AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಲು ಮನೆಯಲ್ಲಿ ಈ ಗಿಡಗಳನ್ನು ನೆಡಿ

ಪ್ರತಿ ಮನೆಯಲ್ಲೂ ಸಹ ಹಲ್ಲಿಗಳ ಕಾಟ ಇದ್ದೇ ಇರುತ್ತದೆ. ಎಷ್ಟೇ ಸರ್ಕಸ್‌ ಮಾಡಿದ್ರೂ ಸಹ ಇವುಗಳನ್ನು ನಿರ್ಮೂಲನೆ ಮಾಡುವುದು ಸಖತ್‌ ಕಷ್ಟದ ಕೆಲಸ. ಹೀಗಿರುವಾಗ ಯಾವುದೇ ರಾಸಾಯನಿಕ ಉತ್ಪನ್ನಗಳನ್ನು ಬಳಸುವ ಬದಲು ಈ ಕೆಲವು ಗಿಡಗಳನ್ನು ನೆಡುವ ಮೂಲಕ ಹಲ್ಲಿಗಳ ಕಾಟದಿಂದ ಸುಲಭ ಪರಿಹಾರವನ್ನು ಪಡೆಯಬಹುದು ಜೊತೆಗೆ ಮನೆಯೊಳಗೆ ಹಲ್ಲಿ ಬಾರದಂತೆ ತಡೆಯಬಹುದು. ಆ ಗಿಡಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಲು ಮನೆಯಲ್ಲಿ ಈ ಗಿಡಗಳನ್ನು ನೆಡಿ
ಸಾಂದರ್ಭಿಕ ಚಿತ್ರ Image Credit source: Pexels
ಮಾಲಾಶ್ರೀ ಅಂಚನ್​
|

Updated on: Dec 22, 2025 | 5:23 PM

Share

ಸೊಳ್ಳೆ, ಹಲ್ಲಿ (lizards), ಜಿರಳೆ, ಇಲಿ ಇವೆಲ್ಲವೂ ಪ್ರತಿ ಮನೆಗೂ ಕರೆಯದೆ ಬರುವ ಅತಿಥಿಗಳು ಅಂತಾನೇ ಹೇಳಬಹುದು. ಒಮ್ಮೆ ಮನೆಯೊಳಗೆ ನುಸುಳಿದರೆ ಸಾಕು ಇವು ಸಿಕ್ಕಾಪಟ್ಟೆ ಕಿರಿಕಿರಿ ಉಂಟು ಮಾಡುತ್ತವೆ. ಇವುಗಳನ್ನು ಓಡಿಸುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಅದರಲ್ಲೂ ಗೋಡೆಯ ಮೇಲೆ ಓಡಾಡುವ ಹಲ್ಲಿಗಳು ಯಾವಾಗ ಮೈ ಮೇಲೆ ಬೀಳುತ್ತವೋ, ತಯಾರಿಸಿಟ್ಟ ಆಹಾರದ ಮೇಲೆ ಬೀಳುತ್ತವೋ ಎಂಬ ಸಣ್ಣ ಭಯ ಎಲ್ಲರಲ್ಲೂ ಇದ್ದೇ ಇರುತ್ತದೆ.  ಅದಕ್ಕಾಗಿ ಇವುಗಳನ್ನು ಓಡಿಸಲು ಹಲವರು ಅನೇಕಾರು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ನೀವು ಸಹ ಇದೇ ರೀತಿ ಹಲ್ಲಿಗಳ ಕಾಟದಿಂದ ಬೇಸತ್ತಿದ್ದೀರಾ? ಹಾಗಿದ್ರೆ ಈ ಮನೆಯಲ್ಲಿ ಈ ಗಿಡಗಳನ್ನು ನೆಡಿ. ಈ ಗಿಡಗಳು ವಿಶಿಷ್ಟವಾದ ವಾಸನೆಯನ್ನು ಹೊಂದಿದ್ದು, ಇವು ಹಲ್ಲಿಗಳನ್ನು ನೈಸರ್ಗಿಕವಾಗಿ ದೂರವಿಡಲು ಸಹಾಯ ಮಾಡುತ್ತವೆ.

ಹಲ್ಲಿಗಳನ್ನು ಓಡಿಸಲು ಈ ಗಿಡಗಳನ್ನು ಮನೆಯಲ್ಲಿ ನೆಡಿ:

ಲ್ಯಾವೆಂಡರ್‌ ಸಸ್ಯ: ಲ್ಯಾವೆಂಡರ್‌ ಬಲವಾದ ವಾಸನೆ ಹಾಗೂ ಲಿನೂಲ್ ಎಂಬ ಸಂಯುಕ್ತವನ್ನು ಹೊಂದಿದ್ದು, ಇದು ಪ್ರಬಲವಾದ ನೈಸರ್ಗಿಕ ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆ. ಈ ವಾಸನೆಯನ್ನು ಹಲ್ಲಿಗಳು, ಇತರ ಕೀಟಗಳು ಇಷ್ಟಪಡುವುದಿಲ್ಲ. ಹಾಗಾಗಿ ನೀವು ಕಿಟಕಿಗಳ ಬಳಿ, ಮನೆಯ ಬಾಲ್ಕನಿ, ಪ್ರವೇಶದ್ವಾರದ ಬಳಿ ಇಡಬಹುದು. ಇದರ ಸುವಾಸನೆಯು ಹಲ್ಲಿಗಳನ್ನು ದೂರವಿಡುವುದಲ್ಲದೆ ನಿಮ್ಮ ಮನೆಗೆ ತಾಜಾ ಸುವಾಸನೆಯನ್ನು ನೀಡುತ್ತದೆ.

ತುಳಸಿ ಗಿಡ: ತುಳಸಿಯ ಕಟುವಾದ ಮತ್ತು ವಿಶಿಷ್ಟವಾದ ವಾಸನೆಯು ಹಲ್ಲಿಗಳಿಗೆ ತುಂಬಾ ಕಿರಿಕಿರಿ ಉಂಟುಮಾಡುತ್ತದೆ. ಇದು ಹಲ್ಲಿಗಳನ್ನು ಮಾತ್ರವಲ್ಲದೆ, ಸೊಳ್ಳೆಗಳು ಮತ್ತು ಇತರೆ ಕೀಟಗಳನ್ನು ಮನೆಯಿಂದ ದೂರವಿಡುತ್ತದೆ. ಅಡುಗೆಮನೆಯ ಕಿಟಕಿಗಳು, ಬಾಲ್ಕನಿಗಳು, ಪ್ರವೇಶ ದ್ವಾರದ ಬಳಿ  ಕುಂಡಗಳಲ್ಲಿ ತುಳಸಿ ಗಿಡವನ್ನು ನೆಡಿ. ಈ ಸಸ್ಯವು ನೈಸರ್ಗಿಕವಾಗಿ ಮನೆಯನ್ನು ರಕ್ಷಿಸುವುದಲ್ಲದೆ ಪರಿಸರವನ್ನು ಶುದ್ಧೀಕರಿಸುತ್ತದೆ.

ಪುದೀನಾ ಗಿಡ: ಪುದೀನಾದಲ್ಲಿರುವ ಬಲವಾದ ಮೆಂಥಾಲ್ ವಾಸನೆಯು ಹಲ್ಲಿಗಳ ಸೂಕ್ಷ್ಮ ಇಂದ್ರಿಯಗಳಿಗೆ ಅತ್ಯಂತ ಅಹಿತಕರವಾಗಿದೆ. ಹಾಗಾಗಿ ಮನೆಯ ಆರ್ದ್ರ ಪ್ರದೇಶಗಳಾದ ಸ್ನಾನಗೃಹದ ಕಿಟಕಿ ಅಥವಾ ಅಡುಗೆಮನೆಯ ಬಳಿ ಪುದೀನಾ ಗಿಡಗಳನ್ನು ಕುಂಡದಲ್ಲಿ ನೆಡಿ. ಹೆಚ್ಚುವರಿಯಾಗಿ, ನೀವು ಕೆಲವು ಹನಿ ಪುದೀನಾ ಎಣ್ಣೆಯನ್ನು ನೀರಿನೊಂದಿಗೆ ಬೆರೆಸಿ ಹಲ್ಲಿಗಳು ಓಡಾಡುವ ಸ್ಥಳಗಳಲ್ಲಿ ಸ್ಪ್ರೇ ಮಾಡಬಹುದು.

ರೋಸ್ಮೆರಿ ಗಿಡ: ರೋಸ್ಮರಿಯು ಕಟುವಾದ ವಾಸನೆಯನ್ನು ಹಲ್ಲಿಗಳು ಮಾತ್ರವಲ್ಲದೆ ನೊಣಗಳು, ಸೊಳ್ಳೆಗಳು ಸಹ ಇಷ್ಟಪಡುವುದಿಲ್ಲ.  ಹಾಗಾಗಿ ಈ ಹಲ್ಲಿಗಳನ್ನು ಪರಿಣಾಮಕಾರಿಯಾಗಿ ಓಡಿಸಲು ನೀವು ರೋಸ್ಮೆರಿ ಗಿಡಗಳನ್ನು ಕುಂಡದಲ್ಲಿ ನೆಟ್ಟು  ಮನೆಯ ಬಾಲ್ಕನಿ, ಕಿಟಕಿಗಳ ಬಳಿ ಇಡಬಹುದು.

ಇದನ್ನೂ ಓದಿ: ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಸರಳ ಸಲಹೆಯನ್ನು ಪಾಲಿಸಿ

ಚೆಂಡು ಹೂವಿನ ಗಿಡ: ನಿಮ್ಮ ಮನೆಯ ಸೌಂದರ್ಯವನ್ನು ಹೆಚ್ಚಿಸುವುದರ ಜೊತೆಗೆ, ಚೆಂಡು ಹೂಗಳ ಪರಿಮಳವು ಕೀಟಗಳು ಮತ್ತು ಹಲ್ಲಿಗಳನ್ನು ಸಹ ಹಿಮ್ಮೆಟ್ಟಿಸುತ್ತದೆ. ಹಾಗಾಗಿ ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಲು ಮನೆ ಸುತ್ತಲೂ ಚೆಂಡು ಹೂವಿನ ಗಿಡ ನೆಡಿ.

ಲೆಮನ್‌ಗ್ರಾಸ್: ಲೆಮನ್‌ಗ್ರಾಸ್ ಸಿಟ್ರೊನೆಲ್ಲಾ ಎಣ್ಣೆಯನ್ನು ಹೊಂದಿರುತ್ತದೆ, ಇದು ಪ್ರಬಲವಾದ ನೈಸರ್ಗಿಕ ಕೀಟ ನಿವಾರಕವಾಗಿದೆ. ಇದರ ಬಲವಾದ, ಸಿಟ್ರಸ್ ಪರಿಮಳವು ಹಲ್ಲಿಗಳಿಗೆ ತುಂಬಾ ಕಿರಿಕಿರಿಯನ್ನು ಉಂಟುಮಾಡುತ್ತವೆ. ಹಾಗಾಗಿ ನೀವು ಮನೆ ಬಳಿ ಈ ಗಿಡಗಳನ್ನು ನೆಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ