AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ನೀವು ಭಾವನಾತ್ಮಕ ವ್ಯಕ್ತಿಯೇ, ತಾರ್ಕಿಕ ವ್ಯಕ್ತಿಯೇ ಎಂಬುದನ್ನು ಈ ಚಿತ್ರದ ಮೂಲಕ ತಿಳಿಯಿರಿ

ನಮ್ಮ ಬುದ್ಧಿವಂತಿಕೆ ಎಷ್ಟು ಚುರುಕಾಗಿದೆ, ನಮ್ಮ ಕಣ್ಣು ಎಷ್ಟು ಶಾರ್ಪ್‌ ಆಗಿದೆ ಎಂಬುದನ್ನು ತಿಳಿಯಬಹುದಾದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳ ಮೂಲಕ ನಾವು ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿಗೆ ಸಂಬಂಧಿಸಿದ ಇಂತಹ ಸಾಕಷ್ಟು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ವೈರಲ್‌ ಆಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಅದರಲ್ಲಿ ಅರ್ಧ ತಿಂದ ಸೇಬು ಅಥವಾ ಗಂಡು ಹೆಣ್ಣಿನ ಮುಖ, ನಿಮಗ್ಯಾವುದು ಕಾಣಿಸಿದ್ದು ಎಂಬುದರ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷಿಸಿ.

Personality Test: ನೀವು ಭಾವನಾತ್ಮಕ ವ್ಯಕ್ತಿಯೇ, ತಾರ್ಕಿಕ ವ್ಯಕ್ತಿಯೇ ಎಂಬುದನ್ನು ಈ ಚಿತ್ರದ ಮೂಲಕ ತಿಳಿಯಿರಿ
ವ್ಯಕ್ತಿತ್ವ ಪರೀಕ್ಷೆImage Credit source: Jagran Josh
ಮಾಲಾಶ್ರೀ ಅಂಚನ್​
|

Updated on: Aug 30, 2025 | 4:12 PM

Share

ನಮ್ಮ ಭವಿಷ್ಯ ಹೇಗಿರಬಹುದು, ನಮ್ಮ ಗುಣ ಸ್ವಭಾವ ಹೇಗಿರಬಹುದು ಎಂಬುದನ್ನು ತಿಳಿಯುವ ಕುತೂಹಲ ಬಹುತೇಕ ಎಲ್ಲರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರದ ಮೊರೆ ಹೋಗ್ತಾರೆ. ಇದರ ಹೊರತಾಗಿ ವ್ಯಕ್ತಿತ್ವ ಪರೀಕ್ಷೆಯ (Personality Test) ಹಲವು ವಿಧಾನಗಳ ಮೂಲಕವು ನಾವು ಅಂತರ್ಮುಖಿಯೇ, ಬಹಿರ್ಮುಖಿಯೇ, ಸ್ವಾಭಿಮಾನಿಗಳೇ, ಹೃದಯವಂತರೇ ಎಂಬಿತ್ಯಾದಿ ನಮ್ಮ ವ್ಯಕ್ತಿತ್ವದ ರಹಸ್ಯವನ್ನು ತಿಳಿಯಬಹುದು. ಪರ್ಸನಾಲಿಟಿ ಟೆಸ್ಟ್‌ಗೆ ಸಂಬಂಧಿಸಿದ ಇಂತಹ ಸಾಕಷ್ಟು ಚಿತ್ರಗಳು ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಅದೇ ರೀತಿ ಇಲ್ಲೊಂದು ಚಿತ್ರ ವೈರಲ್‌ ಆಗಿದ್ದು, ಅರ್ಧ ತಿಂದ ಸೇಬು ಅಥವಾ ಗಂಡು ಹೆಣ್ಣಿನ ಮುಖ ಆ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸಿದ್ದೇನು ಎಂಬುದರ ಮೇಲೆ ನೀವು ತಾರ್ಕಿಕ ವ್ಯಕ್ತಿಯೇ ಅಥವಾ ಭಾವನಾತ್ಮಕ ವ್ಯಕ್ತಿಯೇ ಎಂಬುದನ್ನು ಪರೀಕ್ಷಿಸಿ.

ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ಬಹಿರಂಗಪಡಿಸುವ ಚಿತ್ರವಿದು:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್ ಚಿತ್ರದಲ್ಲಿ ಗಂಡು ಹೆಣ್ಣಿನ ಮುಖ ಹಾಗೂ ಅರ್ಧ ತಿಂದ ಸೇಬಿನ ಚಿತ್ರವಿದ್ದು, ಈ ಎರಡು ಅಂಶಗಳಲ್ಲಿ ನಿಮ್ಮ ಕಣ್ಣಿಗೆ ಮೊದಲು ಕಾಣಿಸಿದ್ದೇನು ಎಂಬುದರ ಆಧಾರದ ಮೇಲೆ ನೀವು ಭಾವನಾತ್ಮಕ ವ್ಯಕ್ತಿಯೇ ಅಥವಾ ತಾರ್ಕಿಕ ವ್ಯಕ್ತಿಯೇ ಎಂಬುದನ್ನು ಪರೀಕ್ಷಿಸಿ.

ಅರ್ಧ ತಿಂದ ಸೇಬು: ನೀವು ಈ ಚಿತ್ರದಲ್ಲಿ ಮೊದಲು ಅರ್ಧ ತಿಂದ ಸೇಬನ್ನು ಗಮನಿಸಿದರೆ ನೀವು ಭಾವನಾತ್ಮಕ ವ್ಯಕ್ತಿಯೆಂದು ಅರ್ಥ. ನೀವು ಸಾಮಾಜಿಕ ಮತ್ತು ಭಾವನಾತ್ಮಕವಾಗಿ ಪ್ರೇರಿತವಾಗಿರುವ ವ್ಯಕ್ತಿ. ಅಲ್ಲದೆ ನಿಮ್ಮಲ್ಲಿ ದಯಾಳು ಮತ್ತು ಸಹಾನುಭೂತಿಯ ಗುಣವೂ ನಿಮ್ಮಲ್ಲಿದೆ. ಈ ನಿಮ್ಮ ಗುಣದ ಕಾರಣದಿಂದಲೇ ನೀವು ಕಷ್ಟದಲ್ಲಿರುವವರಿಗೆ ಬಹು ಬೇಗನೇ ಸಹಾಯವನ್ನು ಮಾಡುತ್ತೀರಿ. ಜೊತೆಗೆ ತುಂಬಾನೇ ಸೂಕ್ಷ್ಮ ಸ್ವಭಾವದವರಾದ ನೀವು ಸಾಮಾಜಿಕ ಸನ್ನಿವೇಶಗಳನ್ನು ನಿಭಾಯಿಸುವುದರಲ್ಲಿ ನಿಪುಣರು.

ಇದನ್ನೂ ಓದಿ
Image
ನೀವು ಭಾವನೆಗಳನ್ನು ಹೇಗೆ ನಿಭಾಯಿಸುತ್ತೀರಿ ಎಂಬುದನ್ನು ತಿಳಿಸುತ್ತೆ ಈ ಚಿತ್ರ
Image
ಈ ಚಿತ್ರದಲ್ಲಿ ನೀವು ಮೊದಲು ನೋಡುವ ಅಂಶ ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತೆ
Image
ಈ ಒಗಟಿನ ಚಿತ್ರದ ಮೂಲಕ ನಿಮ್ಮ ಸೀಕ್ರೆಟ್‌ ವ್ಯಕ್ತಿತ್ವ ಹೇಗಿದೆ ಪರೀಕ್ಷಿಸಿ
Image
ಈ ಚಿತ್ರದ ಮೂಲಕ ನೀವು ನಿಮ್ಮ ರಹಸ್ಯ ವ್ಯಕ್ತಿತ್ವವನ್ನು ತಿಳಿಯಬಹುದು

ಇದನ್ನೂ ಓದಿ: ನೀವು ಭಾವನೆಗಳನ್ನು ಹೇಗೆ ನಿಭಾಯಿಸುತ್ತೀರಿ ಎಂಬುದನ್ನು ಈ ಚಿತ್ರದ ಮೂಲಕ ತಿಳಿಯಬಹುದು

ಗಂಡು ಹೆಣ್ಣಿನ ಮುಖ: ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ಗಂಡು ಹೆಣ್ಣಿನ ಮುಖವನ್ನು ಮೊದಲು ಗಮನಿಸಿದರೆ, ನೀವು ತಾರ್ಕಿಕ ವ್ಯಕ್ತಿಯೆಂದು ಅರ್ಥ. ನೀವು ಭಾವನೆಗಳಿಗೆ ಬಲಿಯಾಗುವ ಬದಲು ಎಲ್ಲದರ ಹಿಂದಿನ ತರ್ಕವನ್ನು ಪ್ರಶ್ನಿಸುವ ತಾರ್ಕಿಕ ವ್ಯಕ್ತಿಯಾಗಿರುತ್ತೀರಿ. ನೀವು ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಯಾವುದೇ ಆತುರವನ್ನು ಪಡುವುದಿಲ್ಲ. ಬದಲಿಗೆ ನೀವು ಅವುಗಳ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಂತರವೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ತಾರ್ಕಿಕ ಚಿಂತಕರಾಗಿರುವ ನೀವು ಪ್ರತಿಯೊಂದು ವಿಷಯದಲ್ಲೂ ಉತ್ತಮ ಆಯ್ಕೆಗಳನ್ನೇ ಮಾಡುತ್ತೀರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ