Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test : ನಿಮ್ಮ ಪಾದದ ಅಡಿ ಹೇಳುತ್ತೆ ನಿಮ್ಮ ರಹಸ್ಯಮಯ ವ್ಯಕ್ತಿತ್ವ

ಪ್ರತಿಯೊಬ್ಬರು ತಮ್ಮದೇ ಆದ ಗುಣಸ್ವಭಾವ ಹಾಗೂ ವ್ಯಕ್ತಿತ್ವ ಹೊಂದಿರುತ್ತಾರೆ. ಅದೇ ರೀತಿ ವ್ಯಕ್ತಿಯ ದೇಹದ ಪ್ರತಿಯೊಂದು ಅಂಗದ ಆಕಾರವು ಭಿನ್ನವಾಗಿರುತ್ತದೆ. ಆದರೆ ಈ ಅಂಗಗಳು ವ್ಯಕ್ತಿಯ ವ್ಯಕ್ತಿತ್ವ ಮಾತ್ರವಲ್ಲದೆ ಆತನ ಸಾಮರ್ಥ್ಯ, ದೌರ್ಬಲ್ಯ, ನಡವಳಿಕೆಯನ್ನು ಬಿಚ್ಚಿಡುತ್ತದೆ. ಹಸ್ತರೇಖೆ ನೋಡಿ ಒಬ್ಬ ವ್ಯಕ್ತಿಯ ಗುಣಸ್ವಭಾವ ಹಾಗೂ ಭವಿಷ್ಯ ಹೇಳುವುದನ್ನು ನೋಡಿರಬಹುದು. ಆದರೆ ಈ ಪಾದಗಳ ಆಕಾರವು ನಿಮ್ಮ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ಹೇಳುತ್ತದೆ. ಹಾಗಾದ್ರೆ ಈ ಚಿತ್ರದಲ್ಲಿ ಈ ಎರಡು ಆಕಾರದ ಪಾದಗಳಿದ್ದು, ನಿಮ್ಮ ಪಾದ ಯಾವ ಆಕಾರದಲ್ಲಿ ನೋಡಿ, ನಿಮ್ಮ ಗುಣಸ್ವಭಾವವನ್ನು ಅರಿತುಕೊಳ್ಳಬಹುದಾಗಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ.

Personality Test : ನಿಮ್ಮ ಪಾದದ ಅಡಿ ಹೇಳುತ್ತೆ ನಿಮ್ಮ ರಹಸ್ಯಮಯ ವ್ಯಕ್ತಿತ್ವ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 10, 2025 | 5:35 PM

ಒಬ್ಬ ವ್ಯಕ್ತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಇಡೀ ಜೀವಮಾನವೇ ಬೇಕಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಯೂ ಸಂದರ್ಭಕ್ಕೆ ಅನುಗುಣವಾಗಿ ತನ್ನ ಗುಣಸ್ವಭಾವವನ್ನು ಬದಲಾಯಿಸುತ್ತಾರೆ. ಆದರೆ ನಿಮ್ಮ ದೇಹದ ನಿಮ್ಮ ವ್ಯಕ್ತಿತ್ವವನ್ನು ಬಹಿರಂಗ ಪಡಿಸುತ್ತದೆ. ಕೈಗಳ ಆಕಾರದಿಂದ ಹಿಡಿದು, ನೀವು ಕುಳಿತುಕೊಳ್ಳುವ ಹಾಗೂ ಮಲಗುವ ಭಂಗಿಯೇ ವ್ಯಕ್ತಿತ್ವವನ್ನು ಬಹಿರಂಗ ಪಡಿಸುತ್ತದೆ. ಪಾದದ ಆಕಾರವು ವ್ಯಕ್ತಿತ್ವವನ್ನು ಬಹಿರಂಗ ಪಡಿಸುತ್ತದೆ, ನಿಮ್ಮ ಪಾದ ಯಾವ ಆಕಾರದಲ್ಲಿದೆ ಎನ್ನುವ ಆಧಾರದ ಮೇಲೆ ನಿಗೂಢ ಗುಣಸ್ವಭಾವವನ್ನು ಕಂಡುಕೊಳ್ಳಿ.

  • ಚಪ್ಪಟ್ಟೆಯಾದ ಕಾಮಾನು ಆಕಾರದ ಪಾದ : ಚಪ್ಪಟೆ ಪಾದಗಳನ್ನು ಹೊಂದಿರುವ ಜನರು ತುಂಬಾ ಮುಕ್ತ ಮನಸ್ಸಿನವರಾಗಿದ್ದು, ಈ ವ್ಯಕ್ತಿಗಳು ಅವರು ವಾಸ್ತವ ಸ್ಥಿತಿಯನ್ನು ಒಪ್ಪಿಕೊಳ್ಳುವುದಿಲ್ಲ. ಎಲ್ಲರ ಜೊತೆಗೆ ಬೆರೆಯುವ ಮೂಲಕ ಏಕಾಂಗಿತನಕ್ಕಿಂತ ಸಂಬಂಧಗಳಿಗೆ ಹೆಚ್ಚು ಬೆಲೆ ಕೊಡುತ್ತಾರೆ. ಬಹಿರ್ಮುಖ ಗುಣದಿಂದಲೇ ಇವರನ್ನು ಉತ್ತಮ ನಾಯಕರನ್ನಾಗಿ ಮಾಡುತ್ತದೆ. ಅದಲ್ಲದೇ, ಯಾವಾಗಲೂ ನಾಲ್ಕು ಜನರೊಂದಿಗೆ ಮಾತನಾಡಲು ಇಷ್ಟ ಪಡುತ್ತಾರೆ. ಜೊತೆಗೆ ಸ್ನೇಹಿತರ ದೊಡ್ಡ ವಲಯವನ್ನು ಹೊಂದಿರುತ್ತಾರೆ. ಸಹಾನುಭೂತಿ ಹಾಗೂ ಕಾಳಜಿಯುಳ್ಳ ವ್ಯಕ್ತಿಗಳಾಗಿದ್ದು, ಭಾವನೆಗಳಿಗೆ ಹೆಚ್ಚು ಬೆಲೆ ಕೊಡುತ್ತಾರೆ. ಇತರರ ಮಾತುಗಳಿಗೆ ಕಿವಿಯಾಗುತ್ತಾರೆ. ಈ ಜನರು ರಕ್ತಸಂಬಂಧಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ವಿಶ್ಲೇಷಿಸುವ ಬದಲು ಪ್ರತಿ ಸವಾಲನ್ನು ಆನಂದಿಸುತ್ತಾ ಮುನ್ನುಗ್ಗುವ ಪ್ರವೃತ್ತಿ ಇವರದ್ದಾಗಿರುತ್ತದೆ. ಶಾಂತ ಹಾಗೂ ಹೊಂದಿಕೊಳ್ಳುವ ಗುಣದಿಂದ ಎಲ್ಲರಿಗೂ ಹತ್ತಿರವಾಗುತ್ತಾರೆ.
  • ಎತ್ತರವಾದ ಕಾಮಾನು ಆಕಾರದ ಪಾದ : ಪಾದವು ಎತ್ತರವಾದ ಕಾಮಾನು ಆಕಾರ ಹೊಂದಿದ್ದರೆ ಈ ಜನರು ಹೆಚ್ಚು ದೂರದೃಷ್ಟಿಯನ್ನು ಹೊಂದಿರುತ್ತಾರೆ. ಅತೀ ಬುದ್ಧಿವಂತಿಕೆ, ಸ್ವತಂತ್ರ ಸ್ವಭಾವ ಹಾಗೂ ಸಾಮಾಜಿಕ ಪ್ರಜ್ಞೆ ಇವರಲ್ಲಿ ಹೆಚ್ಚಿರುತ್ತದೆ. ಈ ವ್ಯಕ್ತಿಗಳು ಸ್ವತಂತ್ರರಾಗಿದ್ದು, ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಎಲ್ಲವನ್ನೂ ಆಳವಾಗಿ ಯೋಚಿಸುವ ಗುಣ ಈ ಜನರಲ್ಲಿ ಅಧಿಕವಾಗಿರುತ್ತದೆ. ಹೆಚ್ಚು ಒಂಟಿಯಾಗಿರುವುದನ್ನು ಇಷ್ಟಪಡುತ್ತಾರೆ. ಹೊಸ ವಿಷಯಗಳನ್ನು ತಿಳಿದುಕೊಳ್ಳುವಲ್ಲಿ ಆಸಕ್ತಿ ಹೆಚ್ಚಿರುತ್ತದೆ. ದೃಢವಾದ ನಿಶ್ಚಯ ಹಾಗೂ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಚತುರರು. ಜೀವನದಲ್ಲಿ ಸವಾಲುಗಳನ್ನು ಪ್ರೀತಿಸುತ್ತಾರೆ ಜೊತೆಗೆ ಏಕಾಂಗಿಯಾಗಿ ಸವಾಲುಗಳನ್ನು ಎದುರಿಸಲು ಇಷ್ಟ ಪಡುತ್ತಾರೆ. ಗುರಿ ಸಾಧಿಸುವಲ್ಲಿ ಶ್ರಮಿಸುವ ವ್ಯಕ್ತಿಗಳಾಗಿದ್ದು ಜೀವನದಲ್ಲಿ ಯಶಸ್ಸು ಕಾಣುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಳಿಂಗ ಸರ್ಪದೊಂದಿಗೆ ಭೀಕರ ಕಾಳಗ: ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ
ಕಾಳಿಂಗ ಸರ್ಪದೊಂದಿಗೆ ಭೀಕರ ಕಾಳಗ: ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ
ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!