AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ನಿಮ್ದು ಗುಂಗುರು ಕೂದಲ; ಹಾಗಿದ್ರೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಿರಿ

ಪರ್ಸನಾಲಿಟಿ ಟೆಸ್ಟ್‌ಗೆ ಸಂಬಂಧಿಸಿದ ಸಾಕಷ್ಟು ವಿಷಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತವೆ. ಒಂದು ಫೋಟೋದಲ್ಲಿ ಮೊದಲು ಏನು ಕಾಣಿಸಿತು ಎಂಬ ಆಧಾರದ ಮೇಲೆ, ಕೈಗಳ ಆಕಾರ, ಕಣ್ಣಿನ ಬಣ್ಣ, ನಡೆಯುವ ಶೈಲಿ, ಕಿವಿ ಮೂಗಿನ ಆಕಾರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ನೀವು ವ್ಯಕ್ತಿತ್ವ ಪರೀಕ್ಷೆಯ ಮೂಲಕ ಪರೀಕ್ಷಿಸಿರುತ್ತೀರಿ ಅಲ್ವಾ. ಅಷ್ಟೆ ಅಲ್ಲ ನಿಮ್ಮ ಕೇಶರಾಶಿಯ ಪ್ರಕಾರದ ಮೂಲಕವು ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ನೀವು ತಿಳಿದುಕೊಳ್ಳಬಹುದಾಗಿದೆ. ನಿಮ್ದು ಗುಂಗುರು ಕೂದಲ ಅಥವಾ ಸ್ಟ್ರೈಟ್‌ ಕೂದಲ ಇದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ತಿಳಿಯಿರಿ.

Personality Test: ನಿಮ್ದು ಗುಂಗುರು ಕೂದಲ; ಹಾಗಿದ್ರೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಿರಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 07, 2025 | 9:39 AM

ನಾವು ಹೇಗೆ ನಡೆದುಕೊಳ್ಳುತ್ತೇವೆ, ನಾವು ಮಾತನಾಡುವ ಶೈಲಿ, ನಮ್ಮ ಅಭ್ಯಾಸಗಳು, ನಮ್ಮ ಗುಣ ನಡತೆ ನಮ್ಮ ವ್ಯಕ್ತಿತ್ವವನ್ನು (Personality) ಅನಾವರಣಗೊಳಿಸುತ್ತದೆ. ಈ ಎಲ್ಲಾ ಗುಣ ನಡತೆಯ (Manners) ಆಧಾರದ ಮೇಲೆ ಜನ ನಮ್ಮ ವ್ಯಕ್ತಿತ್ವ ಎಂತಹದ್ದು ಎಂಬುದನ್ನು ನಿರ್ಧರಿಸುತ್ತಾರೆ. ಇಷ್ಟೇ ಅಲ್ಲದೆ ನಮ್ಮ ಜನ್ಮ ದಿನ (birth day), ಜನ್ಮ ದಿನಾಂಕ, ಕಣ್ಣಿನ ಬಣ್ಣ(eye color), ಕಿವಿ (ear) ಮೂಗು (nose) ಕಣ್ಣಿನ (eye) ಆಕಾರ, ದೇಹದ ಆಕಾರ, ನಡೆಯುವ ಶೈಲಿ ಇತ್ಯಾದಿ ಅಂಶಗಳ ಮೂಲಕವೂ ನಮ್ಮ ನಿಗೂಢ ವ್ಯಕ್ತಿತ್ವವನ್ನು (hidden personality) ತಿಳಿಯಬಹುದಾಗಿದೆ. ವ್ಯಕ್ತಿತ್ವ ಪರೀಕ್ಷೆಯ ಇಂತಹ ಸಾಕಷ್ಟು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತವೆ. ನೀವು ದೇಹಾಕಾರ, ಕಣ್ಣಿನ ಬಣ್ಣದ ಮೂಲಕ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿದಿರುತ್ತೀರಿ ಅಲ್ವಾ. ಅದೇ ರೀತಿ ನಿಮ್ಮ ಕೂದಲ ಪ್ರಕಾರದ (hair type) ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಎಂತಹದ್ದು ಎಂಬುದನ್ನು ಪರೀಕ್ಷಿಸಿ.

ನಿಮ್ಮ ಕೇಶರಾಶಿಯ ಪ್ರಕಾರವೇ ಹೇಳುತ್ತೇ ನಿಮ್ಮ ವ್ಯಕ್ತಿತ್ವದ ರಹಸ್ಯ:

ನೀವೇನಾದರೂ ವೇವಿ ಹೇರ್‌ ಹೊಂದಿದ್ದರೆ;

ನಿಮ್ಮ ವೇವಿ ಹೇರ್‌ ಆಗಿದ್ರೆ ನೀವು ಏನೇ ಬಂದರೂ ಬರಲಿ, ನಾನು ಅದನ್ನು ಎದುರಿಸಿ ನಿಲ್ಲುವೆ ಎಂಬ ವ್ಯಕ್ತಿತ್ವವನ್ನು ಹೊಂದಿದವರಾಗಿರುತ್ತೀರಿ. ಈ ನಿಮ್ಮ ಗುಣ ನೋವು ಮತ್ತು ವಿಷಾದಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ನೀವು ಗುರಿ ಆಧಾರಿತ ಮನಸ್ಥಿತಿಯನ್ನು ಹೊಂದಿರುವವರಾಗಿದ್ದು, ನಿಮ್ಮ ಗುರಿಗಳಿಗೆ ಅಡ್ಡಿಯಾಗುವ ಪ್ರತಿಯೊಂದು ಅಂಶಗಳನ್ನು ನೀವು ತ್ಯಜಿಸುತ್ತೀರಿ, ಅದು ಸಂಬಂಧವೇ ಆಗಿದ್ದರೂ ಸರಿ. ನೀವು ನಿಮ್ಮ ಜೀವನವನ್ನು ಸಂತೋಷದಿಂದ ಮತ್ತು ಯಾವುದೇ ಒತ್ತಡವಿಲ್ಲದೆ ಬದುಕಲು ಇಷ್ಟಪಡುತ್ತೀರಿ. ನಿರ್ಭಯವಾಗಿ ಸ್ವತಂತ್ರ್ಯವಾಗಿ ಜೀವಿಸಲು ಬಯಸುವ ನೀವು ಏಕಾಂತತೆಗೆ ಹೆಚ್ಚಿನ ಮಹತ್ವವನ್ನು ನೀಡುವವರಾಗಿರುತ್ತೀರಿ.

ಇದನ್ನೂ ಓದಿ: ಬೇಸಿಗೆಯಲ್ಲಿ ಬಾಯಾರಿಕೆ ತಣಿಸಿ, ಶಕ್ತಿ ನೀಡುವ ಸಿಂಪಲ್ ಸ್ಮೂಥಿ ರೆಸಿಪಿ ಇಲ್ಲಿದೆ! ನೀವೂ ಟ್ರೈ ಮಾಡಿ ನೋಡಿ

ಇದನ್ನೂ ಓದಿ
Image
ಹೊಸ ವರ್ಷ ಆಚರಿಸಿ ಫೂಲ್ ಆದ ದೇಶ ಯಾವುದು?
Image
ದೇಹ ಆಕಾರವೇ ನಿಮ್ಮ ವ್ಯಕ್ತಿತ್ವ ಬಹಿರಂಗ ಪಡಿಸುತ್ತೆ
Image
ಬೇಸಿಗೆಯ ದಾಹ ನೀಗಿಸಲು ಎಳನೀರು ಕುಲುಕ್ಕಿ ಶರ್ಬತ್‌ ಒಮ್ಮೆ ಟ್ರೈ ಮಾಡಿ…
Image
ಭಾರತದ ಹೊರತುಪಡಿಸಿ ವಿದೇಶದಲ್ಲಿರುವ ಪ್ರಮುಖ ಶಿವ ದೇವಾಲಯಗಳಿವು

ನೀವು ಗುಂಗುರು ಕೂದಲನ್ನು ಹೊಂದಿದ್ದರೆ;

ಗುಂಗುರು ಕೂದಲಿನ ಜನರು ಉತ್ಸಾಹಭರಿತ, ಚೈತನ್ಯ, ಮತ್ತು ತಮಾಷೆಯ ಸ್ವಭಾವವನ್ನು ಪ್ರತಿಬಿಂಬಿಸುವ ವ್ಯಕ್ತಿತ್ವದವರಾಗಿರುತ್ತಾರೆ. ಕೆಲವರಿಗೆ ಈ ನಿಮ್ಮ ಸ್ವಭಾವ ನಾಟಕೀಯದಂತೆ ಭಾಸವಾಗಬಹುದು. ಯಾವಾಗಲೂ ನಿಮಗಾಗಿ ವಕಾಲತ್ತು ವಹಿಸುವ ನೀವು ಯಾವುದೇ ವಿಷಯದ ಬಗ್ಗೆ ತ್ವರಿತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ ಮತ್ತು ನಿಮ್ಮ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸುತ್ತೀರಿ. ಅಷ್ಟೇ ಅಲ್ಲದೆ ನಿಮಗೆ ಕ್ರಿಯಾತ್ಮಕ ನಾಯಕತ್ವ ಗುಣವೂ ಇದೆ. ಜೊತೆಗೆ ನೀವು ಸುಲಭವಾಗಿ ಸ್ನೇಹಿತರನ್ನು ಮಾಡಿಕೊಳ್ಳುತ್ತೀರಿ. ಆದರೆ ಪ್ರೀತಿಯ ವಿಷಯಕ್ಕೆ ಬಂದಾಗ, ನೀವು ಬಹಳ ಚಿಂತನಶೀಲವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವವರಾಗಿರುತ್ತೀರಿ. ಮುಖ್ಯವಾಗಿ ಹಿಂದೊಂದು ಮುಂದೊಂದು ಮಾತನಾಡುವ ಎರಡು ಮುಖದ ಜನರನ್ನು ನೀವು ಇಷ್ಟಪಡುವುದಿಲ್ಲ.

ನೇರ ಕೂದಲು ಅಥವಾ ಸ್ಟ್ರೈಟ್‌ ಹೇರ್‌ ನಿಮ್ಮದಾಗಿದ್ದರೆ;

ನೇರ ಕೂದಲನ್ನು ಹೊಂದಿರುವ ಜನ ಯಾವಾಗಲೂ ತಮ್ಮ ಗುರಿಗಳ ಕಡೆಗೆ ಗಮನವನ್ನು ಕೇಂದ್ರೀಕರಿಸುವವರಾಗಿರುತ್ತಾರೆ. ಸವಾಲುಗಳನ್ನು ಹೇಗೆ ಎದುರಿಸಬೇಕು ಎಂದು ತಿಳಿದಿರುವ ಇವರು ಅಡೆತಡೆಗಳನ್ನು ದಾಟಿ, ಜನರು ಅಸಾಧ್ಯವೆಂದು ಪರಿಗಣಿಸುವ ಕೆಲಸವನ್ನು ಸಹ ಜಯಿಸುವ ವ್ಯಕ್ತಿತ್ವದವರಾಗಿರುತ್ತಾರೆ. ಅಷ್ಟೇ ಅಲ್ಲದೆ ಇವರು ಸಂಘಟಿತ, ಶಿಸ್ತುಬದ್ಧ ಮತ್ತು ಗುರಿ ಆಧಾರಿತ ಜೀವನವನ್ನು ನಡೆಸುವವರಾಗಿರುತ್ತಾರೆ. ಮತ್ತು ಆಕರ್ಷಕ ಹಾಗೂ ಶಾಂತ ಸ್ವಭಾವದ ವ್ಯಕ್ತಿಗಳಾಗಿರುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ