೆ ಮನೆಯಲ್ಲೇ ಕಂಡುಕೊಳ್ಳಿ ಮುಕ್ತಿ

ಬಹುತೇಕರಲ್ಲಿ ಬೆಳಗ್ಗೆ ಎದ್ದಾಗ ಅತಿಯಾದ ಮೈ ಕೈ ನೋವು ಕಾಡುತ್ತದೆ. ಅದರಲ್ಲಿ ವಯಸ್ಸು ಆದವರಲ್ಲಿ ಈ ನೋವಿನ ಪ್ರಮಾಣವು ಅತೀ ಹೆಚ್ಚಿರುತ್ತದೆ. ಮಧುಮೇಹ, ಡಿಹೈಡ್ರೇಷನ್, ನಿದ್ರೆಯ ಕೊರತೆಯಿಂದ ಮೈ ಕೈ ನೋವು ಸಮಸ್ಯೆಯು ಬರುವುದು ಹೆಚ್ಚು. ಆದರೆ ಜೀವನ ಶೈಲಿ ಹಾಗೂ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಂಡರೆ ಈ ಮೈಕೈ ನೋವನ್ನು ಗುಣಮುಖಗೊಳಿಸಬಹುದು.

ಮನೆ ಮದ್ದು: ಬೆಳಗ್ಗೆ ಎದ್ದೇಳುತ್ತಲೇ ಮೈ ಕೈ ನೋವು ಕಾಣಿಸಿಕೊಳ್ಳುತ್ತಾ, ಈ ಸಮಸ್ಯೆಗೆ ಮನೆಯಲ್ಲೇ ಕಂಡುಕೊಳ್ಳಿ ಮುಕ್ತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Feb 14, 2024 | 5:52 PM

Share

ಸ್ವಲ್ಪ ಮೈ ದಂಡಿಸಿ ಕೆಲಸ ಮಾಡಿದರೆ ಸಾಕು, ಅತಿಯಾಗಿ ಮೈ ಕೈ ನೋವು ಸಮಸ್ಯೆಯು ಆರಂಭವಾಗುತ್ತದೆ. ಕೆಲವರಿಗಂತೂ ಬೆಳಗ್ಗೆ ಏಳುವುದಕ್ಕೂ ಆಗುವುದೇ ಇಲ್ಲ. ಈ ನೋವು ವಿಪರೀತವಾದರೆ ವೈದ್ಯರನ್ನು ಭೇಟಿಯಾಗುವುದು ಅಗತ್ಯ. ಕೆಲವರು ನೋವು ನಿವಾರಕ ಮಾತ್ರೆಗಳನ್ನು ಸೇವಿಸಿ ತಾತ್ಕಾಲಿಕ ಪರಿಹಾರವನ್ನು ಕಂಡುಕೊಳ್ಳುತ್ತಾರೆ. ಆದರೆ ಮನೆಯಲ್ಲಿಯೇ ತಯಾರಿಸ ಬಹುದಾದ ಔಷಧಿಯಿಂದ ಈ ಸಮಸ್ಯೆಯಿಂದ ಮುಕ್ತರಾಗುವುದು ಉತ್ತಮ.

* ಎಳ್ಳೆಣ್ಣೆಯನ್ನು ಮೈ ಕೈ ನೋವಿಗೆ ಹಚ್ಚಿ ಸ್ವಲ್ಪ ಸಮಯದ ಬಳಿಕ ಸ್ನಾನ ಮಾಡುವುದರಿಂದ ನೋವು ಮಾಯವಾಗುತ್ತದೆ.

* ಹರಳೆಣ್ಣೆಯನ್ನು ದೇಹಕ್ಕೆ ಹಚ್ಚಿ, ಸ್ವಲ್ಪ ಸಮಯ ಬಿಟ್ಟು ಸ್ನಾನ ಮಾಡುವುದರಿಂದ ಮೈ ಕೈ ನೋವು ಕಡಿಮೆಮಾಡಬಹುದಾಗಿದೆ.

* ಹಲಸಿನ ಹಣ್ಣಿಗೆ ಅಕ್ಕಿ ಬೆಲ್ಲ ಸೇರಿಸಿ ಚೆನ್ನಾಗಿ ರುಬ್ಬಿಕೊಂಡು ದೋಸೆ ಮಾಡಿ ತಿನ್ನುವುದರಿಂದ ಮೈಕೈ ನೋವು ಗುಣಮುಖವಾಗುತ್ತದೆ.

* ವಾರದಲ್ಲಿ ಒಮ್ಮೆಯಾದರೂ ಮೆಂತ್ಯ ಸೊಪ್ಪಿನ ಸಾರನ್ನು ಸೇವಿಸುವುದರಿಂದ ಮೈ ಕೈ ನೋವು ನಿವಾರಣೆಯಾಗುತ್ತದೆ.

* ಬೆಚ್ಚಗಿನ ನೀರಿನಲ್ಲಿ ಹಸಿಶುಂಠಿಯನ್ನು ತುರಿದು, ಈ ನೀರಿನಲ್ಲಿ ಬಟ್ಟೆಯನ್ನು ಅದ್ದಿ, ನೋವಿರುವ ಭಾಗದ ಮೇಲೆ ಇಡುವುದರಿಂದ ನೋವು ಕಡಿಮೆಯಾಗುತ್ತದೆ.

* ಅರಿಶಿನವನ್ನು ಸೇವಿಸುವುದರಿಂದ ಮೈ ಕೈ ನೋವು ನಿವಾರಕವಾಗಿ ಕೆಲಸ ಮಾಡುತ್ತದೆ.

* ದಿನನಿತ್ಯವು ಸಕ್ಕರೆ ಹಾಕದೇ ಕಾಫಿ ಸೇವನೆ ಮಾಡುವುದರಿಂದ ಮೈ ಕೈ ನೋವು ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ.

* ಮೆಂತ್ಯವನ್ನು ನೀರಿನಲ್ಲಿ ನೆನೆಸಿ ಚೆನ್ನಾಗಿ ರುಬ್ಬಿಕೊಂಡು ಅಂಗೈ ಅಂಗಾಲುಗಳಿಗೆ ಹಚ್ಚುವುದರಿಂದ ಉರಿಯು ಕಡಿಮೆಯಾಗುತ್ತದೆ.

* ಬಾಳೆಹಣ್ಣನ್ನು ಮೊಸರಿನಲ್ಲಿ ಮಿಶ್ರಣ ಮಾಡಿ, ಅದನ್ನು ಅಂಗಾಲಿಗೆ ಹಚ್ಚುತ್ತಿದ್ದರೆ ಉರಿ ಶಮನವಾಗುತ್ತದೆ.

* ಹಲಸಂಡೆ ಕಾಳನ್ನು ಹುರಿದು ಸೇವಿಸುತ್ತಿದ್ದರೆ ಮೈಕೈ ನೋವಿಗೆ ರಾಮಬಾಣವಾಗಿದೆ.

ಇದನ್ನೂ ಓದಿ: ಮನೆ ಮದ್ದು: ಶಿವನಿಗೆ ಪ್ರಿಯವಾದ ತುಂಬೆ ಗಿಡದಲ್ಲಿದೆ ಆರೋಗ್ಯ, ಯಾವೆಲ್ಲ ಸಮಸ್ಯೆಗೆ ಉಪಯುಕ್ತ

* ತುಂಬೆ ಗಿಡದ ಕಾಂಡಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ, ಆ ನೀರಿನಿಂದ ನೋವು ಇರುವ ಜಾಗಕ್ಕೆ ಬಟ್ಟೆಯಿಂದ ಶಾಖ ನೀಡುವುದರಿಂದ ಮೈ ಕೈ ನೋವು ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ.

* ಮೈ ಕೈ ನೋವು ಸಮಸ್ಯೆಯು ಕಾಡುತ್ತಿದ್ದರೆ, ಉಪ್ಪು ನೀರಿನಿಂದ ಶಾಖ ಕೊಡುವುದರಿಂದ ನೋವಿನ ಸಮಸ್ಯೆಯು ಕಡಿಮೆಯಾಗುತ್ತದೆ.

* ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಮೈ ಕೈ ನೋವು ಕಡಿಮೆಯಾಗಿ ದೇಹವು ಹಗುರಾದಂತಹ ಅನುಭವವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Wed, 14 February 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್