AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಚಿತ್ರದಲ್ಲಿ ನಿಮಗೆ ಮೊದಲು ಕಂಡಿದ್ದೇನು? ಹಕ್ಕಿ ಕಂಡರೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ

ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಿಸಿದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್ ಆಗುತ್ತಿರುತ್ತದೆ. ರಹಸ್ಯ ವ್ಯಕ್ತಿತ್ವ ಹೇಗಿದೆ ಎಂದು ತಿಳಿದುಕೊಳ್ಳಲು ಬಯಸಿದರೆ, ಈ ವ್ಯಕ್ತಿತ್ವ ಪರೀಕ್ಷೆ ಸಹಾಯಕವಾಗಿದೆ. ಇದು ನಿಮ್ಮ ಸ್ವಭಾವವನ್ನು ಹೆಚ್ಚು ಆಳವಾಗಿ ಅರ್ಥಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಅದಲ್ಲದೇ, ಇದು ಆಂತರಿಕ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ. ಇಲ್ಲಿ ನೀಡಲಾಗಿರುವ ಚಿತ್ರವನ್ನು ನೋಡಿದಾಗ ಮೊದಲು ಕಂಡದ್ದೇನು? ಈ ಚಿತ್ರದಲ್ಲಿ ಮೊದಲು ಕೈ ಅಥವಾ ಹಕ್ಕಿ ಕಂಡರೆ ನಿಮ್ಮ ವ್ಯಕ್ತಿತ್ವ ಹೇಗಿರುತ್ತದೆ ಎಂದು ತಿಳಿದುಕೊಳ್ಳಬಹುದಾಗಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ.

Personality Test: ಚಿತ್ರದಲ್ಲಿ ನಿಮಗೆ ಮೊದಲು ಕಂಡಿದ್ದೇನು? ಹಕ್ಕಿ ಕಂಡರೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on:Mar 05, 2025 | 12:00 PM

Share

ಪ್ರತಿಯೊಬ್ಬರು ಸನ್ನಿವೇಶಕ್ಕೆ ತಕ್ಕಂತೆ ವಿಭಿನ್ನ ವರ್ತನೆ ಹಾಗೂ ನಡವಳಿಕೆಯನ್ನು ತೋರ್ಪಡಿಸುತ್ತಾರೆ. ಹೀಗಾಗಿ ಒಬ್ಬರ ವ್ಯಕ್ತಿತ್ವ ಇನ್ನೊಬ್ಬರಿಗಿಂತ ಭಿನ್ನವಾಗಿರುತ್ತದೆ. ಅದಲ್ಲದೇ, ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ದಿಗ್ಭ್ರಮೆ ಮೂಡಿಸುವುದು ಮಾತ್ರವಲ್ಲ, ವ್ಯಕ್ತಿತ್ವ ರಿವೀಲ್ (personality test) ಮಾಡುತ್ತದೆ. ಒಂದು ಕ್ಷಣ ಚಿತ್ರ ನೋಡಿ ಕಣ್ಣು ಮೋಸಹೋಗಬಹುದು. ಆದರೆ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಮೊದಲು ಕಂಡದ್ದೇನು ಎನ್ನುವುದರ ಮೇಲೆ ವ್ಯಕ್ತಿತ್ವ ನಿರ್ಧಾರವಾಗುತ್ತದೆ. ಈ ಚಿತ್ರದಲ್ಲಿ ಮೊದಲು ಹಕ್ಕಿ ಕಂಡರೆ ನಿಮ್ಮ ವ್ಯಕ್ತಿತ್ವ ಹೀಗೆ, ಅಥವಾ ಕೈ ಕಂಡರೆ ನಿಮ್ಮದು ಈ ರೀತಿಯ ವ್ಯಕ್ತಿತ್ವ ಎಂದು ನಿರ್ಣಯಿಸಬಹುದು.

  • ಹಕ್ಕಿ : ಈ ಚಿತ್ರದಲ್ಲಿ ಮೊದಲು ಹಕ್ಕಿ ಕಂಡರೆ ಅಂತಹ ವ್ಯಕ್ತಿಗಳು ಜೀವನದಲ್ಲಿ ಸ್ವಾತಂತ್ರ್ಯವಾಗಿರಲು ಬಯಸುತ್ತಾರೆ. ಜೀವನವಂಚ್ ಪ್ರೀತಿಸುವ ಯಾವಾಗಲೂ ಹೊಸ ಅನುಭವಗಳು ಮತ್ತು ಅವಕಾಶಗಳನ್ನು ಹುಡುಕುತ್ತಾರೆ. ವೈಯುಕ್ತಿಕ ಸ್ವಾತಂತ್ರ್ಯವನ್ನು ಹೆಚ್ಚು ಗೌರವಿಸುವುದರೊಂದಿಗೆ ಇತರರ ಮೇಲೆ ಹೆಚ್ಚು ಅವಲಂಬಿತರಾಗುವುದಿಲ್ಲ. ಸಾಹಸಮಯ ಪ್ರವೃತ್ತಿ ಹೊಂದಿದ್ದು, ಅಪಾಯಗಳನ್ನು ಮೈ ಮೇಲೆ ಎಳೆದುಕೊಳ್ಳಲು ಇಷ್ಟ ಪಡುತ್ತಾರೆ. ಸೃಜನಶೀಲ ವ್ಯಕ್ತಿಗಳಾಗಿದ್ದು, ಮುಕ್ತ ಮನಸ್ಸಿನಿಂದ ಎಲ್ಲವನ್ನು ಸ್ವೀಕರಿಸುತ್ತಾರೆ. ತಮ್ಮ ಇಚ್ಛೆಯಂತೆ ಬದಲಾವಣೆಗಳನ್ನು ಮಾಡಿಕೊಂಡು ಬದುಕುತ್ತಾರೆ.
  • ಕೈ : ಈ ಚಿತ್ರದಲ್ಲಿ ಮೊದಲು ಕೈಯನ್ನು ನೋಡಿದರೆ, ಈ ವ್ಯಕ್ತಿಗಳು ಜೀವನದಲ್ಲಿ ಭದ್ರತೆಯನ್ನು ಆದ್ಯತೆ ನೀಡುತ್ತಾರೆ. ಜೀವನದಲ್ಲಿ ಗುರಿ, ಯೋಜನೆ ಮತ್ತು ಸ್ಥಿರತೆಗೆ ಹೆಚ್ಚು ಗಮನ ಕೊಡುತ್ತಾರೆ. ತಮ್ಮ ಮಿತಿಗಳೇನು ಎನ್ನುವುದರ ತಿಳುವಳಿಕೆ ಈ ವ್ಯಕ್ತಿಗಳಿಗೆ ಇರುತ್ತದೆ. ಹೀಗಾಗಿ ಜೀವನದಲ್ಲಿನ ಬೇಕು ಬೇಡಗಳನ್ನು ಅರಿತುಕೊಂಡು ಆರಾಮದಾಯಕ ಮತ್ತು ಸುರಕ್ಷಿತವಾಗಿರಲು ಬಯಸುತ್ತಾರೆ. ಈ ಜನರು ಚಿಂತನಾಚೀಲರಾಗಿದ್ದು, ಅಪಾಯಗಳನ್ನು ತೆಗೆದುಕೊಳ್ಳಲು ಹೆದರುವುದಿಲ್ಲ. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ಸು ಕಾಣುತ್ತಾರೆ. ಕೆಲಸದ ಸ್ಥಳದಲ್ಲಿ,ಸಂಘಟಿತ ಮತ್ತು ವ್ಯವಸ್ಥಿತ ವಿಧಾನದೊಂದಿಗೆ ಕೆಲಸ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Wed, 5 March 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!