AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಬೆಕ್ಕು, ಇಲಿ; ಈ ಚಿತ್ರದಲ್ಲಿ ನೀವು ಗಮನಿಸುವ ಮೊದಲ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆಯೆಂದು ಹೇಳಬಲ್ಲದು

ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಪಟ್ಟ ಹತ್ತು ಹಲವು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಈ ಚಿತ್ರಗಳ ಮುಖಾಂತರ ನೀವು ನಿಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಿರಬಹುದಲ್ವಾ. ಅದೇ ರೀತಿಯ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಅಗಿದ್ದು, ಆ ಚಿತ್ರದಲ್ಲಿ ಇಲಿ ಅಥವಾ ಬೆಕ್ಕು ಅದರಲ್ಲಿ ನಿಮಗೆ ಯಾವ ಅಂಶ ಕಾಣಿಸಿತು ಎಂಬುದರ ಮೇಲೆ ನಿಮ್ಮ ವ್ಯಕ್ತಿತ್ವದ ರಹಸ್ಯ ಹೇಗಿದೆ ಎಂಬುದನ್ನು ಪರೀಕ್ಷಿಸಿ.

Personality Test: ಬೆಕ್ಕು, ಇಲಿ; ಈ ಚಿತ್ರದಲ್ಲಿ ನೀವು ಗಮನಿಸುವ ಮೊದಲ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆಯೆಂದು ಹೇಳಬಲ್ಲದು
ವ್ಯಕ್ತಿತ್ವ ಪರೀಕ್ಷೆImage Credit source: Jagran Josh
ಮಾಲಾಶ್ರೀ ಅಂಚನ್​
|

Updated on: Aug 14, 2025 | 8:12 PM

Share

ಸಾಮಾನ್ಯವಾಗಿ ವ್ಯಕ್ತಿಯ ಭವಿಷ್ಯ ಹೇಗಿದೆ, ಆತನ ಗುಣಸ್ವಭಾವ ಹೇಗಿದೆ ಎಂಬುದನ್ನು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇಷ್ಟು ಮಾತ್ರವಲ್ಲದೆ ಕಾಲ್ಬೆರಳಿನ ಆಕಾರ, ಮುಖದ ಆಕಾರ, ಕೈ ಹಿಡಿದುಕೊಂಡು ನಿಲ್ಲುವ ರೀತಿ, ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality test) ಇಂತಹ ವಿವಿಧ ಬಗೆಯ ವ್ಯಕ್ತಿತ್ವ ಪರೀಕ್ಷೆಯ ವಿಧಾನದ ಮೂಲಕವು ಸಹ ನಾವು ಅಂತರ್ಮುಖಿಯೇ, ಬಹಿರ್ಮುಖಿಯೇ, ಸ್ವಾಭಿಮಾನಿಯೇ ಇತ್ಯಾದಿ ನಮ್ಮೊಳಗಿನ ನಿಗೂಢ ಗುಣ ಸ್ವಭಾವವನ್ನು ನಾವೇ ತಿಳಿದುಕೊಳ್ಳಬಹುದು. ವ್ಯಕ್ತಿತ್ವ ಪರೀಕ್ಷೆಯ ಇಂತಹ ಸಾಕಷ್ಟು ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಇಲಿ ಅಥವಾ ಬೆಕ್ಕು ಇವೆರಡರಲ್ಲಿ ನಿಮಗ್ಯಾವ ಅಂಶ ಕಾಣಿಸಿತು ಎಂಬುದರ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷಿಸಿ.

ಈ ಚಿತ್ರ ಮೂಲಕ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಿರಿ:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಇಲಿ ಮತ್ತು ಬೆಕ್ಕು ಈ ಎರಡು ಅಂಶಗಳಿದ್ದು, ಇದರಲ್ಲಿ ಕೆಲವರಿಗೆ ಬೆಕ್ಕು ಕಾಣಿಸಿದರೆ, ಇನ್ನೂ ಕೆಲವರಿಗೆ ಇಲಿ ಕಾಣಿಸಬಹುದು. ಇದರಲ್ಲಿ ನಿಮಗೆ ಮೊದಲು ಯಾವ ಅಂಶ ಮೊದಲು ಕಾಣಿಸಿತು ಎಂಬ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಿರಿ.

ನೀವು ಮೊದಲು ಬೆಕ್ಕನ್ನು ನೋಡಿದರೆ: ಈ ಚಿತ್ರದಲ್ಲಿ ನಿಮಗೆ ಮೊದಲು ಬೆಕ್ಕು ಕಾಣಿಸಿದರೆ ನೀವು ಸ್ವಾತಂತ್ರ್ಯ, ಕುತೂಹಲ, ನಿಗೂಢತೆ  ಮತ್ತು ತಮಾಷೆಯ ವ್ಯಕ್ತಿತ್ವವನ್ನು ಹೊಂದಿರುವವರಾಗಿರುತ್ತೀರಿ. ನೀವು ನಿಮ್ಮದೇ ಆದ ರೀತಿಯಲ್ಲಿ ಕೆಲಸಗಳನ್ನು ಮಾಡಲು ಇಷ್ಟಪಡುತ್ತೀರಿ. ಅಲ್ಲದೆ ನೀವು ಸ್ವಾವಲಂಬಿ ವ್ಯಕ್ತಿಯೂ ಹೌದು. ನೀವು ಯಾವಾಗಲೂ ನಿಮ್ಮ ಸ್ವಂತ ತೀರ್ಪು ಮತ್ತು ಸಾಮರ್ಥ್ಯಗಳನ್ನು ಮಾತ್ರ ನಂಬುತ್ತೀರಿ. ಅಲ್ಲದೆ ಬೆಕ್ಕಿನಂತೆ ನೀವು ಸಹ ನಿಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸೂಕ್ಷ್ಮವಾಗಿ ಗಮನಿಸುವ ವ್ಯಕ್ತಿಯಾಗಿರುತ್ತೀರಿ. ನೀವು ನಿಗೂಢ ವ್ಯಕ್ತಿ ಮಾತ್ರವಲ್ಲದೆ ನೀವು ಮೋಜು ಪ್ರಿಯರೂ ಹೌದು.

ಇದನ್ನೂ ಓದಿ
Image
ನಿಮ್ಮ ನಿಗೂಢ ವ್ಯಕ್ತಿತ್ವ ರಿವೀಲ್‌ ಮಾಡುತ್ತೆ ಈ ಚಿತ್ರ
Image
ಈ ಚಿತ್ರವೇ ಹೇಳುತ್ತೆ ನೀವು ನಿಮ್ಮ ಪ್ರೇಮ ಸಂಬಂಧ, ವ್ಯಕ್ತಿತ್ವ ಹೇಗಿದೆಯೆಂದು
Image
ನಿಮ್ಮ ಮನಸ್ಥಿತಿ ಹೇಗಿದೆ ಎಂಬುದನ್ನು ತಿಳಿಸುವ ಚಿತ್ರವಿದು
Image
ಈ ಚಿತ್ರದ ಮೂಲಕ ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ತಳಿಯಿರಿ

ಇದನ್ನೂ ಓದಿ: ನೀವು ಜೀವನದಲ್ಲಿ ಯಾವುದಕ್ಕೆ ಹೆಚ್ಚು ಬೆಲೆ ಕೊಡುತ್ತೀರಿ ಎಂಬುದನ್ನು ತಿಳಿಸುವ ಚಿತ್ರವಿದು

ನೀವು ಮೊದಲು ಇಲಿಯನ್ನು ನೋಡಿದರೆ: ಈ ಚಿತ್ರದಲ್ಲಿ ನೀವು ಮೊದಲು ಇಲಿಯನ್ನು ನೋಡಿದರೆ ನೀವು ಹೆಚ್ಚು ಜಾಗರೂಕರಾಗಿರುವ ವ್ಯಕ್ತಿಯೆಂದು ಅರ್ಥ. ಜೊತೆಗೆ ನೀವು ನಾಚಿಕೆಯ ಸ್ವಭಾವದ ವ್ಯಕ್ತಿಯೂ ಹೌದು. ಸಂಯಮದ ಸ್ವಭಾವದವರೂ ಹೌದು.  ಅಲ್ಲದೆ ನೀವು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅಥವಾ ಕ್ರಮ ತೆಗೆದುಕೊಳ್ಳುವಾಗ ಬಹಳ ಎಚ್ಚರಿಕೆಯನ್ನು ವಹಿಸುತ್ತೀರಿ.  ಇನ್ನೂ ಸಮಸ್ಯೆಗಳು ಮತ್ತು ಕಷ್ಟದ ಸಮಯದಲ್ಲಿ ಅವುಗಳನ್ನು ಎದುರಿಸಲು ನೀವು ಯಾವಾಗಲೂ  ಯೋಜನೆಯೊಂದಿಗೆ ಸಿದ್ಧರಾಗಿರುತ್ತೀರಿ. ಹೀಗೆ ನೀವು ಪ್ರತಿಯೊಂದು ವಿಚಾರದಲ್ಲೂ ಹೆಚ್ಚು ಜಾಗರೂಕರಾಗಿರುತ್ತೀರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ