AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಪ್ಯಾನಿಕ್ ಅಟ್ಯಾಕ್ ಸಮಸ್ಯೆಯಿಂದ ಬಳಲುತ್ತಿರುವವರಿಗೆ, ನೀವು ಈ ರೀತಿ ಸಹಾಯಮಾಡಿ

ನಿಮ್ಮ ಸುತ್ತಮುತ್ತಲಿನವರಲ್ಲಿ ಪ್ಯಾನಿಕ್ ಅಟ್ಯಾಕ್ ಸಮಸ್ಯೆ ಕಂಡು ಬಂದರೆ ಅವರಿಗೆ ಧೈರ್ಯ ನೀಡುವುದು, ಅವರ ಜೊತೆಯಾಗಿ ನಿಲ್ಲುವುದು ತುಂಬಾ ಅಗತ್ಯ ಎಂದು ತಜ್ಞರಾದ ಲೊವ್ನೀತ್ ಬಾತ್ರಾ ಹೇಳುತ್ತಾರೆ.

Mental Health: ಪ್ಯಾನಿಕ್ ಅಟ್ಯಾಕ್ ಸಮಸ್ಯೆಯಿಂದ ಬಳಲುತ್ತಿರುವವರಿಗೆ, ನೀವು ಈ ರೀತಿ ಸಹಾಯಮಾಡಿ
ಸಾಂದರ್ಭಿಕ ಚಿತ್ರImage Credit source: Forbes
ಅಕ್ಷತಾ ವರ್ಕಾಡಿ
| Updated By: Digi Tech Desk|

Updated on:Jan 28, 2023 | 9:36 PM

Share

ಪ್ಯಾನಿಕ್ ಅಟ್ಯಾಕ್(Panic Attack) ಸಾಮಾನ್ಯವಾಗಿ ಕೆಲವೇ ನಿಮಿಷಗಳಲ್ಲಿ ಅನಿರೀಕ್ಷಿತವಾಗಿ ಸಂಭವಿಸುವ ಒಂದು ಸಮಸ್ಯೆಯಾಗಿದೆ. ಆ ಸಮಯದಲ್ಲಿ ನೀವು ಅವರ ಜೊತೆಗಿದ್ದು, ಅವರಿಗೆ ಯಾವ ರೀತಿ ಸಹಾಯ ಮಾಡಬಹುದು ಎಂದು ಆರೋಗ್ಯ ತಜ್ಞರಾದ ಲೊವ್ನೀತ್ ಬಾತ್ರಾ ಸಲಹೆ ನೀಡುತ್ತಾರೆ. ಇದು ಸಮಸ್ಯೆ ಸಾಮಾನ್ಯವಾಗಿ ಚಿಕ್ಕದಾಗಿ ಕಂಡರೂ ಕೂಡ, ಈ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಅವರ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಬಹುದು. ನಿಮ್ಮ ಸುತ್ತಮುತ್ತಲಿನವರಲ್ಲಿ ಇಂತಹ ಸಮಸ್ಯೆ ಕಂಡು ಬಂದರೆ ಅವರಿಗೆ ಧೈರ್ಯ ನೀಡುವುದು, ಅವರ ಜೊತೆಯಾಗಿ ನಿಲ್ಲುವುದು ತುಂಬಾ ಅಗತ್ಯ ಎಂದು ತಜ್ಞರಾದ ಲೊವ್ನೀತ್ ಬಾತ್ರಾ ಹೇಳುತ್ತಾರೆ. ಎದೆನೋವು, ಮರಗಟ್ಟುವಿಕೆ ಮತ್ತು ಉಸಿರಾಟದ ತೊಂದರೆಗಳ ಜೊತೆಗೆ ವ್ಯಕ್ತಿಯನ್ನು ಆವರಿಸುವ ಭಯ ಮತ್ತು ಆತಂಕದ ಹಠಾತ್ ಭಾವನೆಯಿಂದ ಪ್ಯಾನಿಕ್ ಅಟ್ಯಾಕ್ ಸಂಭವಿಸುತ್ತದೆ.

ತಜ್ಞರಾದ ಲೊವ್ನೀತ್ ಬಾತ್ರಾ ಪ್ಯಾನಿಕ್ ಅಟ್ಯಾಕ್​​ನಿಂದ ಬಳಲುತ್ತಿದ್ದವರಿಗೆ ಸಹಾಯ ಮಾಡಲು ನೀವು ಅನುಸರಿಸಬಹುದಾದ ಕೆಲವು ಸಲಹೆಗಳನ್ನು ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆ ಪೋಸ್ಟ್​ ಇಲ್ಲಿದೆ.

View this post on Instagram

A post shared by Lovneet Batra (@lovneetb)

ಇದನ್ನೂ ಓದಿ: ನೀರು ಹೆಚ್ಚು ಕುಡಿಯುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಬಹುದು

ಪ್ಯಾನಿಕ್ ಅಟ್ಯಾಕ್​​ನಿಂದ ಬಳಲುತ್ತಿದ್ದವರಿಗೆ ಸಹಾಯ ಮಾಡಲು ನೀವು ಅನುಸರಿಸಬಹುದಾದ ಕೆಲವು ಸಲಹೆಗಳು ಇಲ್ಲಿವೆ.

ಸ್ವಲ್ಪ ನೀರು ಕೊಡಿ:

ನೀರು ಕುಡಿಯುವುದರಿಂದ ಸ್ವಲ್ಪ ಮಟ್ಟದ ಭಯ, ಆತಂಕದಿಂದ ಶಾಂತಗೊಳಿಸುತ್ತದೆ ಎಂದು ಬಾತ್ರಾ ಹೇಳುತ್ತಾರೆ. ತಣ್ಣೀರು ಕುಡಿಯುವುದರಿಂದ ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು ಪ್ರಚೋದಿಸುತ್ತದೆ. ಇದು ವ್ಯಕ್ತಿಯನ್ನು ಶಾಂತಗೊಳಿಸಲು ಸಹಕಾರಿಯಾಗಿದೆ. ಆದ್ದರಿಂದ ಆ ವ್ಯಕ್ತಿಯ ಕೈ ಅಥವಾ ಪಾದಗಳನ್ನು ತಣ್ಣೀರು ಹಾಕಿ ಅಥವಾ ಒದ್ದೆಯಾದ ಟವೆಲ್​​ನಲ್ಲಿ ಮುಖದ ಮೇಲೆ ಅಥವಾ ಕುತ್ತಿಗೆಗೆ ಹಾಕಿ. ಇದು ಅವರನ್ನು ಭಯದಿಂದ ಸ್ವಲ್ಪ ಶಾಂತಗೊಳಿಸುತ್ತದೆ.

ಪ್ಯಾನಿಕ್ ಅಟ್ಯಾಕ್ ಒಳಪಟ್ಟ ವ್ಯಕ್ತಿಯನ್ನು ಸ್ವಲ್ಪ ಹೊತ್ತು ನಿಮ್ಮ ಬಳಿ ಕೂರಿಸಿಕೊಳ್ಳಿ:

ನಿಮ್ಮ ಸುತ್ತಮುತ್ತ ಅಥವಾ ಮನೆಯಲ್ಲಿ ಪ್ಯಾನಿಕ್ ಅಟ್ಯಾಕ್ ಆದವರು ಕಂಡುಬಂದರೆ ಆ ವ್ಯಕ್ತಿಯನ್ನು ಆರಾಮದಾಯಕವಾದ ಕುರ್ಚಿ ಅಥವಾ ಸೋಫಾದಲ್ಲಿ ಕುಳಿತುಕೊಳ್ಳಿ. ಸ್ವಲ್ಪ ಹೊತ್ತು ನೀವು ಜೊತೆಗಿದ್ದು ಧೈರ್ಯ ಹೇಳಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 6:26 pm, Sat, 28 January 23

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್