AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ನಿಮ್ಮ ವ್ಯಕ್ತಿತ್ವ ಹೇಗಿದೆಯೆಂದು ಬಹಿರಂಗಪಡಿಸುವ ಚಿತ್ರವಿದು

ಆಪ್ಟಿಕಲ್‌ ಇಲ್ಯೂಷನ್‌ ನಮ್ಮ ಕಣ್ಣಿಗೆ ಭ್ರಮೆಯನ್ನು ಉಂಟು ಮಾಡುವ, ಬುದ್ಧಿವಂತಿಕೆಗೆ ಸವಾಲೊಡ್ಡುವ ಒಗಟಿನ ಆಟವಾಗಿದೆ. ಈ ಒಗಟಿನ ಆಟಗಳು ಮೆದುಳಿಗೆ ವ್ಯಾಯಾಮ ನೀಡುವುದು ಮಾತ್ರವಲ್ಲದೆ ವ್ಯಕ್ತಿತ್ವದ ರಹಸ್ಯವನ್ನು ಸಹ ತಿಳಿಸುತ್ತದೆ. ಇಂತಹ ಸಾಕಷ್ಟು ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ನಿಮಗೆ ಮೊದಲು ಯಾವ ಅಂಶ ಕಾಣಿಸಿತು ಎಂಬುದರ ಆಧಾರದ ಮೇಲೆ ನೀವು ಶಾಂತ ಸ್ವಭಾವದ ವ್ಯಕ್ತಿಗಳೇ ಅಥವಾ ಜವಾಬ್ದಾರಿಯುತ ವ್ಯಕ್ತಿಗಳೇ ಎಂಬುದನ್ನು ಪರೀಕ್ಷಿಸಿ.

Personality Test: ನಿಮ್ಮ ವ್ಯಕ್ತಿತ್ವ ಹೇಗಿದೆಯೆಂದು ಬಹಿರಂಗಪಡಿಸುವ ಚಿತ್ರವಿದು
ವ್ಯಕ್ತಿತ್ವ ಪರೀಕ್ಷೆImage Credit source: Times Of India
ಮಾಲಾಶ್ರೀ ಅಂಚನ್​
|

Updated on: Oct 19, 2025 | 3:12 PM

Share

ರಾಶಿ, ನಕ್ಷತ್ರ, ಹುಟ್ಟಿದ ದಿನಾಂಕದ ಆಧಾರ ಮೇಲೆ ಜ್ಯೋತಿಷ್ಯಶಾಸ್ತ್ರ, ಸಂಖ್ಯಾ ಶಾಸ್ತ್ರದ ಮೂಲಕ ವ್ಯಕ್ತಿಯ ಭವಿಷ್ಯ ಹೇಗಿದೆ, ಗುಣ ಸ್ವಭಾವ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವಂತೆ ವ್ಯಕ್ತಿತ್ವ ಪರೀಕ್ಷೆಯ (Personality Test) ವಿಧಾನಗಳ ಮೂಲಕವೂ ಒಬ್ಬ ವ್ಯಕ್ತಿಯ ಗುಣ ಸ್ವಭಾವ, ಆತನ ಭಾವನಾತ್ಮಕ ನಿಲುವುಗಳನ್ನು ತಿಳಿದುಕೊಳ್ಳಬಹುದು. ಈ ವ್ಯಕ್ತಿತ್ವ ಪರೀಕ್ಷೆಯಲ್ಲಿ ಸಾಕಷ್ಟು ವಿಧಗಳಿದ್ದು, ಅವುಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಕೂಡ ಒಂದು. ಹೌದು ಕಣ್ಣಿಗೆ ಭ್ರಮೆಯನ್ನು ಉಂಟು ಮಾಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಯಾವ ಅಂಶವನ್ನು ಮೊದಲು ಗಮನಿಸುತ್ತೀರಿ ಎಂಬುದರ ಆಧಾರದ ಮೇಲೆ ನೀವು ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ಪರೀಕ್ಷಿಸಬಹುದು. ಇಲ್ಲೊಂದು ಅದೇ ರೀತಿಯ ಚಿತ್ರವೊಂದು ವೈರಲ್‌ ಆಗಿದ್ದು, ಅದರಲ್ಲಿ ಚಿಟ್ಟೆ ಅಥವಾ ಹುಲಿ/ಸಿಂಹ ನಿಮಗ್ಯಾವ ಅಂಶ ಕಾಣಿಸಿತು ಎಂಬುದರ ಮೇಲೆ ನೀವು ಶಾಂತ ಸ್ವಭಾವದ ವ್ಯಕ್ತಿಗಳೇ ಅಥವಾ ಜವಾಬ್ದಾರಿಯುತ ವ್ಯಕ್ತಿಗಳೇ ಎಂಬುದನ್ನು ಟೆಸ್ಟ್‌ ಮಾಡಿ.

ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ತಿಳಿಸುವ ಚಿತ್ರವಿದು:

ಮೊದಲು ಚಿಟ್ಟೆಯನ್ನು ನೋಡಿದರೆ:  ಈ ಚಿತ್ರದಲ್ಲಿ ನಿಮಗೆ ಮೊದಲು ಚಿಟ್ಟೆ ಕಾಣಿಸಿದರೆ ನೀವು ವಿಷಯಗಳನ್ನು ನಿಮ್ಮೊಳಗೆ ಇಟ್ಟುಕೊಳ್ಳುವ ಪ್ರವೃತ್ತಿಯನ್ನು ಹೊಂದಿದ್ದೀರಿ ಮತ್ತು ನಿಮ್ಮಲ್ಲಿ ಹಲವರು ಅಂತರ್ಮುಖಿಗಳು ಎಂದರ್ಥ.  ಶಾಂತ ಸ್ವಭಾವದವರಾದ ನೀವು ಎಂತಹ ಒತ್ತಡದ ಪರಿಸ್ಥಿತಿಯಲ್ಲೂ ಶಾಂತವಾಗಿಯೇ ಇರುತ್ತೀರಿ.  ಜನದಟ್ಟಣೆಯನ್ನು ಇಷ್ಟಪಡದ ನೀವು ಯಾವಾಗಲೂ ಏಕಾಂತದಲ್ಲಿರಲು ಬಯಸುತ್ತೀರಿ. ನೀವು ಸತ್ಯವಂತರು ಮತ್ತು ನ್ಯಾಯಯುತರು, ಆದ್ದರಿಂದ ನಿಮ್ಮ ಸತ್ಯ, ನೇರ ನುಡಿ ಅನೇಕರಿಗೆ ನೋವುಂಟುಮಾಡುವ ಸಾಧ್ಯತೆ ಇರುತ್ತದೆ.  ನೀವು ನಿಮ್ಮ ಆತ್ಮೀಯರೊಂದಿಗೆ ಮಾತ್ರ ಇರಲು ಇಷ್ಟಪಡುತ್ತೀರಿ. ಅವರನ್ನು ಅತಿಯಾಗಿ ಪ್ರೀತಿಸುತ್ತೀರಿ, ಕಾಳಜಿ ವಹಿಸುತ್ತೀರಿ ಮತ್ತು ಅವರನ್ನು ಅತಿಯಾಗಿ ನಂಬುತ್ತೀರಿ ಆದ್ದರಿಂದ ನಿಮ್ಮ ನಂಬಿಕೆಯನ್ನು ಯಾರು ಹಾಳು ಮಾಡಬಾರದೆಂದರೆ ನೀವು ಆರೋಗ್ಯಕರ ಗಡಿಯನ್ನು ಕಾಪಾಡಿಕೊಳ್ಳುವುದು ತುಂಬಾನೇ ಮುಖ್ಯ.

ಇದನ್ನೂ ಓದಿ:  ನೀವು ಕೈ ಮುಷ್ಟಿ ಹಿಡಿಯುವ ಶೈಲಿಯಿಂದ ನೀವೆಂಥಾ ವ್ಯಕ್ತಿ ಎಂಬುದನ್ನು ಹೇಳಿಬಿಡ್ಬೋದು  

ಇದನ್ನೂ ಓದಿ
Image
ಕೈ ಮುಷ್ಟಿ ಹಿಡಿದುಕೊಳ್ಳವ ಶೈಲಿಯಿಂದ ತಿಳಿಯಬಹುದು ವ್ಯಕ್ತಿತ್ವದ ರಹಸ್ಯ
Image
ಕುತ್ತಿಗೆಯ ಉದ್ದ ವ್ಯಕ್ತಿಯ ಗುಪ್ತ ವ್ಯಕ್ತಿತ್ವ ಲಕ್ಷಣಗಳನ್ನು ತಿಳಿಸುತ್ತದೆ
Image
ಈ ಚಿತ್ರದಲ್ಲಿ ನಿಮ್ಮ ಆಯ್ಕೆಯ ಸಸ್ಯ ನಿಮ್ಮ ವ್ಯಕ್ತಿತ್ವದ ರಹಸ್ಯ ಹೇಳಬಲ್ಲದು
Image
ನೀವು ಎಂತಹ ವ್ಯಕ್ತಿಯೆಂದು ಬಹಿರಂಗಪಡಿಸುತ್ತದೆ ನಿಮ್ಮ ಕಂಗಳ ಬಣ್ಣ

ನೀವು ಮೊದಲು ಹುಲಿ/ಸಿಂಹವನ್ನು ನೋಡಿದರೆ: ನಿಮಗೆ ಈ ಚಿತ್ರದಲ್ಲಿ ಮೊದಲು ಹುಲಿ ಅಥವಾ ಸಿಂಹದ ಮುಖ ಕಾಣಿಸಿದರೆ ನೀವು ಶ್ರಮಶೀಲರು ಮತ್ತು ಜವಾಬ್ದಾರಿಯುತ ವ್ಯಕ್ತಿಗಳು ಎಂದರ್ಥ. ನಾಯಕತ್ವದ ಗುಣವನ್ನು ಹೊಂದಿರುವ ನೀವು ಎಲ್ಲಾ ಕೆಲಸಗಳನ್ನು ಸರಿಯಾಗಿ ನಿಭಾಯಿಸುತ್ತೀರಿ. ನಿಮಗಿಷ್ಟದ ಕೆಲಸದಲ್ಲಿ ಉತ್ಸಾಹದ ಜೊತೆಗೆ ಆ ಬಗ್ಗೆ ದೂರದೃಷ್ಟಿಯನ್ನೂ ನೀವು ಹೊಂದಿದ್ದೀರಿ. ಯಾವಾಗಲೂ ಸಕ್ರಿಯವಾಗಿರುವ ನಿಮ್ಮ ಮನಸ್ಸು ಕೆಲವೊಮ್ಮೆ ಅತಿಯಾಗಿ ಯೋಚಿಸುತ್ತದೆ.  ನಿಮ್ಮ ಮನಸ್ಸು ಸಕ್ರಿಯವಾಗಿರುತ್ತದೆ ಮತ್ತು ನೀವು ಕೆಲವೊಮ್ಮೆ ಅತಿಯಾಗಿ ಯೋಚಿಸುವಿರಿ. ಇನ್ನೊಂದು ಏನೆಮದರೆ ನಿಮ್ಮಲ್ಲಿ ಅನೇಕರು ಕುಟುಂಬದ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತುಕೊಂಡಿರುತ್ತೀರಿ. ಹಣದ ಬಗ್ಗೆ ಬಹಳಷ್ಟು ಯೋಚಿಸುತ್ತೀರಿ ಮತ್ತು  ಜವಾಬ್ದಾರಿಯುತರಾದ ನೀವು ಯಶಸ್ವಿ ವೃತ್ತಿಜೀವನವನ್ನು ನಿರ್ಮಿಸಲು ಬಯಸುತ್ತೀರಿ. ಅಂತಃಪ್ರಜ್ಞೆಯುಳ್ಳವರಾದ ನೀವು ನಿಮಗೆ ಬೇಕಾದುದನ್ನು ವ್ಯಕ್ತಪಡಿಸುವ ಶಕ್ತಿಯನ್ನು ಹೊಂದಿದ್ದೀರಿ. ನೀವು ಯಾವಾಗಲೂ ಕಷ್ಟಪಟ್ಟು ಕೆಲಸ ಮಾಡುತ್ತೀರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?