AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Patanjali: ಮಳೆಗಾಲದಲ್ಲಿ ರೋಗಬಾಧೆ ಅಧಿಕ; ಮನೆಮದ್ದು ಅತ್ಯುತ್ತಮ ಪರಿಹಾರ; ಇಲ್ಲಿದೆ ಬಾಬಾ ರಾಮದೇವ್ ಟಿಪ್ಸ್

Patanjali's Baba Ramdev shares home remedies: ಮಳೆಗಾಲದಲ್ಲಿ ಮಳೆ ಬರುವುದರ ಜೊತೆಗೆ ಅದು ಅನೇಕ ರೋಗಗಳನ್ನೂ ತರುತ್ತದೆ. ಈ ಸೀಸನ್​ನಲ್ಲಿ ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯುತ್ತವೆ. ಇದರಿಂದಾಗಿ ಜ್ವರ, ಕೆಮ್ಮು ಮತ್ತು ಶೀತದಂತಹ ಸಮಸ್ಯೆಗಳು ಸಾಮಾನ್ಯವಾಗುತ್ತವೆ. ಇದಕ್ಕೆ ಚಿಕಿತ್ಸೆಯಾಗಿ ಕೆಲ ಮನೆಮದ್ದುಗಳನ್ನು ಅಳವಡಿಸಿಕೊಳ್ಳಬಹುದು. ಬಾಬಾ ರಾಮದೇವ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಮಳೆಗಾಲದಲ್ಲಿ ಬರುವ ರೋಗಗಳನ್ನು ತಪ್ಪಿಸಲು ಸುಲಭ ಮಾರ್ಗಗಳನ್ನು ತಿಳಿಸಿದ್ದಾರೆ.

Patanjali: ಮಳೆಗಾಲದಲ್ಲಿ ರೋಗಬಾಧೆ ಅಧಿಕ; ಮನೆಮದ್ದು ಅತ್ಯುತ್ತಮ ಪರಿಹಾರ; ಇಲ್ಲಿದೆ ಬಾಬಾ ರಾಮದೇವ್ ಟಿಪ್ಸ್
ಬಾಬಾ ರಾಮದೇವ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 22, 2025 | 6:08 PM

Share

Baba Ramdev’s home remedies for monsoon diseases: ಬಾಬಾ ರಾಮದೇವ್ ಬಹಳ ಸಮಯದಿಂದ ಜನರಲ್ಲಿ ಆಯುರ್ವೇದ ಮತ್ತು ಯೋಗದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಅನೇಕ ಕಾಯಿಲೆಗಳನ್ನು ಗುಣಪಡಿಸಲು ಬಾಬಾ ರಾಮದೇವ್ ವಿವಿಧ ಆಯುರ್ವೇದ ಪರಿಹಾರಗಳನ್ನು ಹೇಳುತ್ತಲೇ ಇರುತ್ತಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ತುಂಬಾ ಸಕ್ರಿಯರಾಗಿದ್ದಾರೆ, ಅಲ್ಲಿ ಅವರು ತಮ್ಮ ಪತಂಜಲಿ ಉತ್ಪನ್ನಗಳನ್ನು ಪ್ರಚಾರ ಮಾಡುತ್ತಿರುತ್ತಾರೆ. ಆರೋಗ್ಯಕರ ಜೀವನಕ್ಕಾಗಿ ಅಮೂಲ್ಯ ಸಲಹೆಗಳನ್ನು ಸಹ ಹೇಳುತ್ತಾರೆ. ಈ ಬಾರಿ ಬಾಬಾ ರಾಮದೇವ್ (Baba Ramdev) ಮಳೆಗಾಲದಲ್ಲಿ ಬರುವ ರೋಗಗಳನ್ನು ತಪ್ಪಿಸಲು ಒಳ್ಳೆಯ ಚಿಕಿತ್ಸೆ ಬಗ್ಗೆ ಹೇಳಿದ್ದಾರೆ.

ಮಳೆಗಾಲದಲ್ಲಿ ಬ್ಯಾಕ್ಟೀರಿಯಾ ಮತ್ತು ಫಂಗಲ್ ಇನ್ಫೆಕ್ಷನ್ ಬಹಳ ಬೇಗ ಸಂಭವಿಸುವ ಅವಕಾಶ ಇರುತ್ತೆ. ಫುಡ್ ಪಾಯ್ಸನಿಂಗ್, ಕೆಮ್ಮು, ಶೀತ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳ ಅಪಾಯ ಬಹಳಷ್ಟು ಹೆಚ್ಚಾಗುತ್ತದೆ. ಈ ಋತುವಿನಲ್ಲಿ ವೈರಲ್ ಜ್ವರವೂ ತುಂಬಾ ಸಾಮಾನ್ಯ. ಮಳೆಗಾಲದಲ್ಲಿ ಅನಾರೋಗ್ಯಕ್ಕೆ ಒಳಗಾದಾಗ ದೇಹವು ಒಳಗಿನಿಂದ ದುರ್ಬಲಗೊಳ್ಳುತ್ತದೆ. ಆದ್ದರಿಂದ ವೈರಲ್ ಫಿವರ್ ಅನ್ನು ತಪ್ಪಿಸುವುದು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಬಾಬಾ ರಾಮದೇವ್ ಅವರು ಮಳೆಗಾಲದಲ್ಲಿ ಸಂಭವಿಸುವ ರೋಗಗಳನ್ನು ತಪ್ಪಿಸಲು ನೀಡಿರುವ ಸಲಹೆಗಳನ್ನು ಪಾಲಿಸಿವುದು ಜಾಣತನ.

ಇದನ್ನೂ ಓದಿ: ವಾತ, ಪಿತ್ತ, ಕಫ ದೋಷಗಳು: ಬಾಬಾ ರಾಮದೇವ್​ರಿಂದ ಸುಲಭ ಪರಿಹಾರ

ಮಳೆಗಾಲದಲ್ಲಿ ಬರುವ ರೋಗಗಳು

ಬಾಬಾ ರಾಮದೇವ್ ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ, ಮಳೆಗಾಲದಲ್ಲಿ ಶೀತ, ಕೆಮ್ಮು ಮತ್ತು ಜ್ವರ ತುಂಬಾ ಸಾಮಾನ್ಯ ಎಂದು ಹೇಳಿರುವುದು ಕಂಡುಬರುತ್ತದೆ. ನೀವು ಮಳೆಗಾಲದಲ್ಲಿ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದರೆ, ಅದಕ್ಕಾಗಿ ನೀವು ಮುಲೇಥಿ ಅಥವಾ ಅತಿಮಧುರ (licorice) ರಸವನ್ನು ಕುಡಿಯಬಹುದು. ಇದು ಕೆಮ್ಮು ಮತ್ತು ಶೀತದಿಂದ ಬೇಗನೆ ಪರಿಹಾರ ನೀಡುತ್ತದೆ. ಲೈಕೋರೈಸ್​ನಲ್ಲಿ ಗ್ಲೈಸಿರೈಜಿನ್ (Glycyrrhizin) ಎಂಬ ಸಂಯುಕ್ತ ಇರುತ್ತದೆ, ಇದು ಆಂಟಿವೈರಲ್ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದರ ಹೊರತಾಗಿ, ಇದು ಆ್ಯಂಟಿ ಆಕ್ಸಿಡೆಂಟ್ಸ್​ಗಳ ಅತ್ಯುತ್ತಮ ಮೂಲವಾಗಿದೆ. ಮಿನರಲ್ಸ್, ಕ್ಯಾಲ್ಸಿಯಂ ಮತ್ತು ವಿಟಮಿನ್ ಇ ಮತ್ತು ಬಿ ಕಾಂಪ್ಲೆಕ್ಸ್‌ನಂತಹ ಅಂಶಗಳು ಸಹ ಇದರಲ್ಲಿ ಕಂಡುಬರುತ್ತವೆ.

ಬಾಬಾ ರಾಮದೇವ್ ಅವರ ಇನ್​ಸ್ಟಾ ಪೋಸ್ಟ್

View this post on Instagram

A post shared by Swami Ramdev (@swaamiramdev)

ಅಸ್ವಸ್ಥರಾಗಿದ್ದಾಗ ಆಹಾರ ಕ್ರಮ ಹೇಗಿರಬೇಕು?

ಮಳೆಗಾಲದಲ್ಲಿ ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ, 4-5 ದಿನಗಳವರೆಗೆ ಧಾನ್ಯಗಳನ್ನು ತಿನ್ನುವುದನ್ನು ನಿಲ್ಲಿಸಿ ಎಂದು ಬಾಬಾ ರಾಮದೇವ್ ಹೇಳುತ್ತಾರೆ. ಬದಲಾಗಿ, ಹುರಿದ ಕಡಲೆ, ಖರ್ಜೂರ, ದಾಳಿಂಬೆ, ಪಪ್ಪಾಯಿ ಅಥವಾ ಹಬೆಯಲ್ಲಿ ಬೇಯಿಸಿದ ಸೇಬು ತಿನ್ನಿರಿ. ಇದು ಬಿಟ್ಟು ಬೇರೆ ಏನನ್ನೂ ತಿನ್ನಬೇಡಿ. ಹೀಗೆ ಮಾಡುವುದರಿಂದ, ನೀವು 7 ದಿನಗಳಲ್ಲಿ ಫಲಿತಾಂಶಗಳನ್ನು ಪಡೆಯಲು ಪ್ರಾರಂಭಿಸುತ್ತೀರಿ. ನಿಮಗೆ ಕೆಮ್ಮು, ಶೀತ ಅಥವಾ ಜ್ವರ ಏನೇ ಇದ್ದರೂ ಮಾಯ. ಈ ರೀತಿಯ ಆಹಾರವನ್ನು ತೆಗೆದುಕೊಳ್ಳುವುದರಿಂದ ನಿಮಗೆ ತ್ವರಿತ ಪರಿಹಾರ ಸಿಗುತ್ತದೆ.

ಇದನ್ನೂ ಓದಿ: ಕ್ಯಾನ್ಸರ್ ಚಿಕಿತ್ಸೆಯಲ್ಲಿ Cardiotoxicity ಅಡ್ಡಪರಿಣಾಮ; ಪತಂಜಲಿಯಲ್ಲಿ ಪರಿಹಾರ

ಈ ಕಷಾಯದಿಂದ ಜ್ವರಕ್ಕೆ ಪರಿಹಾರ

ಮಳೆಗಾಲದಲ್ಲಿ ಜ್ವರ ಬಂದರೆ, ಕೇವಲ ಒಂದು ಕಷಾಯ ಕುಡಿಯುವುದರಿಂದ ಪರಿಹಾರ ಸಿಗುತ್ತದೆ ಎಂದು ಬಾಬಾ ರಾಮದೇವ್ ಹೇಳುತ್ತಾರೆ. ಇದಕ್ಕಾಗಿ ಗಿಲೋಯ್, ತುಳಸಿ, ಶುಂಠಿ, ಲವಂಗ ಮತ್ತು ಕರಿಮೆಣಸನ್ನು ಸೇರಿಸಿ ಕಷಾಯ ತಯಾರಿಸಿ ಕುಡಿಯಬೇಕು. ಜ್ವರದಿಂದ ಬೇಗ ಗುಣಮುಖರಾಗಲು ಇದು ಸಹಾಯ ಮಾಡುತ್ತದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ