AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಕಿವಿ, ಹಾವು; ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸಿದ್ದೇನು? ಇದುವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವ

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡುವುದು ಮಾತ್ರವಲ್ಲದೆ, ಇದು ನಿಮ್ಮ ನಿಗೂಢ ವ್ಯಕ್ತಿತ್ವ, ಗುಣ ಸ್ವಭಾವಗಳ ಬಗ್ಗೆ ಅನ್ವೇಷಿಸಲಿರುವ ಒಂದು ಉತ್ತಮ ಮಾರ್ಗವಾಗಿದೆ. ಇಂತಹ ವ್ಯಕ್ತಿತ್ವ ಪರೀಕ್ಷೆಯ ಸಾಕಷ್ಟು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಹಾವು ಅಥವಾ ಕಿವಿ ಈ ಫೋಟೋದಲ್ಲಿ ಮೊದಲು ನಿಮಗೆ ಕಾಣಿಸಿದ್ದೇನು ಎಂಬುದರ ಆಧಾರದ ಮೇಲೆ ನೀವು ಸ್ವತಂತ್ರ್ಯವಾಗಿ ಬದುಕಲು ಇಷ್ಟಪಡುವವರೇ ಅಥವಾ ಸಹಾನುಭೂತಿಯುಳ್ಳವರೇ ಎಂಬುದನ್ನು ಪರೀಕ್ಷಿಸಿ.

Personality Test: ಕಿವಿ, ಹಾವು; ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸಿದ್ದೇನು?  ಇದುವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವ
ವ್ಯಕ್ತಿತ್ವ ಪರೀಕ್ಷೆImage Credit source: okdario.com
ಮಾಲಾಶ್ರೀ ಅಂಚನ್​
|

Updated on: May 16, 2025 | 3:17 PM

Share

ಮೊದಲೆಲ್ಲಾ ಒಬ್ಬ ವ್ಯಕ್ತಿ ಹೇಗೆ ಮಾತನಾಡುತ್ತಾನೆ, ಆತ ಇತರರೊಂದಿಗೆ ಹೇಗೆ ನಡೆದುಕೊಳ್ಳುತ್ತಾನೆ, ಯಾವ ರೀತಿ ಬಟ್ಟೆ ಹಾಕಿಕೊಳ್ಳುತ್ತಾನೆ ಎಂಬ ಆಧಾರದ ಮೇಲೆ ಅವನ ವ್ಯಕ್ತಿತ್ವವನ್ನು (Personality)  ಅಳೆಯುತ್ತಿದ್ದರು. ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ, ಕಣ್ಣಿನ ಬಣ್ಣ, ಪಾದದ ಆಕಾರ, ಮೂಗಿನ ಆಕಾರ ಸೇರಿದಂತೆ ದೇಹಾಕಾರದ ಮೂಲಕವೂ ನಮ್ಮ ನಿಗೂಢ ವ್ಯಕ್ತಿತ್ವ ಮತ್ತು ಗುಣ ಸ್ವಭಾವವನ್ನು ನಾವೇ ಪರೀಕ್ಷಿಸಿಕೊಳ್ಳಬಹುದಾಗಿದೆ. ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಿಸಿದ ಅಂತಹದ್ದೇ ಫೋಟೋವೊಂದು ಇದೀಗ ವೈರಲ್‌ ಆಗಿದ್ದು, ಹಾವು (Snake) ಅಥವಾ ಕಿವಿ (Ear) ಈ ಚಿತ್ರದಲ್ಲಿ ನಿಮಗೆ ಮೊದಲು ಕಂಡಿದ್ದೇನು ಎಂಬ ಆಧಾರದ ಮೇಲೆ ನೀವು ಸಹಾನುಭೂತಿ ವ್ಯಕ್ತಿತ್ವದವರೇ ಅಥವಾ ಸ್ವತಂತ್ರ್ಯವಾಗಿ ಬದುಕಲು ಇಷ್ಟಪಡುವ ವ್ಯಕ್ತಿಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ.

ಹಾವು ಅಥವಾ ಕಿವಿ ನಿಮಗೆ ಈ ಚಿತ್ರದಲ್ಲಿ ಮೊದಲು ಕಾಣಿಸಿದ್ದೇನು?

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ಗಳು ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿವೆ. ಇದೀಗ ಅಂತಹದ್ದೇ ಚಿತ್ರವೊಂದು ಹರಿದಾಡುತ್ತಿದೆ. ಕಣ್ಣಿಗೆ ಭ್ರಮೆಯನ್ನುಂಟು ಮಾಡುವ ಈ ಚಿತ್ರದಲ್ಲಿ ಕೆಲವರಿಗೆ ಮೊದಲು ಹಾವು ಕಾಣಿಸಿದರೆ, ಇನ್ನೂ ಕೆಲವರಿಗೆ ಈ ಚಿತ್ರದಲ್ಲಿ ಕಿವಿ ಕಾಣಿಸುತ್ತದೆ. ಹೀಗೆ ನಿಮಗೆ ಮೊದಲು ಕಾಣಿಸಿದ್ದೇನು ಎಂಬುದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಪರೀಕ್ಷಿಸಿ.

ಮೊದಲು ಮನುಷ್ಯನದ ಕಿವಿ ಕಾಣಿಸಿದರೆ: ಈ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಫೋಟೋದಲ್ಲಿ ನಿಮಗೇನಾದರೂ ಮೊದಲು ಮಾನವನ ಕಿವಿ ಕಾಣಿಸಿದರೆ, ನೀವು ತುಂಬಾನೇ ದಯೆ ಮತ್ತು ಸಹಾನುಭೂತಿಯನ್ನು ಹೊಂದಿರುವ ವ್ಯಕ್ತಿಯೆಂದು ಅರ್ಥ. ಸೌಮ್ಯ ಸವಭಾವದ ವ್ಯಕ್ತಿಯಾಗಿರುವ ನೀವು ಇತರರ ಭಾವನೆಗಳಿಗೆ ಬಹು ಬೇಗನೆ ಹೊಂದಿಕೊಳ್ಳುತ್ತೀರಿ. ಜೊತೆಗೆ ಬಲವಾದ ನ್ಯಾಯ ಪ್ರಜ್ಞೆಯನ್ನು ಹೊಂದಿರುವ ನೀವು ಯಾವುದೇ ಕಾರಣಕ್ಕೂ ಅನ್ಯಾಯವನ್ನು ಸಹಿಸುವುದಿಲ್ಲ. ಏನಾದರೂ ತಪ್ಪು ಕಂಡರೆ, ಅದರ ಬಗ್ಗೆ ಧೈರ್ಯದಿಂದ ಪ್ರಶ್ನೆ ಮಾಡುವ ಸ್ವಭಾವವನ್ನು ನೀವು ಹೊಂದಿದ್ದೀರಿ. ಇತರರ ಸಹಾಯಕ್ಕೆ ಸದಾ ಸಿದ್ಧರಿರುವ ನಿಮ್ಮನ್ನು ನಿಮ್ಮ ಸ್ನೇಹಿತರು ಮತ್ತು ಕುಟುಂಬಸ್ಥರು ನಂಬಿಕಸ್ಥ ವ್ಯಕ್ತಿಯಾಗಿ ನೋಡುತ್ತಾರೆ. ಒಟ್ಟಾರೆಯಾಗಿ ಸಹಾನುಭೂತಿ ನಿಮ್ಮ ಬಹು ದೊಡ್ಡ ಶಕ್ತಿ ಅಂತಾನೇ ಹೇಳಬಹುದು.

ಇದನ್ನೂ ಓದಿ
Image
ಅಪ್ಪಿ ತಪ್ಪಿಯೂ ದೇಹದ ಈ ಭಾಗಗಳ ಮೇಲೆ ಟ್ಯಾಟೂ ಹಾಕಿಸಿಕೊಳ್ಳಬೇಡಿ
Image
ಜಂಕ್ ಫುಡ್ ತಿನ್ನುವುದರಿಂದ ಈ ಒತ್ತಡಗಳು ಕಾಡಬಹುದು!
Image
ಹುಬ್ಬಿನ ಆಕಾರದಿಂದ ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ಪರೀಕ್ಷಿಸಿ
Image
ಓಟಕ್ಕಿಂತ 2 ಕಿಲೋಮೀಟರ್ ನಡೆಯುವುದು ಉತ್ತಮ

ಇದನ್ನೂ ಓದಿ: ನಿಮ್ಮ ಹುಬ್ಬಿನ ಆಕಾರದಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವದ ರಹಸ್ಯ

ಮೊದಲು ಹಾವು ಕಾಣಿಸಿದರೆ: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನಿಮಗೆ ಮೊದಲು ಹಾವು ಕಾಣಿಸಿದರೆ, ನೀವು ತೀಕ್ಷ್ಣ, ಸ್ವತಂತ್ರ ಮತ್ತು ದಿಟ್ಟ ಮನಸ್ಸು ಹಾಗೂ ಸಾಹಸಮಯ ಮನೋಭಾವವನ್ನು ಹೊಂದಿರುವವರು ಎಂದು ಅರ್ಥ. ಸ್ವತಂತ್ರವಾಗಿ ಬದುಕಲು ಇಷ್ಟ ಪಡುವ ನೀವು ಯಾವುದೇ ಕಾರಣಕ್ಕೂ ಯಾವುದೇ ವಿಷಯದಲ್ಲೂ ಇತರರನ್ನು ಅನುಸರಿಸಲು ಇಷ್ಟಪಡುವುದಿಲ್ಲ. ನೀವು ನಿಮ್ಮಿಷ್ಟದ ಪ್ರಕಾರ ಬದುಕನ್ನು ಸಾಗಿಸಲು ಬಯಸುವವರಾಗಿರುತ್ತೀರಿ. ಹೊಸ ಹೊಸ ಅನುಭವಗಳ ಮೂಲಕವೇ ನೀವು ಯಶಸ್ಸಿನತ್ತ ಸ್ವಂತ ಮಾರ್ಗಗಳನ್ನು ರೂಪಿಸುವವರಾಗಿರುತ್ತೀರಿ. ಒಟ್ಟಾರೆಯಾಗಿ ನೀವು ಸ್ವತಂತ್ರ್ಯವಾಗಿ ಬದಲುಕಲು ಇಷ್ಟಪಡುವವರಾಗಿರುತ್ತೀರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್