AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಹೆಬ್ಬೆರಳಿನ ಆಕಾರ ಹೇಗಿದೆ ಎಂಬುದರ ಮೇಲೆ ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ತಿಳಿಯಿರಿ

ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌, ದೇಹಕಾರ ಹೀಗೆ ಹತ್ತು ಹಲವು ವಿಧಾನಗಳ ಮೂಲಕ ನಾವು ನಮ್ಮ ವ್ಯಕ್ತಿತ್ವವನ್ನು ತಿಳಿಯಬಹುದು. ನೀವು ಕೂಡಾ ಈ ವಿಧಾನಗಳ ಮೂಲಕ ನಿಮ್ಮ ರಹಸ್ಯ ಗುಣ ಸ್ವಭಾವ ಹೇಗಿದೆ ಎಂಬುದನ್ನು ಪರೀಕ್ಷಿಸಿರುತ್ತೀರಿ ಅಲ್ವಾ. ಅದೇ ರೀತಿ ಇಂದಿನ ಪರ್ಸನಾಲಿಟಿ ಟೆಸ್ಟ್‌ನಲ್ಲಿ ಹಿಂದಕ್ಕೆ ಬಾಗಿದ ಅಥವಾ ನೇರ ನಿಮ್ಮ ಹೆಬ್ಬೆರಳಿನ ಆಕಾರ ಹೇಗಿದೆ ಎಂಬುದರ ಮೇಲೆ ನೀವು ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ತಿಳಿಯಿರಿ.

Personality Test: ಹೆಬ್ಬೆರಳಿನ ಆಕಾರ ಹೇಗಿದೆ ಎಂಬುದರ ಮೇಲೆ ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ತಿಳಿಯಿರಿ
ವ್ಯಕ್ತಿತ್ವ ಪರೀಕ್ಷೆImage Credit source: Jagran Josh
ಮಾಲಾಶ್ರೀ ಅಂಚನ್​
|

Updated on: Aug 31, 2025 | 3:28 PM

Share

ಸಾಮಾನ್ಯವಾಗಿ ನಾವು ನಮ್ಮ ಗುಣ ಸ್ವಭಾವ, ಭವಿಷ್ಯದ ಬಗ್ಗೆ ತಿಳಿಯಲು ಜ್ಯೋತಿಷ್ಯಶಾಸ್ತ್ರವನ್ನು ಅವಲಂಬಿಸುತ್ತೇವೆ. ಇದು ಮಾತ್ರವಲ್ಲದೆ ಸಾಮುದ್ರಿಕ ಶಾಸ್ತ್ರದಲ್ಲಿ ನಮ್ಮ ಕಣ್ಣಿನ ಆಕಾರ, ಮೂಗಿನ ಆಕಾರ, ಪಾದದ ಆಕಾರ, ಹಸ್ತದ ರೇಖೆ ಸೇರಿದಂತೆ ದೇಹಕಾರದ ಮುಖಾಂತರ ನಮ್ಮ ವ್ಯಕ್ತಿತ್ವ (secret Personality)  ಹೇಗಿದೆ ಎಂಬುದನ್ನು ತಿಳಿಯಬಹುದು. ಅದೇ ರೀತಿ ಹೆಬ್ಬೆರಳಿನ ಆಕಾರದ ಮೂಲಕ ಒಬ್ಬ ವ್ಯಕ್ತಿ ಹೇಗಿರುತ್ತಾನೆ ಎಂಬುದನ್ನು ತಿಳಿಯಬಹುದು. ಹೌದು ನಿಮ್ಮ ಹೆಬ್ಬೆರಳು ನೇರವಾಗಿದೆಯೋ ಅಥವಾ ಬಾಗಿದೆಯೋ ಎಂಬುದರ ಆಧಾರದ ಮೇಲೆ ನೀವು ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದು. ಇಂದಿನ ಪರ್ಸನಾಲಿಟಿ ಟೆಸ್ಟ್‌ನಲ್ಲಿ ನಿಮ್ಮ ಹೆಬ್ಬೆರಳಿನ ಆಕಾರದ ಮೂಲಕ ನೀವೆಂಥ ವ್ಯಕ್ತಿ ಎಂಬುದನ್ನು ಪರೀಕ್ಷಿಸಿ.

ಹೆಬ್ಬೆರಳಿನ ಆಕಾರದ ಮೂಲಕ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷಿಸಿ:

ನೇರ ಹೆಬ್ಬೆರಳು: ನಿಮ್ಮ ಹೆಬ್ಬೆರಳಿನ ಆಕಾರ ನೇರವಾಗಿದ್ದರೆ, ನೀವು ತಾರ್ಕಿಕ ಮತ್ತು ಪ್ರಾಯೋಗಿಕ ವ್ಯಕ್ತಿಯೆಂದು ಅರ್ಥ. ನೀವು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಭಾವನೆಗಳಿಂತ ಹೆಚ್ಚಾಗಿ ಸತ್ಯಕ್ಕೆ ಪ್ರಾಮುಖ್ಯತೆಯನ್ನು ನೀಡುತ್ತೀರಿ. ಇದಲ್ಲದೆ ನೀವು ಹಠಮಾರಿ ಸ್ವಭಾವದವರೂ ಹೌದು. ನಿಮ್ಮನ್ನು ಅಷ್ಟು ಸುಲಭವಾಗಿ ಓಲೈಸಲು ಯಾರ ಕೈಯಿಂದಲೂ ಸಾಧ್ಯವಿಲ್ಲ. ಜೊತೆಗೆ ನೀವು ತುಂಬಾನೇ ಕಠಿಣ ಸ್ವಭಾವದ ವ್ಯಕ್ತಿಯೂ ಹೌದು. ಹೀಗಂತ ನೀವು ಜನರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತೀರಿ ಎಂದರ್ಥವಲ್ಲ. ಅಂದರೆ ನೀವು ತಾರ್ಕಿಕವಾಗಿ ಯೋಚಿಸುವ, ನಿರ್ಧಾರಗಳನ್ನು ತೆಗೆದುಕೊಳ್ಳುವ ವ್ಯಕ್ತಿ ಎಂದರ್ಥ.

ಇದನ್ನೂ ಓದಿ: ಹಸ್ತದ ಹೃದಯ ರೇಖೆಯಿಂದಲೂ ತಿಳಿಯಬಹುದು ವ್ಯಕ್ತಿತ್ವದ ರಹಸ್ಯ

ಇದನ್ನೂ ಓದಿ
Image
ಹಸ್ತದ ಹೃದಯ ರೇಖೆಯಿಂದಲೂ ತಿಳಿಯಬಹುದು ವ್ಯಕ್ತಿತ್ವದ ರಹಸ್ಯ
Image
ಗುಲಾಬಿ ಬಣ್ಣವನ್ನು ಇಷ್ಟಪಡುವವರು ಎಂತಹ ವ್ಯಕ್ತಿಗಳು ಗೊತ್ತಾ?
Image
ನೀವು ಮಲಗುವ ಭಂಗಿ ಬಹಿರಂಗಪಡಿಸುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ
Image
ನೀವೆಂತಾ ವ್ಯಕ್ತಿ ಎಂಬುದನ್ನು ನಿಮ್ಮ ಹುಬ್ಬಿನ ಆಕಾರವೇ ತಿಳಿಸುತ್ತದೆ

ಹಿಂದಕ್ಕೆ ಬಾಗಿದ ಹೆಬ್ಬೆರಳು: ಹಿಂದಕ್ಕೆ ಬಾಗಿದ ಹೆಬ್ಬೆರಳು ನಿಮ್ಮದಾಗಿದ್ದರೆ, ನೀವು ಭಾವನಾತ್ಮಕ ವ್ಯಕ್ತಿಯೆಂದು ಅರ್ಥ. ನೀವು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ತಾರ್ಕಿಕವಾಗಿ ಯೋಚಿಸುವ ಬದಲು ಮನಸ್ಸಿನ ಮಾತನ್ನು ಕೇಳುತ್ತೀರಿ. ನೀವು ಸಂಬಂಧಗಳು ಮತ್ತು ಭಾವನೆಗಳಿಗೆ ಸಾಕಷ್ಟು ಆದ್ಯತೆ ನೀಡುವ ವ್ಯಕ್ತಿ. ಅಲ್ಲದೆ ನೀವು ಎಲ್ಲರೊಂದಿಗೆ ಬಹು ಬೇಗನೆ ಬೆರೆಯುತ್ತೀರಿ. ನಿಮ್ಮವರನ್ನು ಸಂತೋಷಪಡಿಸಲು ಸಾಕಷ್ಟು ಪ್ರಯತ್ನಪಡುತ್ತೀರಿ. ನೀವು ಸೃಜನಶೀಲ ಹಾಗೂ ಕಲಾತ್ಮಕ ಗುಣವನ್ನು ಸಹ ಹೊಂದಿದ್ದೀರಿ. ಒಟ್ಟಾರೆಯಾಗಿ ಹೇಳುವುದಾದರೆ ನಿಮ್ಮ ವ್ಯಕ್ತಿತ್ವ ತುಂಬಾ ಆಕರ್ಷಕವಾದುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ