ಮುಖದ ಹೊಳಪಿಗೆ ಆಲೂಗಡ್ಡೆಯನ್ನು ಹೀಗೂ ಬಳಸಬಹುದು…! ಇಲ್ಲಿದೆ ಮಾಹಿತಿ

ಬ್ಲೀಚಿಂಗ್ ಏಜೆಂಟ್ ಆಗಿ ಕಾರ್ಯನಿರ್ವಹಿಸುವ ಆಲೂಗಡ್ಡೆ, ಅನೇಕ ಪೋಷಕಾಂಶಗಳು ಮತ್ತು ನಿರೋಧಕಗಳನ್ನು ಹೊಂದಿರುತ್ತದೆ. ಇದು ಚರ್ಮವನ್ನು ಹಾನಿಕಾರಕ ವಸ್ತುಗಳಿಂದ ರಕ್ಷಿಸುವುದರೊಂದಿಗೆ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

ಮುಖದ ಹೊಳಪಿಗೆ ಆಲೂಗಡ್ಡೆಯನ್ನು ಹೀಗೂ ಬಳಸಬಹುದು...! ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 30, 2022 | 11:30 AM

ಅಡುಗೆ ಮನೆಯಲ್ಲಿ ಸುಲಭವಾಗಿ ಸಿಗುವ ಆಲೂಗಡ್ಡೆ ತ್ವಚೆಯ ಆರೈಕೆಯಲ್ಲಿಯೂ ಅತ್ಯುತ್ತಮವಾಗಿದೆ. ಬ್ಲೀಚಿಂಗ್ ಏಜೆಂಟ್ ಆಗಿ ಕಾರ್ಯನಿರ್ವಹಿಸುವ ಆಲೂಗಡ್ಡೆ, ಅನೇಕ ಪೋಷಕಾಂಶಗಳು ಮತ್ತು ನಿರೋಧಕಗಳನ್ನು ಹೊಂದಿರುತ್ತದೆ. ಇದು ಚರ್ಮವನ್ನು ಹಾನಿಕಾರಕ ವಸ್ತುಗಳಿಂದ ರಕ್ಷಿಸುವುದರೊಂದಿಗೆ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಆಲೂಗೆಡ್ಡೆಯನ್ನು ಇಂದು ಅನೇಕ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸಲಾಗುತ್ತಿದೆ. ಕೆಟ್ಟ ಹವಾಮಾನ, ಧೂಳಿನಿಂದ ತ್ವಚೆಯ ಮೇಲೆ ಕೊಳಕು ಶೇಖರಣೆಯಾಗಿ ಮಂದತೆ ಬರಬಹುದು. ಆಲೂಗಡ್ಡೆಯ ಗುಣಲಕ್ಷಣಗಳು ಸತ್ತ ಚರ್ಮದ ಕೋಶಗಳನ್ನು ಸುಲಭವಾಗಿ ತೆಗೆದುಹಾಕುತ್ತದೆ.

ಆಲೂಗಡ್ಡೆ ರಸ ಮತ್ತು ಮೊಸರು:

ನೀವು ಆಲೂಗಡ್ಡೆಯೊಂದಿಗೆ ಮೊಸರು ಬಳಸಿದರೆ, ಅದರಿಂದ ಡಬಲ್ ಪ್ರಯೋಜನಗಳನ್ನು ಪಡೆಯಬಹುದು. ಇವೆರಡರ ಈ ರೆಸಿಪಿ ತ್ವಚೆಯನ್ನು ಹೈಡ್ರೀಕರಿಸಿ ಹೆಚ್ಚುವರಿ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಒಂದು ಬಟ್ಟಲಿನಲ್ಲಿ ಸ್ವಲ್ಪ ಮೊಸರು ತೆಗೆದುಕೊಂಡು ಅದಕ್ಕೆ ಮೂರು ಚಮಚ ಆಲೂಗಡ್ಡೆ ರಸವನ್ನು ಸೇರಿಸಿ. ಒಂದು ಚಿಟಿಕೆ ಅರಿಶಿನವನ್ನು ಬೆರೆಸಿದ ನಂತರ, ಅದನ್ನು ಬ್ರಷ್‌ನಿಂದ ಚರ್ಮಕ್ಕೆ ಹಚ್ಚಿ ಮತ್ತು 15 ನಿಮಿಷಗಳ ನಂತರ ಮುಖವನ್ನು ತೊಳೆಯಿರಿ.

ಅಲೋವೆರಾ ಮತ್ತು ಆಲೂಗಡ್ಡೆ:

ತ್ವಚೆ ಅಥವಾ ಕೂದಲ ರಕ್ಷಣೆಗೆ ಅಲೋವೆರಾ ಜೆಲ್ ಯಾವಾಗಲೂ ಸರ್ವರೋಗ ನಿವಾರಕವಾಗಿ ಕೆಲಸ ಮಾಡುತ್ತದೆ. ಆಲೂಗಡ್ಡೆ ಪೇಸ್ಟ್ ಮಾಡಿ ಅದಕ್ಕೆ ಅಲೋವೆರಾ ಜೆಲ್ ಮಿಶ್ರಣ ಮಾಡಿ. ಈ ಪೇಸ್ಟ್​ನ್ನು ಮುಖಕ್ಕೆ ಹಚ್ಚಿ 15 ನಿಮಿಷಗಳ ಕಾಲ ಒಣಗಲು ಬಿಡಿ. ಈಗ ಸ್ವಲ್ಪ ಅಲೋವೆರಾ ಜೆಲ್​ನ್ನು ನಿಮ್ಮ ಕೈಯಲ್ಲಿ ತೆಗೆದುಕೊಂಡು ಮುಖಕ್ಕೆ ಮೃದುವಾಗಿ ಮಸಾಜ್ ಮಾಡಿ. ನಂತರ ಮುಖವನ್ನು ತೊಳೆದುಕೊಳ್ಳಿ ಮುಖದ ಬಣ್ಣವು ಸುಧಾರಿಸಿದೆ ಎಂದು ನೀವೇ ನೋಡಿಕೊಳ್ಳಿ.

ಅಕ್ಕಿ ಮತ್ತು ಆಲೂಗಡ್ಡೆ:

ಚರ್ಮದ ಆರೈಕೆಯಲ್ಲಿ ಅಕ್ಕಿಯನ್ನು ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಅಕ್ಕಿ ಮತ್ತು ಆಲೂಗೆಡ್ಡೆ ರಸವನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿದರೆ ಸಾಕು. ಇದಕ್ಕಾಗಿ, ಒಂದು ಪಾತ್ರೆಯಲ್ಲಿ ಅಕ್ಕಿ ಕುದಿಸಿ. ಅದು ತಣ್ಣಗಾದ ನಂತರ ಅದಕ್ಕೆ ಆಲೂಗೆಡ್ಡೆಯ ರಸವನ್ನು ಸೇರಿಸಿ ಹತ್ತಿಯ ಸಹಾಯದಿಂದ ಚರ್ಮಕ್ಕೆ ಹಚ್ಚಿ. ಈ ಪ್ಯಾಕ್​ ಬೇಗನೆ ಒಣಗುತ್ತದೆ, ಆದ್ದರಿಂದ ಇದನ್ನು ಮುಖಕ್ಕೆ ಮೂರು ಬಾರಿ ಅನ್ವಯಿಸಿ. ನಂತರ ಸಾಮಾನ್ಯ ನೀರಿನಿಂದ ಮುಖವನ್ನು ತೊಳೆಯಿರಿ.

(ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಊಹೆಗಳನ್ನು ಆಧರಿಸಿದೆ. TV9 ಕನ್ನಡ ಡಿಜಿಟಲ್​ಗೆ ಸಂಬಂಧಿಸಿರುವುದಿಲ್ಲ ತಜ್ಞರನ್ನು ಸಂಪರ್ಕಿಸಿ ನಂತರ ಇದನ್ನು ಅನುಸರಿಸಬಹುದು)

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು