AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Free Sunscreen Cream: ಈ ದೇಶ ತನ್ನ ಪ್ರಜೆಗಳಿಗೆ ಉಚಿತ ಸನ್‌ಸ್ಕ್ರೀನ್ ನೀಡುತ್ತಿದೆ; ಆ ದೇಶ ಯಾವುದು ಹಾಗೂ ಕಾರಣ ಏನು? ಇಲ್ಲಿದೆ ವಿವರ

ಇಲ್ಲೊಂದು ದೇಶ ತನ್ನ ಪ್ರಜೆಗಳಿಗೆ ಉಚಿತವಾಗಿ ಸನ್‌ಸ್ಕ್ರೀನ್ ನೀಡುತ್ತಿದೆ. ಅಷ್ಟಕ್ಕೂ ಆ ದೇಶ ಯಾವುದು? ಯಾಕೆ ಉಚಿತವಾಗಿ ಸನ್‌ಸ್ಕ್ರೀನ್ ನೀಡುತ್ತಿದೆ? ಎಂಬ ಎಲ್ಲಾ ಪ್ರಶ್ನೆಗೆ ಉತ್ತರ ಇಲ್ಲಿದೆ.

Free Sunscreen Cream: ಈ ದೇಶ ತನ್ನ ಪ್ರಜೆಗಳಿಗೆ ಉಚಿತ ಸನ್‌ಸ್ಕ್ರೀನ್ ನೀಡುತ್ತಿದೆ; ಆ ದೇಶ ಯಾವುದು ಹಾಗೂ ಕಾರಣ ಏನು? ಇಲ್ಲಿದೆ ವಿವರ
ಉಚಿತ ಸನ್‌ಸ್ಕ್ರೀನ್ Image Credit source: Allure
ಅಕ್ಷತಾ ವರ್ಕಾಡಿ
|

Updated on: Jun 18, 2023 | 10:40 AM

Share

ನೆದರ್‌ಲ್ಯಾಂಡ್: ಸಾಮಾನ್ಯವಾಗಿ ಯಾವುದೇ ದೇಶ ಆರ್ಥಿಕವಾಗಿ ಹಿಂದುಳಿದ್ದಿದ್ದರೆ, ಆಹಾರ, ವಸತಿ ಹಾಗೂ ಇನ್ನಿತರ ಸೌಲಭ್ಯವನ್ನು ಉಚಿತವಾಗಿ ನೀಡುವುದನ್ನು ನೀವು ಕೇಳಿರುತ್ತೀರಿ ಅಥವಾ ನೀವೇ ಅದರ ಫಲಾನುಭಾವಿಗಳಾಗಿರುತ್ತೀರಿ. ಆದರೆ ಇಲ್ಲೊಂದು ದೇಶ ತನ್ನ ನಾಗರಿಕರಿಗೆ ಉಚಿತವಾಗಿ ಸನ್‌ಸ್ಕ್ರೀನ್ ನೀಡುತ್ತಿದೆ. ಇದೀಗಾ ಈ ಸುದ್ದಿ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಅಷ್ಟಕ್ಕೂ ಅಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಈ ಹೊಸ ಕಾನೂನನ್ನು ಜಾರಿಗೆ ತಂದಿದೆ. ಏನಿದು ಇಲ್ಲಿ ತಿಳಿದುಕೊಳ್ಳಿ. ದೇಶದಲ್ಲಿ ಹೆಚ್ಚುತ್ತಿರುವ ಚರ್ಮದ ಕ್ಯಾನ್ಸರ್ ನಿಭಾಯಿಸುವ ಪ್ರಯತ್ನದಲ್ಲಿ ನೆದರ್ಲ್ಯಾಂಡ್ಸ್ ತನ್ನ ನಾಗರಿಕರಿಗೆ ಉಚಿತವಾಗಿ ಸನ್ ಕ್ರೀಮ್ ನೀಡುತ್ತಿದೆ. ಇದಕ್ಕಾಗಿ ಸಾರ್ವಜನಿಕ ಸ್ಥಳಗಳು ಸೇರಿದಂತೆ ಶಾಲೆ, ವಿಶ್ವವಿದ್ಯಾನಿಲಯಗಳಲ್ಲಿ ಸನ್‌ಸ್ಕ್ರೀನ್ ಕ್ರೀಮ್ ವಿತರಕಗಳನ್ನು ನೇಮಿಸಲಾಗಿದೆ.

ಕಳೆದ ಎರಡು ದಶಕಗಳಲ್ಲಿ ಯುರೋಪಿನಾದ್ಯಂತ ಚರ್ಮದ ಕ್ಯಾನ್ಸರ್ ಪ್ರಮಾಣ ಹೆಚ್ಚುತ್ತಿದೆ. ನೆರೆಯ ಜರ್ಮನಿಯಲ್ಲಿ, 2001 ಮತ್ತು 2021 ರ ನಡುವೆ ಚರ್ಮದ ಕ್ಯಾನ್ಸರ್‌ನಿಂದ ಸಾವನ್ನಪ್ಪಿದವರ ಸಂಖ್ಯೆಯು ಶೇಕಡಾ 55 ರಷ್ಟು ಏರಿಕೆಯಾಗಿದೆ ಎಂದು ಫೆಡರಲ್ ಆಫೀಸ್ ಆಫ್ ಸ್ಟ್ಯಾಟಿಸ್ಟಿಕ್ಸ್ ತಿಳಿಸಿದೆ. ಹೆಚ್ಚುತ್ತಿರುವ ಚರ್ಮದ ಕಾಯಿಲೆಗಳಿಗೆ ಪ್ರಮುಖ ಕಾರಣ ಅತಿಯಾಗಿ ಸೂರ್ಯನ ಕಿರಣಕ್ಕೆ ಒಡ್ಡಿಕೊಳ್ಳುವುದು. ಆದ್ದರಿಂದ ಸೂರ್ಯನ ಕಿರಣದಿಂದ ಜನರಿಗೆ ರಕ್ಷಣೆ ನೀಡಲು ದೇಶದ ಮೂಲೆ ಮೂಲೆಗೂ ಸನ್‌ಸ್ಕ್ರೀನ್ ಕ್ರೀಮ್ ಉಚಿತವಾಗಿ ತಲುಪಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: ಗೊತ್ತಿಲ್ಲದೇ ಈ ಶಬ್ದಗಳಿರುವ ಟಿ ಶರ್ಟ್​ ಧರಿಸಿ ಆಧಾರ್​ ಕಾರ್ಡ್​ ಮಾಡಿಸಿದ ಯುವತಿ, ಫೋಟೊ ವೈರಲ್

ಸನ್‌ಸ್ಕ್ರೀಮ್ ಚರ್ಮದ ಕ್ಯಾನ್ಸರ್​​​ ವಿರುದ್ಧ ಅತ್ಯಂತ ಪರಿಣಾಮಕಾರಿ ರಕ್ಷಣೆ ಎಂದು ಸಾಬೀತಾಗಿದೆ. ಚಿಕ್ಕಂದಿನಿಂದಲೇ ಹಲ್ಲುಜ್ಜುವ ಹಾಗೆ ಸನ್‌ಸ್ಕ್ರೀನ್‌ ಹಚ್ಚುವ ಅಭ್ಯಾಸವನ್ನು ರೂಢಿಸಿಕೊಳ್ಳುವ ಮಹತ್ವವನ್ನು ತಜ್ಞರು ಒತ್ತಿ ಹೇಳಿದ್ದಾರೆ. ದೇಶದಲ್ಲಿ ಚರ್ಮದ ಕ್ಯಾನ್ಸರ್‌ನ ದಾಖಲೆಯ ಮಟ್ಟವನ್ನು ಎದುರಿಸಲು ರಾಷ್ಟ್ರವ್ಯಾಪಿ ಉಪಕ್ರಮದ ಭಾಗವಾಗಿ ನೆದರ್ಲೆಂಡ್ಸ್‌ನ ನಾಗರಿಕರು ಈ ಬೇಸಿಗೆಯಲ್ಲಿ ಉಚಿತ ಸೂರ್ಯನ ರಕ್ಷಣೆಯನ್ನು ಪಡೆಯುತ್ತಾರೆ ಎಂದು ಗಾರ್ಡಿಯನ್ ವರದಿ ಮಾಡಿದೆ.

ಮತ್ತಷ್ಟು ವೈರಲ್​​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ