AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಮೊಬೈಲ್‌ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿ ಇಡುವವರ ವ್ಯಕ್ತಿತ್ವ ಹೇಗಿರುತ್ತೆ ಗೊತ್ತಾ?

ನೀವು ಮೊಬೈಲ್‌ ಹೇಗೆ ಹಿಡಿದಿಟ್ಟುಕೊಳ್ಳುತ್ತೀರಿ ಎಂಬುದರ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷಿಸಿರುತ್ತೀರಿ ಅಲ್ವಾ. ಅದೇ ರೀತಿ ನೀವು ಮೊಬೈಲ್‌ ಫೋನನ್ನು ಸೈಲೆಂಟ್‌ ಆಗಿ ಇಡುವವರೇ ಎಂಬುದರ ಆಧಾರದ ಮೇಲೂ ನಿಮ್ಮ ನಿಗೂಢ ಗುಣ ಸ್ವಭಾವ ಹೇಗಿದೆ ಎಂಬುದನ್ನು ಪರೀಕ್ಷಿಸಬಹುದು. ನಿಮಗೂ ಮೊಬೈಲ್‌ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿರುವ ಅಭ್ಯಾಸವಿದ್ದರೆ, ನಿಮ್ಮ ವ್ಯಕ್ತಿತ್ವ ಯಾವ ರೀತಿಯದ್ದು ಎಂಬುದನ್ನು ತಿಳಿಯಿರಿ.

Personality Test: ಮೊಬೈಲ್‌ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿ ಇಡುವವರ ವ್ಯಕ್ತಿತ್ವ ಹೇಗಿರುತ್ತೆ ಗೊತ್ತಾ?
ವ್ಯಕ್ತಿತ್ವ ಪರೀಕ್ಷೆImage Credit source: Getty Images
ಮಾಲಾಶ್ರೀ ಅಂಚನ್​
|

Updated on: Jul 12, 2025 | 4:33 PM

Share

ವ್ಯಕ್ತಿತ್ವ ಪರೀಕ್ಷೆಯ (Personality Test) ಹಲವು ವಿಧಾನಗಳಿವೆ. ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ, ಮೂಗಿನ ಆಕಾರ, ಕಾಲ್ಬೆರಳಿನ ಆಕಾರ, ನಡಿಗೆ ಸೇರಿದಂತೆ ಹಲವು ವಿಧಾನಗಳ ಮೂಲಕ ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಹೇಗಿರುತ್ತೆ ಎಂಬುದನ್ನು ತಿಳಿಯಬಹುದು. ಅಷ್ಟೇ ಯಾಕೆ ಮೊಬೈಲ್‌ ಹಿಡಿದುಕೊಳ್ಳುವ ರೀತಿಯಿಂದಲೂ ನಮ್ಮ ಗುಣ ಸ್ವಭಾವವನ್ನು ತಿಳಿಯಬಹುದು. ಅದೇ ರೀತಿ ಮೊಬೈಲ್‌ ಸೈಲೆಂಟ್‌ ಮೋಡ್‌ನಲ್ಲಿಡುವ ಅಭ್ಯಾಸದಿಂದ ಕೂಡಾ ನಾವು ನಮ್ಮ ವ್ಯಕ್ತಿತ್ವವನ್ನು ಪರೀಕ್ಷಿಸಬಹುದಂತೆ. ನಿಮಗೂ ಸಹ ಯಾವಾಗ್ಲೂ ಮೊಬೈಲ್‌ ಫೋನ್‌ ಸೈಲೆಂಟ್‌ ಮೋಡ್‌ನಲ್ಲಿಡುವ ಅಭ್ಯಾಸ ಇದ್ಯಾ? ಹಾಗಿದ್ರೆ ನಿಮ್ಮ ವ್ಯಕ್ತಿತ್ವ ಯಾವ ರೀತಿ ಇರುತ್ತೆ ಎಂಬುದನ್ನು ಒಮ್ಮೆ ಪರೀಕ್ಷಿಸಿ.

ಮೊಬೈಲ್‌ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿಡುವವರ ವ್ಯಕ್ತಿತ್ವ ಹೇಗಿರುತ್ತೆ?

ಕೆಲವರು ಯಾವಾಗ್ಲೂ ನೋಡಿದ್ರೂ ತಮ್ಮ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿಯೇ ಇಟ್ಟಿರುತ್ತಾರೆ. ನೀವು ಸಹ ಈ ಗುಂಪಿಗೆ ಸೇರಿದವರಾ? ಹಾಗಿದ್ರೆ ನಿಮ್ಮ ವ್ಯಕ್ತಿತ್ವ ಯಾವ ರೀತಿ ಇರುತ್ತೆ ಎಂಬುದನ್ನು ತಿಳಿಯಿರಿ.

ಅಂತರ್ಮುಖಿ: ಮನೋವಿಜ್ಞಾನದ ಪ್ರಕಾರ ನೀವು ನಿಮ್ಮ ಫೋನನ್ನು ಯಾವಾಗಲೂ ಸೈಲೆಂಟ್‌ ಮೋಡ್‌ನಲ್ಲಿ ಇಟ್ಟರೆ, ನೀವು ಅಂತರ್ಮುಖಿಯೆಂದು ಅರ್ಥ. ನೀವು ಯಾರೊಂದಿಗೂ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ.

ಇದನ್ನೂ ಓದಿ
Image
ಚಿತ್ರದಲ್ಲಿ ನೀವು ಮೊದಲು ನೋಡುವ ಕಣ್ಣೇ ಹೇಳುತ್ತೆ ನೀವು ಎಂತಹ ವ್ಯಕ್ತಿಯೆಂದು
Image
ಮೂಗಿನ ಆಕಾರವೂ ನಿಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ಹೇಳುತ್ತದೆಯಂತೆ
Image
ಕಾಲ್ಬೆರಳಿನ ಆಕಾರದಿಂದಲೂ ತಿಳಿಯಬಹುದು ನಿಮ್ಮ ಗುಣ ಸ್ವಭಾವ
Image
ನಿಮ್ಮ ಗುಣ ಸ್ವಭಾವ ತಿಳಿಸುತ್ತೆ ಈ ಚಿತ್ರದಲ್ಲಿ ನೀವು ಆಯ್ಕೆ ಮಾಡುವ ಪ್ರಾಣಿ

ಕೆಲಸಕ್ಕೆ ಪ್ರಾಮುಖ್ಯತೆ: ಮೊಬೈಲ್‌ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿ ಇಡುವವರು ಯಾವಾಗಲೂ ತಮ್ಮ ಕೆಲಸಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರಂತೆ. ಮತ್ತು ಇವರು ಕೆಲಸದ ಸಮಯದಲ್ಲಿ ಫೋನನ್ನು ಬಳಸುವುದಿಲ್ಲ. ಜೊತೆಗೆ ಇವರು ಸಮಯ ಪ್ರಜ್ಞೆಯ ಜೊತೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವವರಾಗಿರುತ್ತಾರೆ.

ಭಾವನಾತ್ಮಕವಾಗಿ ಬಲಿಷ್ಠರಾಗಿರುತ್ತಾರೆ: ನೀವು ನಿಮ್ಮ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿ ಇಟ್ಟರೆ, ನೀವು ಭಾವನಾತ್ಮಕವಾಗಿ ತುಂಬಾ ಬಲಿಷ್ಠರು ಎಂದರ್ಥ. ನೀವು ಡಿಜಿಟಲ್‌ ಪ್ರಪಂಚಕ್ಕಿಂತ ನಿಜ ಜೀವನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತೀರಿ ಮತ್ತು ನೀವು ಮೊಬೈಲ್‌ನಲ್ಲಿ ಹೆಚ್ಚು ಹೊತ್ತು ಸಮಯ ಕಳೆಯಲು ಇಷ್ಟಪಡುವುದಿಲ್ಲ.

ಇದನ್ನೂ ಓದಿ: ಈ ಚಿತ್ರದಲ್ಲಿ ನೀವು ಆಯ್ಕೆ ಮಾಡುವ ಕಣ್ಣು ‌ಬಹಿರಂಗಪಡಿಸುತ್ತೆ ನಿಮ್ಮ ಸೀಕ್ರೆಟ್‌ ವ್ಯಕ್ತಿತ್ವ

ಒಂಟಿಯಾರಿಗಲು ಇಷ್ಟ: ಮೊಬೈಲ್‌ ಫೋನ್‌ ಸೈಲೆಂಟ್‌ ಮೋಡ್‌ನಲ್ಲಿ ಇಡುವವರು ಯಾವಾಗಲೂ ಒಂಟಿಯಾಗಿರಲು ಇಷ್ಟಪಡುತ್ತಾರೆ. ಅವರು ತಮ್ಮದೇ ಜಗತ್ತಿನಲ್ಲಿ ಮುಳುಗಿ ಹೋಗಿರುತ್ತಾರೆ.

ಇದರ ಹೊರತಾಗಿ ಮೊಬೈಲ್‌ ನೋಟಿಫಿಕೇಶನ್ ಶಬ್ದ ಮಾನಸಿಕ ಒತ್ತಡ ಮತ್ತು ಕಿರಿಕಿರಿಯ ಭಾವನೆಯನ್ನು ಉಂಟು ಮಾಡುತ್ತದೆ ಎಂದು ಮಾನಸಿಕ ನೆಮ್ಮದಿಗಾಗಿ ಮೊಬೈಲ್‌ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿ ಇಡುತ್ತಾರಂತೆ. ‌

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ