AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಪಕ್ಷಿ, ಮರ; ಈ ಚಿತ್ರದಲ್ಲಿ ನೀವು ಮೊದಲು ಗಮನಿಸುವ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ಹೇಳುತ್ತೆ

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಪರೀಕ್ಷೆಗಳು ಸಾಕಷ್ಟು ಜನಪ್ರಿಯವಾಗಿದೆ. ಇವುಗಳು ಮೆದುಳಿಗೆ ಕೆಲಸವನ್ನು ನೀಡುವುದರ ಜೊತೆಗೆ ನಮ್ಮೊಳಗಿನ ರಹಸ್ಯ ವ್ಯಕ್ತಿತ್ವವನ್ನು ಸಹ ತಿಳಿಸುತ್ತದೆ. ಅಂತಹದ್ದೊಂದು ಚಿತ್ರ ಇದೀಗ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಪಕ್ಷಿ ಮತ್ತು ಮರವಿದ್ದು, ಇದರಲ್ಲಿ ನಿಮಗೆ ಯಾವ ಅಂಶ ಮೊದಲು ಕಾಣಿಸಿತು ಎಂಬುದರ ಮೇಲೆ ನೀವು ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವವರೇ ಎಂಬುದನ್ನು ಪರೀಕ್ಷಿಸಿ.

Personality Test: ಪಕ್ಷಿ, ಮರ; ಈ ಚಿತ್ರದಲ್ಲಿ ನೀವು ಮೊದಲು ಗಮನಿಸುವ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ಹೇಳುತ್ತೆ
ವ್ಯಕ್ತಿತ್ವ ಪರೀಕ್ಷೆImage Credit source: Marina Winberg/Instagram
ಮಾಲಾಶ್ರೀ ಅಂಚನ್​
|

Updated on: Jun 17, 2025 | 3:58 PM

Share

ಸಾಮಾನ್ಯವಾಗಿ ವ್ಯಕ್ತಿಯ ವ್ಯಕ್ತಿತ್ವವನ್ನು (Personality) ಆತನ ನಡವಳಿಕೆಯ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಇನ್ನೂ ಜ್ಯೋತಿಷ್ಯಶಾಸ್ತ್ರದಲ್ಲಿ ರಾಶಿ ನಕ್ಷತ್ರದ ಆಧಾರದ ಮೇಲೆ, ಸಂಖ್ಯಾ ಶಾಸ್ತ್ರದಲ್ಲಿ ಹುಟ್ಟಿದ ದಿನಾಂಕದ ಆಧಾರದ ಮೇಲೆ ವ್ಯಕ್ತಿಯ ಗುಣ ಸ್ವಭಾವವನ್ನು ತಿಳಿಯಬಹುದು. ಅದೇ ರೀತಿ ಪರ್ಸನಾಲಿಟಿ ಟೆಸ್ಟ್‌ (Personality Test) ಚಿತ್ರಗಳ ಮೂಲಕವೂ ನಾವು ನಮ್ಮ ವ್ಯಕ್ತಿತ್ವವನ್ನು ತಿಳಿಯಬಹುದು. ಪರ್ಸನಾಲಿಟಿ ಟೆಸ್ಟ್‌ ಮುಖಾಂತರ ನೀವು ಕೂಡಾ ನಿಮ್ಮ ನಿಗೂಢ ಗುಣ ಸ್ವಭಾವ ಹೇಗಿದೆ ಎಂಬುದನ್ನು ಪರೀಕ್ಷೆ ಮಾಡಿರುತ್ತೀರಿ ಅಲ್ವಾ. ಹಾಗೆಯೇ ಇಂದಿನ ಪರ್ಸನಾಲಿಟಿ ಟೆಸ್ಟ್‌ನಲ್ಲಿ ನೀವು ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವವರೇ ಅಥವಾ ನೀವು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಇನ್ನೊಬ್ಬರ ಸಹಾಯವನ್ನು ಕೇಳುತ್ತೀರೇ ಎಂಬುದನ್ನು ಪರೀಕ್ಷಿಸಿ.

ಚಿತ್ರ ನೋಡಿ, ನೀವು ಯಾವ ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ ತಿಳಿಯಿರಿ:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟನ್ನು marina__neauralean ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಹಕ್ಕಿಗಳು ಮತ್ತು ಮರ ಇವೆರಡು ಅಂಶಗಳಿದ್ದು, ಇವುಗಳಲ್ಲಿ ನಿಮಗೆ ಮೊದಲು ಕಾಣಿಸಿದ್ದು ಯಾವುದು ಎಂಬುದರ ಮೇಲೆ ನೀವು ನಿರ್ಧಾರಗಳನ್ನು ಹೇಗೆ ತೆಗದುಕೊಳ್ಳುತ್ತೀರಿ ಎಂಬುದನ್ನು ಪರೀಕ್ಷಿಸಿ.

ಇದನ್ನೂ ಓದಿ
Image
ನೀವು ನಿರ್ಧಾರ ತೆಗೆದುಕೊಳ್ಳುವ ರೀತಿಯನ್ನು ವಿವರಿಸುವ ಚಿತ್ರವಿದು
Image
ಈ ಚಿತ್ರ ನೋಡಿ ನಿಮ್ಮ ನಿಗೂಢ ಗುಣ ಸ್ವಭಾವವನ್ನು ಪರೀಕ್ಷಿಸಿ
Image
ನೀವು ಹಠಮಾರಿ ಸ್ವಭಾವದವರೇ ಎಂಬುದನ್ನು ತಿಳಿಸುವ ಚಿತ್ರವಿದು
Image
ನೀವು ಹುಟ್ಟಿದ ತಿಂಗಳೇ ತಿಳಿಸುತ್ತೆ ನಿಮ್ಮ ಅದೃಷ್ಟದ ಬಣ್ಣ ಯಾವುದೆಂದು

ವಿಡಿಯೋ ಇಲ್ಲಿದೆ ನೋಡಿ:

ಮರ: ಈ ಚಿತ್ರದಲ್ಲಿ ನಿಮಗೆ ಮೊದಲು ಮರ ಕಾಣಿಸಿದರೆ ನೀವು ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವವರು ಎಂದರ್ಥ. ನೀವು ಇತರರ ಮಾತನ್ನು ಕೇಳಿದರೂ, ಅದು ನಿಮ್ಮ ಸ್ವಂತ ನಿರ್ಧಾರದ ಮೇಲೆ ಪರಿಣಾಮ ಬೀರುವುದಿಲ್ಲ. ನೀವು ಯಾವಾಗಲೂ ನಿಮ್ಮ ಮನಸ್ಸಿಗೆ ಸರಿ ಅನಿಸುವ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತೀರಿ. ನಿಮಗೆ ಸರಿ ಎನಿಸುವ ಪ್ರತಿಯೊಂದು ಕೆಲಸವನ್ನು ಸಹ ನೀವು ಮಾಡುತ್ತೀರಿ. ನೀವು ನಿಮ್ಮ ತತ್ವಗಳಿಗೆ ನಿಷ್ಠರಾಗಿರುವುದು ಅದು ನಿಮ್ಮ ಅಮೂಲ್ಯ ಕೌಶಲ್ಯ ಅಂತಾನೇ ಹೇಳಬಹುದು. ಒಟ್ಟಾರೆಯಾಗಿ ನೀವು ನಿಮಗೆ ಸರಿ ಅನಿಸಿದ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತೀರಿ.

ಇದನ್ನೂ ಓದಿ: ನೀವು ಈ ಚಿತ್ರದಲ್ಲಿ ಮೊದಲು ಗಮನಿಸುವ ಅಂಶ ನೀವು ನಿರ್ಧಾರಗಳನ್ನು ತೆಗೆದುಕೊಳ್ಳುವ ರೀತಿಯ ಬಗ್ಗೆ ಸಾಕಷ್ಟು ಹೇಳುತ್ತದೆ

ಪಕ್ಷಿಗಳು: ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನಿಮಗೆ ಮೊದಲು ಹಕ್ಕಿ ಕಾಣಿಸಿದರೆ ನಿಮಗೆ ನೀವು ತೆಗೆದುಕೊಳ್ಳುವ ನಿರ್ಧಾರಗಳ ಮೇಲೆ ನಂಬಿಕೆಯಿಲ್ಲ ಎಂದರ್ಥ. ನೀವು ತೆಗೆದುಕೊಳ್ಳುವ ನಿರ್ಧಾರಗಳ ಬಗ್ಗೆ ಅದು ಸರಿಯೇ ಅಥವಾ ತಪ್ಪೇ ಎಂಬ ಅನುಮಾನಗಳಿದ್ದು, ಹಾಗಾಗಿ ನೀವು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನಿಮ್ಮ ಹತ್ತಿರದವರ ಸಲಹೆ ಮತ್ತು ಅಭಿಪ್ರಾಯಗಳನ್ನು ಕೇಳುತ್ತೀರಿ. ಆದರೆ ಸ್ವಂತವಾಗಿ ಯೋಚಿಸುವುದಿಲ್ಲ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ