AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳುನಾಡಿನಲ್ಲಿ ಇಂದಿನಿಂದ ಪತ್ತನಾಜೆ ಆರಂಭ : ಧಾರ್ಮಿಕ ಕಾರ್ಯಕ್ಕೆ ಬ್ರೇಕ್, ಕೃಷಿಯತ್ತ ಚಿತ್ತ, ಏನಿದರ ವಿಶೇಷತೆ

ಕರಾವಳಿ ಭಾಗದ ಜನರ ಆಚಾರ, ವಿಚಾರ, ಸಂಪ್ರದಾಯಗಳು ಹಾಗೂ ಆಚರಣೆಗಳು ವಿಭಿನ್ನ. ಆದರೆ ಒಂದೊಂದು ಆಚರಣೆಯ ಹಿಂದೆಯೂ ವಿಶಿಷ್ಟವಾದ ಕಾರಣಗಳಿವೆ, ಅವರದ್ದೇ ಆದ ನಂಬಿಕೆಗಳಿವೆ. ಇವತ್ತಿಗೂ ಕೂಡ ತುಳುನಾಡಿನಲ್ಲಿ ಪತ್ತನಾಜೆ ಎನ್ನುವ ವಿಶಿಷ್ಟ ಆಚರಣೆಯು ಜಾರಿಯಲ್ಲಿದೆ. ಈ ಪತ್ತೆನಾಜೆಯ ಬಳಿಕ ತುಳುನಾಡಿನಲ್ಲಿ ಅಂಕ, ಆಯನ, ನೇಮ ಮುಂತಾದ ಧಾರ್ಮಿಕ ಉತ್ಸವಗಳು ನಡೆಯುವುದೇ ಇಲ್ಲ.

ತುಳುನಾಡಿನಲ್ಲಿ ಇಂದಿನಿಂದ ಪತ್ತನಾಜೆ ಆರಂಭ : ಧಾರ್ಮಿಕ ಕಾರ್ಯಕ್ಕೆ ಬ್ರೇಕ್, ಕೃಷಿಯತ್ತ ಚಿತ್ತ,  ಏನಿದರ ವಿಶೇಷತೆ
ಸಾಯಿನಂದಾ
| Edited By: |

Updated on: May 24, 2024 | 12:37 PM

Share

ಪರಶುರಾಮನ ಸೃಷ್ಟಿಯಾಗಿರುವ ತುಳುನಾಡಿನ ಸಂಸ್ಕೃತಿಯ ನೆಲೆಬೀಡು. ಈ ತುಳುನಾಡು ತನ್ನದೇ ಆದ ವೈಶಿಷ್ಟತೆಗಳನ್ನು ಒಳಗೊಂಡಿದ್ದು, ಇಲ್ಲಿನ ಆಚಾರ ವಿಚಾರಗಳು ಬೇರೆಲ್ಲೂ ನೋಡಲು ಸಾಧ್ಯವಿಲ್ಲ. ತುಳುನಾಡಿನ ವಿಶೇಷ ಆಚರಣೆಗಳಲ್ಲಿ ಪತ್ತನಾಜೆ ಕೂಡ ಒಂದಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಿಂದ ಹಿಡಿದು ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಬಾರ್ಕೂರು ಈ ಪ್ರಾಂತ್ಯದವರೆಗೆ ಈ ಪತ್ತನಾಜೆ ಆಚರಿಸಲಾಗುತ್ತದೆ.

ತುಳುನಾಡಿನ ಪತ್ತನಾಜೆಯ ಆಚರಣೆಯು ಹೇಗಿರುತ್ತದೆ?

ಪ್ರತಿ ವರ್ಷ ಪತ್ತನಾಜೆಯು ಮೇ 24 ರಂದು ಆರಂಭಗೊಳ್ಳುತ್ತದೆ. ವೃಷಭ ಮಾಸ ಅಂದರೆ ತುಳುವಿನ ಪಂಚಾಂಗದಲ್ಲಿ ಬೇಶ ತಿಂಗಳು ಎಂದರ್ಥ. ಬೇಶ ತಿಂಗಳಿನಲ್ಲಿ ಬರುವ 10ನೇ ದಿನಕ್ಕೆ ಪತ್ತನಾಜೆ ಎನ್ನಲಾಗುತ್ತದೆ. ಈ ಪತ್ತನಾಜೆ ಆರಂಭಗೊಂಡ ಬಳಿಕ ಕರಾವಳಿ ಭಾಗದಲ್ಲಿ ಅಂಕ, ಆಯನ, ನೇಮ ಮುಂತಾದ ಧಾರ್ಮಿಕ ಉತ್ಸವಗಳು ನಡೆಯುವುದಿಲ್ಲ. ಅದಲ್ಲದೇ, ಯಕ್ಷಗಾನ ಮೇಳಗಳ ಕಲಾವಿದರು ಪ್ರದರ್ಶನ ಮುಗಿಸಿ ಪತ್ತನಾಜೆಯಂದು ಕಾಲಗೆಜ್ಜೆಯನ್ನು ಬಿಚ್ಚುತ್ತಾರೆ. ಪತ್ತನಾಜೆಯ ಬಳಿಕ ಮಳೆಗಾಲವು ಆರಂಭವಾಗುತ್ತದೆ ಎನ್ನುವುದು ತುಳುವರ ನಂಬಿಕೆ.

ಯಾವುದೇ ಧಾರ್ಮಿಕ ಕಾರ್ಯವು ನಡೆಯುವುದಿಲ್ಲ

ತುಳುನಾಡು ದೈವ ದೇವರುಗಳು ನೆಲೆಬೀಡು. ಹೀಗಾಗಿ ಇಲ್ಲಿ ಭೂತಗಳ ಕೋಲಗಳು ಇಲ್ಲಿ ನಡೆಯುತ್ತಲೇ ಇರುತ್ತದೆ. ಆದರೆ ತುಳುನಾಡಿನ ಜನರ ನಂಬಿಕೆಯ ಪ್ರಕಾರವಾಗಿ ಈ ಎಲ್ಲಾ ದೈವಗಳು ಪತ್ತನಾಜೆಯ ಬಳಿಕ ಘಟ್ಟಪ್ರದೇಶಕ್ಕೆ ತೆರಳುತ್ತದೆ ಎನ್ನಲಾಗುತ್ತದೆ. ಹೀಗಾಗಿ ಪತ್ತನಾಜೆಯ ಬಳಿಕ ಯಾವುದೇ ದೈವ ದೇವರ ಕಾರ್ಯಕ್ರಮಗಳನ್ನು ನಡೆಸುವುದಿಲ್ಲ. ದೀಪಾವಳಿ ಆರಂಭಗೊಂಡ ಬಳಿಕವಷ್ಟೇ ಧಾರ್ಮಿಕ ಕಾರ್ಯಗಳು ಹಾಗೂ ಉತ್ಸವಗಳು ನಡೆಯುತ್ತವೆ.

ಪತ್ತನಾಜೆ ಆಚರಣೆಯು ಆರಂಭಗೊಂಡಿದ್ದು ಏಕೆ?

ತುಳುನಾಡಿನವರು ಮಣ್ಣಿನ ಮಕ್ಕಳು. ಈ ಮಳೆಗಾಲದಲ್ಲಿ ಇಲ್ಲಿ ಕೃಷಿ ಚಟುವಟಿಕೆಗಳು ನಡೆಯುತ್ತಿರುತ್ತದೆ. ಪತ್ತನಾಜೆಯ ಬಳಿಕ ಮಳೆಯು ಜೋರಾಗಿರುತ್ತದೆ. ಈ ಸಮಯದಲ್ಲಿ ಯಾವುದೇ ಜಾತ್ರೆ, ಅಂಕ ಆಯನ, ಉತ್ಸವಾದಿಗಳನ್ನು ನಡೆಸಲು ಸಾಧ್ಯವಾಗದು. ಮಳೆಗಾಲಕ್ಕೂ ಮುನ್ನ ಈ ಎಲ್ಲಾ ದೈವ ದೇವರ ಉತ್ಸವ ಜಾತ್ರೆಗಳನ್ನು ಮುಗಿಸಿಕೊಳ್ಳಲಾಗುತ್ತದೆ. ಈ ಪತ್ತನಾಜೆ ದಿನವನ್ನು ಉತ್ಸವಗಳ ಕೊನೆಯ ದಿನವಾಗಿರುತ್ತದೆ. ಅದಲ್ಲದೇ ಮನೋರಂಜನೆಗೆ ಬ್ರೇಕ್ ಹಾಕಿ, ಕೃಷಿ ಚಟುವಟಿಕೆ ಹಾಗೂ ಮಳೆಗಾಲಕ್ಕೆ ಬೇಕಾಗುವ ತರಕಾರಿ, ಅಕ್ಕಿ ದವಸಧಾನ್ಯಗಳನ್ನು ಸಂಗ್ರಹಿಸಡಲಾಗುತ್ತದೆ. ಈ ಸಮಯದಲ್ಲಿ ಕೃಷಿ ಚಟುವಟಿಕೆಯಲ್ಲಿ ಇಲ್ಲಿನ ಜನರು ನಿರತರಾಗುತ್ತಾರೆ. ಈ ಸಂಪ್ರದಾಯವನ್ನು ತುಳುನಾಡಿನ ಜನರು ಇಂದಿಗೂ ಮುಂದುವರೆಸಿಕೊಂಡು ಬರುತ್ತಿದ್ದಾರೆ.

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ