AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Polydipsia: ತುಂಬಾ ಬಾಯಾರಿಕೆಯಾಗುತ್ತಿದೆಯೇ, ಈ 5 ಕಾಯಿಲೆಗಳಿರಬಹುದು ಎಚ್ಚರ

ಈಗ ಬೇಸಿಗೆಯಾಗಿರುವುದರಿಂದ ಅದರಲ್ಲಿಯೂ ತಾಪಮಾನವು ದಾಖಲೆಯ ಗರಿಷ್ಠ ಮಟ್ಟದಲ್ಲಿರುವುದರಿಂದ ವಿಪರೀತ ಶಾಖಕ್ಕೆ ಬಾಯಾರಿಕೆಯಾಗುತ್ತಿರಬಹುದು ಎಂದು ಸುಮ್ಮನಾಗುತ್ತೇವೆ. ನಿಯಮಿತವಾಗಿ ನೀರು ಕುಡಿಯುವುದು ಒಳ್ಳೆಯದು ಆದರೆ ಕೆಲವರು ಸಾಮಾನ್ಯಕ್ಕಿಂತ ಹೆಚ್ಚು ನೀರನ್ನು ಕುಡಿಯುತ್ತಾರೆ. ಪದೇ ಪದೇ ಬಾಯಾರಿಕೆಯಾಗುತ್ತಿದ್ದರೆ, ಅದನ್ನು ಕಡೆಗಣಿಸುವಂತಿಲ್ಲ. ಅಂತವರು ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

Polydipsia: ತುಂಬಾ ಬಾಯಾರಿಕೆಯಾಗುತ್ತಿದೆಯೇ, ಈ 5 ಕಾಯಿಲೆಗಳಿರಬಹುದು ಎಚ್ಚರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jun 05, 2024 | 1:01 PM

Share

ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು, ಈಗ ಬೇಸಿಗೆಯಾಗಿರುವುದರಿಂದ ಅದರಲ್ಲಿಯೂ ತಾಪಮಾನವು ದಾಖಲೆಯ ಗರಿಷ್ಠ ಮಟ್ಟದಲ್ಲಿರುವುದರಿಂದ ವಿಪರೀತ ಶಾಖಕ್ಕೆ ಬಾಯಾರಿಕೆಯಾಗುತ್ತಿರಬಹುದು ಎಂದು ಸುಮ್ಮನಾಗುತ್ತೇವೆ. ನಿಯಮಿತವಾಗಿ ನೀರು ಕುಡಿಯುವುದು ಒಳ್ಳೆಯದು ಆದರೆ ಕೆಲವರು ಸಾಮಾನ್ಯಕ್ಕಿಂತ ಹೆಚ್ಚು ನೀರನ್ನು ಕುಡಿಯುತ್ತಾರೆ. ಪದೇ ಪದೇ ಬಾಯಾರಿಕೆಯಾಗುತ್ತಿದ್ದರೆ, ಅದನ್ನು ಕಡೆಗಣಿಸುವಂತಿಲ್ಲ. ಅಂತವರು ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಹೆಚ್ಚು ಬಾಯಾರಿಕೆಯಾಗಲು ಕಾರಣವೇನು?

ಅನೇಕರಿಗೆ ಎಷ್ಟು ನೀರು ಕುಡಿದರೂ ಬಾಯಾರಿಕೆ ತಣಿಯುವುದಿಲ್ಲ. ಅಥವಾ ತಣ್ಣನೆಯ ಹಣ್ಣಿನ ರಸ ಮತ್ತು ತಂಪು ಪಾನೀಯಗಳನ್ನು ಕುಡಿದರೂ ಏನು ಪ್ರಯೋಜನವಾಗುವುದಿಲ್ಲ. ಈ ವೈದ್ಯಕೀಯ ಸ್ಥಿತಿಯನ್ನು ಪಾಲಿಡಿಪ್ಸಿಯಾ ಎಂದೂ ಕರೆಯುತ್ತಾರೆ. ನಿಮಗೂ ಈ ರೀತಿ ಲಕ್ಷಣಗಳು ಕಂಡು ಬರುತ್ತಿದ್ದರೆ ಅದನ್ನು ಲಘುವಾಗಿ ಪರಿಗಣಿಸಬೇಡಿ. ಇದರ ಜೊತೆಗೆ ಅತಿಯಾದ ಬಾಯಾರಿಕೆಯು, ಬೇರೆ ಯಾವ ಕಾಯಿಲೆಯ ಸಂಕೇತವಾಗಿರಬಹುದು. ವೈದ್ಯಕೀಯ ತಜ್ಞರು ಈ ಬಗ್ಗೆ ಹೇಳುವುದೇನು? ಇಲ್ಲಿದೆ ಮಾಹಿತಿ.

ನಿರ್ಜಲೀಕರಣ: ದೇಹವು ಈಗಾಗಲೇ ನಿರ್ಜಲೀಕರಣಗೊಂಡಿದ್ದರೆ, ಒಂದು ಅಥವಾ ಎರಡು ಲೋಟ ನೀರು ಕುಡಿಯುವುದರಿಂದ ಬಾಯಾರಿಕೆ ತಣಿಯುವುದಿಲ್ಲ. ಜೊತೆಗೆ ಅವರಲ್ಲಿ ತಲೆತಿರುಗುವಿಕೆ, ತಲೆನೋವು, ವಾಂತಿ, ಅತಿಸಾರ ಮತ್ತು ದೌರ್ಬಲ್ಯದಂತಹ ಸಮಸ್ಯೆಗಳು ಕಂಡುಬರಬಹುದು.

ಬಾಯಿ ಒಣಗುವುದು: ಬಾಯಿ ಒಣಗಿದಾಗ ಸ್ವಲ್ಪ ಸಮಯದವರೆಗೆ ನೀರು ಕುಡಿಯುವ ಬಯಕೆ ಇರುತ್ತದೆ. ಅದರ ಗ್ರಂಥಿಗಳು ಲಾಲಾರಸವನ್ನು ಸರಿಯಾಗಿ ಮಾಡಲು ಸಾಧ್ಯವಾಗದಿದ್ದಾಗ ಬಾಯಿ ಒಣಗುತ್ತದೆ. ಆಗ ಪದೇ ಪದೇ ನೀರು ಕುಡಿದರೂ ಅವರ ಬಾಯಾರಿಕೆಯನ್ನು ನೀಗಿಸಲು ಸಾಧ್ಯವಿಲ್ಲ.ಈ ಕಾರಣದಿಂದಾಗಿ, ಒಬ್ಬ ವ್ಯಕ್ತಿಯು ವಸಡು ಸೋಂಕು ಮತ್ತು ಬಾಯಿಯ ವಾಸನೆಯನ್ನು ಎದುರಿಸಬೇಕಾಗುತ್ತದೆ.

ಮಧುಮೇಹ: ಮಧುಮೇಹವು ಅನೇಕ ರೋಗಗಳ ಮೂಲವಾಗಿದೆ. ಮಧುಮೇಹ ರೋಗಿಗಳ ಮುಖ್ಯ ಸಮಸ್ಯೆಯೆಂದರೆ ಅವರಿಗೆ ಅತಿಯಾದ ಬಾಯಾರಿಕೆಯಾಗುತ್ತದೆ. ಈ ಸಮಸ್ಯೆ ಇರುವ ಜನರು ಪದೇ ಪದೇ ನೀರು ಕುಡಿಯಬೇಕು ಎಂದು ಅಂದುಕೊಳ್ಳುತ್ತಾರೆ. ಒಬ್ಬ ವ್ಯಕ್ತಿಗೆ ಮೊದಲ ಬಾರಿಗೆ ಮಧುಮೇಹ ಬಂದಾಗ, ಅದನ್ನು ಕಂಡುಹಿಡಿಯುವುದು ಸುಲಭವಲ್ಲ, ಅತಿಯಾದ ಬಾಯಾರಿಕೆ ಮಧುಮೇಹದ ಸಂಕೇತವಾಗಿರಬಹುದು ಎಂಬುದನ್ನು ನೆನಪಿಡಿ. ಹಾಗಾಗಿ ನಿಮಗೆ ತುಂಬಾ ಬಾಯಾರಿಕೆಯಾದಾಗ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷೆ ಮಾಡಿ.

ಇದನ್ನೂ ಓದಿ: ನಿಮ್ಮ ಮನೆಯ ಕನ್ನಡಿ ಫಳಫಳ ಹೊಳೆಯುವಂತೆ ಮಾಡುವುದೇಗೆ? ಈ ಟಿಪ್ಸ್ ಫಾಲೋ ಮಾಡಿ

ಆಹಾರ ಪದ್ಧತಿ: ನೀವು ಜಂಕ್ ಫುಡ್ ಅಥವಾ ಹೆಚ್ಚು ಮಸಾಲೆಯುಕ್ತ ಆಹಾರವನ್ನು ಸೇವಿಸಿದರೆ, ಮತ್ತೆ ಮತ್ತೆ ಬಾಯಾರಿಕೆಯಾಗುವುದು ಸಹಜ. ಹಾಗಾಗಿ ಆಹಾರ ಪದ್ಧತಿಯನ್ನು ಸಾಧ್ಯವಾದರೆ ಬದಲಾಯಿಸಿಕೊಳ್ಳಿ.

ರಕ್ತಹೀನತೆ: ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಕೊರತೆ ಉಂಟಾದಾಗ ರಕ್ತಹೀನತೆ ಉಂಟಾಗುತ್ತದೆ. ಇದನ್ನು ಸಾಮಾನ್ಯ ಭಾಷೆಯಲ್ಲಿ ರಕ್ತದ ಕೊರತೆ ಎಂದೂ ಕರೆಯುತ್ತಾರೆ. ದೇಹದಲ್ಲಿ ರಕ್ತದ ಅನುಪಸ್ಥಿತಿಯನ್ನು ರಕ್ತಹೀನತೆ ಎಂದು ಕರೆಯಲಾಗುತ್ತದೆ. ಹಿಮೋಗ್ಲೋಬಿನ್ ಕೊರತೆ ಇದ್ದರೆ ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:34 pm, Tue, 4 June 24

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು