AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ನೋಡಿ, ನಿಮ್ಮ ಬುದ್ಧಿವಂತಿಕೆ ಹೇಗಿದೆ ಪರೀಕ್ಷಿಸಿ

ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಿಸಿದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಈ ಚಿತ್ರಗಳ ಮುಖಾಂತರ ನೀವು ದೃಢ ನಿಶ್ಚಯವನ್ನು ಹೊಂದಿರುವವರೇ, ಸ್ವಾಭಿಮಾನಿಯೇ ಅಥವಾ ಸಹೃದಯಿಯೇ ಅಂತೆಲ್ಲಾ ನಿಮ್ಮೊಳಗೆ ಅಡಗಿರುವ ನಿಗೂಢ ಗುಣ ಸ್ವಭಾವವನ್ನು ಪರೀಕ್ಷಿಸಿರುತ್ತೀರಿ ಅಲ್ವಾ. ಅದೇ ರೀತಿ ಇಂದಿನ ವ್ಯಕ್ತಿತ್ವ ಪರೀಕ್ಷೆಯಲ್ಲಿ ನಿಮ್ಮ ಬುದ್ಧಿವಂತಿಕೆ ಹೇಗಿದೆ ಎಂಬುದನ್ನು ಪರೀಕ್ಷಿಸಿ

Personality Test: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ನೋಡಿ, ನಿಮ್ಮ ಬುದ್ಧಿವಂತಿಕೆ ಹೇಗಿದೆ ಪರೀಕ್ಷಿಸಿ
ವ್ಯಕ್ತಿತ್ವ ಪರೀಕ್ಷೆImage Credit source: okdario.com
ಮಾಲಾಶ್ರೀ ಅಂಚನ್​
|

Updated on: May 28, 2025 | 3:50 PM

Share

ಒಬ್ಬ ವ್ಯಕ್ತಿ ಮಾತನಾಡುವ ರೀತಿ,  ಜೀವನಶೈಲಿ,  ಹಾಕಿಕೊಳ್ಳುವ ಬಟ್ಟೆ,  ವರ್ತನೆ ಮತ್ತು ನಡವಳಿಕೆಯಿಂದ ಜನರು ಈತ ಇಂತಹ ಸ್ವಭಾವದ ವ್ಯಕ್ತಿಯೆಂದು ಆತನ ವ್ಯಕ್ತಿತ್ವವನ್ನು (Personality) ಅಂದಾಜಿಸುತ್ತಾರೆ. ಅಷ್ಟೇ ಯಾಕೆ ನಮಗೆ ತಿಳಿಯದಿರುವ, ನಮ್ಮ ರಹಸ್ಯ ವ್ಯಕ್ತಿತ್ವವನ್ನು ದೇಹಕಾರ ಮತ್ತು ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರ ಮೂಲಕವೂ ನಾವು ತಿಳಿಯಬಹುದು. ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಪಟ್ಟ ಇಂತಹ ಸಾಕಷ್ಟು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಆನೆ ಅಥವ ಮರಗಳನ್ನೊಳಗೊಂಡ ಭೂ ದೃಶ್ಯ ಇವೆರಡರಲ್ಲಿ ನಿಮಗೇನು ಕಾಣಿಸಿತು ಎಂಬುದರ ಮೇಲೆ ನೀವು ಬುದ್ಧಿವಂತ (intelligent) ಮತ್ತು ಸಂವೇದನಾಶೀಲ ವ್ಯಕ್ತಿಯೇ ಎಂಬುದನ್ನು ಪರೀಕ್ಷಿಸಿ.

ನೀವೆಷ್ಟು ಬುದ್ಧಿವಂತರು ಎಂಬುದನ್ನು ತಿಳಿಸುವ ಚಿತ್ರವಿದು:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು okdiario.com ಪೇಜ್‌ನಲ್ಲಿ ಶೇರ್‌ ಮಾಡಲಾಗಿದೆ. ಈ ಚಿತ್ರದಲ್ಲಿ ಕೆಲವರಿಗೆ ಆನೆಯ ಆಕಾರ ಕಂಡರೆ ಇನ್ನೂ ಕೆಲವರಿಗೆ ಮರಗಳನ್ನೊಳಗೊಂಡ ಭೂ ದೃಶ್ಯ ಕಾಣಿಸಬಹುದು. ಇವೆರಡರಲ್ಲಿ ನಿಮಗೆ ಮೊದಲು ಕಂಡಿದ್ದೇನು ಎಂಬ ಆಧಾರದ ಮೇಲೆ ನೀವು ನಿಮ್ಮ ಬುದ್ಧಿವಂತಿಕೆ ಹೇಗಿದೆ, ನಿಮ್ಮ ಗುಣ ಸ್ವಭಾವ ಹೇಗಿದೆ ಎಂಬುದನ್ನು ಪರೀಕ್ಷಿಸಿ.

ಆನೆ ಕಾಣಿಸಿದರೆ: ಈ ಚಿತ್ರದಲ್ಲಿ ಮೊದಲಿಗೆ ನಿಮಗೆ ಆನೆ ಕಾಣಿಸಿದರೆ ನೀವು ತಾಳ್ಮೆ ಮತ್ತು ಭಾವನಾತ್ಮಕ ಒಳನೋಟಕ್ಕೆ ಆದ್ಯತೆ ನೀಡುವ ವ್ಯಕ್ತಿಯೆಂದು ಅರ್ಥ. ಅಲ್ಲದೆ ತರ್ಕಬದ್ಧ ವ್ಯಕ್ತಿಯಾಗಿರುವ ನೀವು ಯಾವುದೇ ಕಾರ್ಯವನ್ನು ಮಾಡುವುದಾದರೂ ಬಹಳ ಎಚ್ಚರಿಕೆಯಿಂದ ಕಾಲಿಡುತ್ತೀರಿ. ಜೊತೆಗೆ ಪ್ರಾಯೋಗಿಕ ಬುದ್ಧಿಮತ್ತೆಯನ್ನು ಹೊಂದಿರುವ ನೀವು ಸಾಮಾಜಿಕ ಸನ್ನಿವೇಶಗಳನ್ನು ತಿಳಿದುಕೊಳ್ಳುವ, ಅನಗತ್ಯ ನಾಟಕಗಳಿಲ್ಲದೆ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯವನ್ನು ಹೊಂದಿದ್ದೀರಿ. ಒಟ್ಟಾರೆಯಾಗಿ ಪ್ರತಿಯೊಂದು ವಿಷಯಗಳನ್ನು ತರ್ಕಬದ್ಧವಾಗಿ ವೀಕ್ಷಿಸುವ ನೀವು ಪ್ರಾಯೋಗಿಕ ಬುದ್ಧಿವಂತಿಕೆಯ ಸ್ವಭಾವವನ್ನು ಹೊಂದಿರುವವರಾಗಿದ್ದೀರಿ.

ಇದನ್ನೂ ಓದಿ
Image
ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು ಕಂಡುಹಿಡಿಯಬಲ್ಲಿರೇ?
Image
ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ ನೋಡಿ, ನಿಮ್ಮ ವ್ಯಕ್ತಿತ್ವ ಪರೀಕ್ಷಿಸಿ
Image
ನಿಮ್ಮ ರಹಸ್ಯ ಸಾಮರ್ಥ್ಯವನ್ನು ತಿಳಿಸುತ್ತೆ ಈ ಚಿತ್ರ
Image
ನಿಮ್ಮ ವ್ಯಕ್ತಿತ್ವ ತಿಳಿಸುತ್ತೆ ನೀವು ಕೈ ಕಟ್ಟಿ ನಿಲ್ಲುವ ಸ್ಟೈಲ್

ಇದನ್ನೂ ಓದಿ: ಕಣ್ಣಿಗೊಂದು ಸವಾಲ್;‌ ಜಸ್ಟ್ 9 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿ ಅಡಗಿರುವ ಬೆಕ್ಕನ್ನು ಹುಡುಕಿ ನೋಡೋಣ

ಮೊದಲು ಭೂ ದೃಶ್ಯ ಕಾಣಿಸಿದರೆ: ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನಿಮಗೇನಾದರೂ ಮೊದಲು ಮರಗಳನ್ನೊಳಗೊಂಡ ಭೂದೃಶ್ಯ ಕಾಣಿಸಿದರೆ ನೀವು ಉನ್ನತ ಮಟ್ಟದ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ನಿಷ್ಠೆಯನ್ನು ಹೊಂದಿರುವವರು ಎಂದರ್ಥ. ನೀವು ಸಂಬಂಧಗಳಿಗೆ ಹೆಚ್ಚಿನ ಮೌಲ್ಯವನ್ನು ನೀಡುತ್ತೀರಿ. ಇತರರ ಮನಸ್ಸಿನಲ್ಲಿ ಉಂಟಾಗುವ ಸೂಕ್ಷ್ಮ ಬದಲಾವಣೆಗಳನ್ನು ಸಹ ನೀವು ಗಮನಿಸುತ್ತೀರಿ. ಅಲ್ಲದೆ ನೀವು ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವತ್ತ ಹೆಚ್ಚಿನ ಒಲವನ್ನು ಹೊಂದಿರುತ್ತೀರಿ. ಹೌದು ಕೆಲವೊಮ್ಮೆ ನಿಮ್ಮ ಸ್ವಂತ ಅಗತ್ಯಗಳನ್ನೇ ಕಡೆಗಣಿಸಿ ನೀವು ಇತರರ ಅಗತ್ಯಗಳಿಗೆ ನೀವು ಹೆಚ್ಚಿನ ಆದ್ಯತೆ ನೀಡುತ್ತೀರಿ. ಒಟ್ಟಾರೆಯಾಗಿ ನೀವು ಇತರರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳುವ, ಇತತರಿಗೆ ಸಹಾಯ ಮಾಡುವ ಭಾವನಾತ್ಮಕ ಬುದ್ಧಿವಂತಿಕೆಯ ವ್ಯಕ್ತಿತ್ವದವರಾಗಿದ್ದೀರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!