AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test : ನಿಮ್ಮ ಇಷ್ಟದ ಹಣ್ಣು ಬಿಚ್ಚಿಡುತ್ತೆ ನಿಮ್ಮ ನಿಗೂಢ ವ್ಯಕ್ತಿತ್ವ

ಕೆಲವು ಹಣ್ಣುಗಳನ್ನು ಒಮ್ಮೆ ತಿಂದರೆ ಸಾಕು, ಅವುಗಳ ರುಚಿಯಿಂದಲೇ ಇಷ್ಟವಾಗಿ ಬಿಡುತ್ತದೆ. ಆದರೆ ನಿಯಮಿತವಾಗಿ ಹಣ್ಣುಗಳ ಸೇವನೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಒಬ್ಬೊಬ್ಬರಿಗೆ ಒಂದೊಂದು ಹಣ್ಣು ಇಷ್ಟವಿರುತ್ತದೆ. ಆದರೆ ನೀವು ಇಷ್ಟ ಪಡುವ ಹಣ್ಣಿನಿಂದಲೇ ನಿಮ್ಮ ವ್ಯಕ್ತಿತ್ವ ಹಾಗೂ ಗುಣಸ್ವಭಾವವನ್ನು ಅರಿತುಕೊಳ್ಳಬಹುದು. ಹಾಗಾದ್ರೆ ನಿಮ್ಮ ಇಷ್ಟದ ಹಣ್ಣಿನ ಆಧಾರದ ಮೇಲೆ ನಿಮ್ಮ ಗುಣಸ್ವಭಾವ ತಿಳಿದುಕೊಳ್ಳಬಹುದು. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Personality Test : ನಿಮ್ಮ ಇಷ್ಟದ ಹಣ್ಣು ಬಿಚ್ಚಿಡುತ್ತೆ ನಿಮ್ಮ ನಿಗೂಢ ವ್ಯಕ್ತಿತ್ವ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jan 20, 2025 | 12:53 PM

Share

ಒಬ್ಬ ವ್ಯಕ್ತಿಯೂ ಹೇಗೆಂದು ಅರ್ಥ ಮಾಡಿಕೊಳ್ಳುವುದು ತುಂಬಾನೇ ಕಷ್ಟಕರ. ಒಬ್ಬರಿಗಿಂತ ಇನ್ನೊಬ್ಬರು ಗುಣಸ್ವಭಾವದಲ್ಲಿ ಭಿನ್ನವಾಗಿರುತ್ತಾರೆ. ಆದರೆ ಒಬ್ಬ ವ್ಯಕ್ತಿಯೂ ನಡೆದಾಡುವ ರೀತಿ, ಮಾತನಾಡುವ ಶೈಲಿ, ನಿಂತುಕೊಳ್ಳುವ ಹಾಗೂ ಕುಳಿತುಕೊಳ್ಳುವ ಭಂಗಿಯಿಂದ ವ್ಯಕ್ತಿತ್ವವನ್ನು ಅರ್ಥ ಮಾಡಿಕೊಳ್ಳಬಹುದು. ಯಾವುದೇ ಒಬ್ಬ ವ್ಯಕ್ತಿಯ ಬಗ್ಗೆ ತಿಳಿದುಕೊಳ್ಳಲು ಇಚ್ಚಿಸಿದರೆ ಆ ವ್ಯಕ್ತಿಯ ನೆಚ್ಚಿನ ಹಣ್ಣಿನ ಬಗ್ಗೆ ತಿಳಿದುಕೊಂಡರೆ ಸಾಕಂತೆ, ವ್ಯಕ್ತಿಯ ಗುಣ ಹೇಗೆಂದು ನಿರ್ಣಯಿಸಬಹುದಂತೆ.

  • ಬಾಳೆಹಣ್ಣು : ಬಾಳೆಹಣ್ಣನ್ನು ಇಷ್ಟಪಡುವ ವ್ಯಕ್ತಿಗಳು ಸೂಕ್ಷ್ಮ ಸ್ವಭಾವವುಳ್ಳವರು. ಅತಿಯಾದ ಒಳ್ಳೆತನದಿಂದಲೇ ಎಲ್ಲರೂ ಇಷ್ಟಪಡುವ ವ್ಯಕ್ತಿಗಳಾಗಿದ್ದು, ಆದರೆ ಈ ಒಳ್ಳೆತನವೇ ಅವರನ್ನು ತೊಂದರೆ ಸಿಲುಕುವಂತೆ ಮಾಡುತ್ತದೆ. ನಿಷ್ಠಾವಂತ ಗುಣ, ನಂಬಿಕೆ ಅರ್ಹರಾಗಿದ್ದು, ಇಂತಹ ಸನ್ನಿವೇಶಗಳು ಎದುರಾದರೂ ನಂಬಿಕೆಯನ್ನು ಮುರಿಯುವುದಿಲ್ಲ. ತಾವಿಷ್ಟ ಪಡುವ ವ್ಯಕ್ತಿಯನ್ನು ಬೇಕು ಬೇಡಗಳನ್ನು ಪೂರೈಸುತ್ತ ಸದಾ ಬೆಂಬಲ ನೀಡುತ್ತಾರೆ.
  • ಕಿತ್ತಳೆ ಹಣ್ಣು : ಕಿತ್ತಳೆ ಹಣ್ಣನ್ನು ಇಷ್ಟಪಡುವ ಜನರಲ್ಲಿ ತಾಳ್ಮೆ ಗುಣ ಹೆಚ್ಚಿರುತ್ತದೆ. ವಿಶ್ವಾಸಾರ್ಹರಾಗಿದ್ದು, ಈ ವ್ಯಕ್ತಿಗಳು ಸುಳ್ಳು ಹೇಳಲು ಇಷ್ಟ ಪಡುವುದಿಲ್ಲ. ಪ್ರಾಮಾಣಿಕ ವ್ಯಕ್ತಿಗಳಾಗಿದ್ದು, ಗಂಭೀರ ಮತ್ತು ಚಿಂತನಾಶೀಲರಾಗಿರುತ್ತಾರೆ. ಕಿತ್ತಳೆ ಇಷ್ಟಪಡುವವರು ಯಾರಿಗೂ ದ್ರೋಹ ಮಾಡದೇ, ಪ್ರಾಮಾಣಿಕತೆಯಿಂದ ತಮ್ಮ ಕೆಲಸವನ್ನು ಮಾಡಿಕೊಂಡು ಹೋಗುತ್ತಾರೆ.
  • ಮಾವಿನ ಹಣ್ಣು : ಕೆಲವರಿಗೆ ಮಾವಿನ ಹಣ್ಣೆಂದರೆ ತುಂಬಾನೇ ಇಷ್ಟ. ಮಾವಿನ ಸೀಸನ್ ಆರಂಭವಾಗುತ್ತಿದ್ದಂತೆ ಬಾಯಿ ಚಪ್ಪರಿಸಿಕೊಂಡು ಸವಿಯುವವರೇ ಹೆಚ್ಚು. ಆದರೆ ಈ ಹಣ್ಣನ್ನು ಇಷ್ಟ ಪಡುವವರು ಹಠಮಾರಿ ಸ್ವಭಾವದವರು. ಎಲ್ಲರೊಂದಿಗೆ ಚಿಂತನಶೀಲರಾಗಿ ವರ್ತಿಸುತ್ತಾರೆ. ಆದರೆ ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ಎಚ್ಚರ ವಹಿಸುತ್ತಾರೆ. ಆದರೆ ಈ ವ್ಯಕ್ತಿಗಳು ತರ್ಕಬದ್ದವಾಗಿ ಯೋಚಿಸುವ ಹಾಗೂ ಇಷ್ಟ ಪಡುವ ವ್ಯಕ್ತಿಗಳೆನ್ನಬಹುದು.
  • ಸೇಬು ಹಣ್ಣು : ಸೇಬು ಹಣ್ಣನ್ನು ಇಷ್ಟಪಡುವ ವ್ಯಕ್ತಿಗಳು ಫಿಟ್ ನೆಸ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದು, ಫಿಟ್ ಆಗಿರಲು ಇಷ್ಟಪಡುತ್ತಾರೆ. ಶಿಸ್ತುಬದ್ದ ಜೀವನ ನಡೆಸುವ ವ್ಯಕ್ತಿಗಳಾಗಿದ್ದು, ಕೆಲಸವನ್ನು ಹೆಚ್ಚು ಪ್ರೀತಿಸುತ್ತಾರೆ. ಹೀಗಾಗಿ ಕೆಲಸವನ್ನು ಉತ್ಸಾಹದಿಂದ ಮಾಡುವುದು ಹಾಗೂ ಜೀವನದ ಪ್ರತಿ ಕ್ಷಣವನ್ನು ಆನಂದಿಸುವ ಗುಣ ಇವರದ್ದಾಗಿರುತ್ತದೆ. ತನ್ನ ಆತ್ಮೀಯರನ್ನು ಹೆಚ್ಚು ಪ್ರೀತಿಸುವ ವ್ಯಕ್ತಿಗಳಾಗಿರುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ