AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳುನಾಡಿನಲ್ಲಿ ಇಂದಿನಿಂದ ಪತ್ತನಾಜೆ ಆರಂಭ : ಧಾರ್ಮಿಕ ಕಾರ್ಯಕ್ಕೆ ಬ್ರೇಕ್, ಕೃಷಿಯತ್ತ ಚಿತ್ತ, ಏನಿದರ ವಿಶೇಷತೆ

ಕರಾವಳಿ ಭಾಗದ ಜನರ ಆಚಾರ, ವಿಚಾರ, ಸಂಪ್ರದಾಯಗಳು ಹಾಗೂ ಆಚರಣೆಗಳು ವಿಭಿನ್ನ. ಆದರೆ ಒಂದೊಂದು ಆಚರಣೆಯ ಹಿಂದೆಯೂ ವಿಶಿಷ್ಟವಾದ ಕಾರಣಗಳಿವೆ, ಅವರದ್ದೇ ಆದ ನಂಬಿಕೆಗಳಿವೆ. ಇವತ್ತಿಗೂ ಕೂಡ ತುಳುನಾಡಿನಲ್ಲಿ ಪತ್ತನಾಜೆ ಎನ್ನುವ ವಿಶಿಷ್ಟ ಆಚರಣೆಯು ಜಾರಿಯಲ್ಲಿದೆ. ಈ ಪತ್ತೆನಾಜೆಯ ಬಳಿಕ ತುಳುನಾಡಿನಲ್ಲಿ ಅಂಕ, ಆಯನ, ನೇಮ ಮುಂತಾದ ಧಾರ್ಮಿಕ ಉತ್ಸವಗಳು ನಡೆಯುವುದೇ ಇಲ್ಲ.

ತುಳುನಾಡಿನಲ್ಲಿ ಇಂದಿನಿಂದ ಪತ್ತನಾಜೆ ಆರಂಭ : ಧಾರ್ಮಿಕ ಕಾರ್ಯಕ್ಕೆ ಬ್ರೇಕ್, ಕೃಷಿಯತ್ತ ಚಿತ್ತ,  ಏನಿದರ ವಿಶೇಷತೆ
ಸಾಯಿನಂದಾ
| Edited By: |

Updated on: May 24, 2024 | 12:37 PM

Share

ಪರಶುರಾಮನ ಸೃಷ್ಟಿಯಾಗಿರುವ ತುಳುನಾಡಿನ ಸಂಸ್ಕೃತಿಯ ನೆಲೆಬೀಡು. ಈ ತುಳುನಾಡು ತನ್ನದೇ ಆದ ವೈಶಿಷ್ಟತೆಗಳನ್ನು ಒಳಗೊಂಡಿದ್ದು, ಇಲ್ಲಿನ ಆಚಾರ ವಿಚಾರಗಳು ಬೇರೆಲ್ಲೂ ನೋಡಲು ಸಾಧ್ಯವಿಲ್ಲ. ತುಳುನಾಡಿನ ವಿಶೇಷ ಆಚರಣೆಗಳಲ್ಲಿ ಪತ್ತನಾಜೆ ಕೂಡ ಒಂದಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಿಂದ ಹಿಡಿದು ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಬಾರ್ಕೂರು ಈ ಪ್ರಾಂತ್ಯದವರೆಗೆ ಈ ಪತ್ತನಾಜೆ ಆಚರಿಸಲಾಗುತ್ತದೆ.

ತುಳುನಾಡಿನ ಪತ್ತನಾಜೆಯ ಆಚರಣೆಯು ಹೇಗಿರುತ್ತದೆ?

ಪ್ರತಿ ವರ್ಷ ಪತ್ತನಾಜೆಯು ಮೇ 24 ರಂದು ಆರಂಭಗೊಳ್ಳುತ್ತದೆ. ವೃಷಭ ಮಾಸ ಅಂದರೆ ತುಳುವಿನ ಪಂಚಾಂಗದಲ್ಲಿ ಬೇಶ ತಿಂಗಳು ಎಂದರ್ಥ. ಬೇಶ ತಿಂಗಳಿನಲ್ಲಿ ಬರುವ 10ನೇ ದಿನಕ್ಕೆ ಪತ್ತನಾಜೆ ಎನ್ನಲಾಗುತ್ತದೆ. ಈ ಪತ್ತನಾಜೆ ಆರಂಭಗೊಂಡ ಬಳಿಕ ಕರಾವಳಿ ಭಾಗದಲ್ಲಿ ಅಂಕ, ಆಯನ, ನೇಮ ಮುಂತಾದ ಧಾರ್ಮಿಕ ಉತ್ಸವಗಳು ನಡೆಯುವುದಿಲ್ಲ. ಅದಲ್ಲದೇ, ಯಕ್ಷಗಾನ ಮೇಳಗಳ ಕಲಾವಿದರು ಪ್ರದರ್ಶನ ಮುಗಿಸಿ ಪತ್ತನಾಜೆಯಂದು ಕಾಲಗೆಜ್ಜೆಯನ್ನು ಬಿಚ್ಚುತ್ತಾರೆ. ಪತ್ತನಾಜೆಯ ಬಳಿಕ ಮಳೆಗಾಲವು ಆರಂಭವಾಗುತ್ತದೆ ಎನ್ನುವುದು ತುಳುವರ ನಂಬಿಕೆ.

ಯಾವುದೇ ಧಾರ್ಮಿಕ ಕಾರ್ಯವು ನಡೆಯುವುದಿಲ್ಲ

ತುಳುನಾಡು ದೈವ ದೇವರುಗಳು ನೆಲೆಬೀಡು. ಹೀಗಾಗಿ ಇಲ್ಲಿ ಭೂತಗಳ ಕೋಲಗಳು ಇಲ್ಲಿ ನಡೆಯುತ್ತಲೇ ಇರುತ್ತದೆ. ಆದರೆ ತುಳುನಾಡಿನ ಜನರ ನಂಬಿಕೆಯ ಪ್ರಕಾರವಾಗಿ ಈ ಎಲ್ಲಾ ದೈವಗಳು ಪತ್ತನಾಜೆಯ ಬಳಿಕ ಘಟ್ಟಪ್ರದೇಶಕ್ಕೆ ತೆರಳುತ್ತದೆ ಎನ್ನಲಾಗುತ್ತದೆ. ಹೀಗಾಗಿ ಪತ್ತನಾಜೆಯ ಬಳಿಕ ಯಾವುದೇ ದೈವ ದೇವರ ಕಾರ್ಯಕ್ರಮಗಳನ್ನು ನಡೆಸುವುದಿಲ್ಲ. ದೀಪಾವಳಿ ಆರಂಭಗೊಂಡ ಬಳಿಕವಷ್ಟೇ ಧಾರ್ಮಿಕ ಕಾರ್ಯಗಳು ಹಾಗೂ ಉತ್ಸವಗಳು ನಡೆಯುತ್ತವೆ.

ಪತ್ತನಾಜೆ ಆಚರಣೆಯು ಆರಂಭಗೊಂಡಿದ್ದು ಏಕೆ?

ತುಳುನಾಡಿನವರು ಮಣ್ಣಿನ ಮಕ್ಕಳು. ಈ ಮಳೆಗಾಲದಲ್ಲಿ ಇಲ್ಲಿ ಕೃಷಿ ಚಟುವಟಿಕೆಗಳು ನಡೆಯುತ್ತಿರುತ್ತದೆ. ಪತ್ತನಾಜೆಯ ಬಳಿಕ ಮಳೆಯು ಜೋರಾಗಿರುತ್ತದೆ. ಈ ಸಮಯದಲ್ಲಿ ಯಾವುದೇ ಜಾತ್ರೆ, ಅಂಕ ಆಯನ, ಉತ್ಸವಾದಿಗಳನ್ನು ನಡೆಸಲು ಸಾಧ್ಯವಾಗದು. ಮಳೆಗಾಲಕ್ಕೂ ಮುನ್ನ ಈ ಎಲ್ಲಾ ದೈವ ದೇವರ ಉತ್ಸವ ಜಾತ್ರೆಗಳನ್ನು ಮುಗಿಸಿಕೊಳ್ಳಲಾಗುತ್ತದೆ. ಈ ಪತ್ತನಾಜೆ ದಿನವನ್ನು ಉತ್ಸವಗಳ ಕೊನೆಯ ದಿನವಾಗಿರುತ್ತದೆ. ಅದಲ್ಲದೇ ಮನೋರಂಜನೆಗೆ ಬ್ರೇಕ್ ಹಾಕಿ, ಕೃಷಿ ಚಟುವಟಿಕೆ ಹಾಗೂ ಮಳೆಗಾಲಕ್ಕೆ ಬೇಕಾಗುವ ತರಕಾರಿ, ಅಕ್ಕಿ ದವಸಧಾನ್ಯಗಳನ್ನು ಸಂಗ್ರಹಿಸಡಲಾಗುತ್ತದೆ. ಈ ಸಮಯದಲ್ಲಿ ಕೃಷಿ ಚಟುವಟಿಕೆಯಲ್ಲಿ ಇಲ್ಲಿನ ಜನರು ನಿರತರಾಗುತ್ತಾರೆ. ಈ ಸಂಪ್ರದಾಯವನ್ನು ತುಳುನಾಡಿನ ಜನರು ಇಂದಿಗೂ ಮುಂದುವರೆಸಿಕೊಂಡು ಬರುತ್ತಿದ್ದಾರೆ.

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ