AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Free Sunscreen Cream: ಈ ದೇಶ ತನ್ನ ಪ್ರಜೆಗಳಿಗೆ ಉಚಿತ ಸನ್‌ಸ್ಕ್ರೀನ್ ನೀಡುತ್ತಿದೆ; ಆ ದೇಶ ಯಾವುದು ಹಾಗೂ ಕಾರಣ ಏನು? ಇಲ್ಲಿದೆ ವಿವರ

ಇಲ್ಲೊಂದು ದೇಶ ತನ್ನ ಪ್ರಜೆಗಳಿಗೆ ಉಚಿತವಾಗಿ ಸನ್‌ಸ್ಕ್ರೀನ್ ನೀಡುತ್ತಿದೆ. ಅಷ್ಟಕ್ಕೂ ಆ ದೇಶ ಯಾವುದು? ಯಾಕೆ ಉಚಿತವಾಗಿ ಸನ್‌ಸ್ಕ್ರೀನ್ ನೀಡುತ್ತಿದೆ? ಎಂಬ ಎಲ್ಲಾ ಪ್ರಶ್ನೆಗೆ ಉತ್ತರ ಇಲ್ಲಿದೆ.

Free Sunscreen Cream: ಈ ದೇಶ ತನ್ನ ಪ್ರಜೆಗಳಿಗೆ ಉಚಿತ ಸನ್‌ಸ್ಕ್ರೀನ್ ನೀಡುತ್ತಿದೆ; ಆ ದೇಶ ಯಾವುದು ಹಾಗೂ ಕಾರಣ ಏನು? ಇಲ್ಲಿದೆ ವಿವರ
ಉಚಿತ ಸನ್‌ಸ್ಕ್ರೀನ್ Image Credit source: Allure
ಅಕ್ಷತಾ ವರ್ಕಾಡಿ
|

Updated on: Jun 18, 2023 | 10:40 AM

Share

ನೆದರ್‌ಲ್ಯಾಂಡ್: ಸಾಮಾನ್ಯವಾಗಿ ಯಾವುದೇ ದೇಶ ಆರ್ಥಿಕವಾಗಿ ಹಿಂದುಳಿದ್ದಿದ್ದರೆ, ಆಹಾರ, ವಸತಿ ಹಾಗೂ ಇನ್ನಿತರ ಸೌಲಭ್ಯವನ್ನು ಉಚಿತವಾಗಿ ನೀಡುವುದನ್ನು ನೀವು ಕೇಳಿರುತ್ತೀರಿ ಅಥವಾ ನೀವೇ ಅದರ ಫಲಾನುಭಾವಿಗಳಾಗಿರುತ್ತೀರಿ. ಆದರೆ ಇಲ್ಲೊಂದು ದೇಶ ತನ್ನ ನಾಗರಿಕರಿಗೆ ಉಚಿತವಾಗಿ ಸನ್‌ಸ್ಕ್ರೀನ್ ನೀಡುತ್ತಿದೆ. ಇದೀಗಾ ಈ ಸುದ್ದಿ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಅಷ್ಟಕ್ಕೂ ಅಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಈ ಹೊಸ ಕಾನೂನನ್ನು ಜಾರಿಗೆ ತಂದಿದೆ. ಏನಿದು ಇಲ್ಲಿ ತಿಳಿದುಕೊಳ್ಳಿ. ದೇಶದಲ್ಲಿ ಹೆಚ್ಚುತ್ತಿರುವ ಚರ್ಮದ ಕ್ಯಾನ್ಸರ್ ನಿಭಾಯಿಸುವ ಪ್ರಯತ್ನದಲ್ಲಿ ನೆದರ್ಲ್ಯಾಂಡ್ಸ್ ತನ್ನ ನಾಗರಿಕರಿಗೆ ಉಚಿತವಾಗಿ ಸನ್ ಕ್ರೀಮ್ ನೀಡುತ್ತಿದೆ. ಇದಕ್ಕಾಗಿ ಸಾರ್ವಜನಿಕ ಸ್ಥಳಗಳು ಸೇರಿದಂತೆ ಶಾಲೆ, ವಿಶ್ವವಿದ್ಯಾನಿಲಯಗಳಲ್ಲಿ ಸನ್‌ಸ್ಕ್ರೀನ್ ಕ್ರೀಮ್ ವಿತರಕಗಳನ್ನು ನೇಮಿಸಲಾಗಿದೆ.

ಕಳೆದ ಎರಡು ದಶಕಗಳಲ್ಲಿ ಯುರೋಪಿನಾದ್ಯಂತ ಚರ್ಮದ ಕ್ಯಾನ್ಸರ್ ಪ್ರಮಾಣ ಹೆಚ್ಚುತ್ತಿದೆ. ನೆರೆಯ ಜರ್ಮನಿಯಲ್ಲಿ, 2001 ಮತ್ತು 2021 ರ ನಡುವೆ ಚರ್ಮದ ಕ್ಯಾನ್ಸರ್‌ನಿಂದ ಸಾವನ್ನಪ್ಪಿದವರ ಸಂಖ್ಯೆಯು ಶೇಕಡಾ 55 ರಷ್ಟು ಏರಿಕೆಯಾಗಿದೆ ಎಂದು ಫೆಡರಲ್ ಆಫೀಸ್ ಆಫ್ ಸ್ಟ್ಯಾಟಿಸ್ಟಿಕ್ಸ್ ತಿಳಿಸಿದೆ. ಹೆಚ್ಚುತ್ತಿರುವ ಚರ್ಮದ ಕಾಯಿಲೆಗಳಿಗೆ ಪ್ರಮುಖ ಕಾರಣ ಅತಿಯಾಗಿ ಸೂರ್ಯನ ಕಿರಣಕ್ಕೆ ಒಡ್ಡಿಕೊಳ್ಳುವುದು. ಆದ್ದರಿಂದ ಸೂರ್ಯನ ಕಿರಣದಿಂದ ಜನರಿಗೆ ರಕ್ಷಣೆ ನೀಡಲು ದೇಶದ ಮೂಲೆ ಮೂಲೆಗೂ ಸನ್‌ಸ್ಕ್ರೀನ್ ಕ್ರೀಮ್ ಉಚಿತವಾಗಿ ತಲುಪಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: ಗೊತ್ತಿಲ್ಲದೇ ಈ ಶಬ್ದಗಳಿರುವ ಟಿ ಶರ್ಟ್​ ಧರಿಸಿ ಆಧಾರ್​ ಕಾರ್ಡ್​ ಮಾಡಿಸಿದ ಯುವತಿ, ಫೋಟೊ ವೈರಲ್

ಸನ್‌ಸ್ಕ್ರೀಮ್ ಚರ್ಮದ ಕ್ಯಾನ್ಸರ್​​​ ವಿರುದ್ಧ ಅತ್ಯಂತ ಪರಿಣಾಮಕಾರಿ ರಕ್ಷಣೆ ಎಂದು ಸಾಬೀತಾಗಿದೆ. ಚಿಕ್ಕಂದಿನಿಂದಲೇ ಹಲ್ಲುಜ್ಜುವ ಹಾಗೆ ಸನ್‌ಸ್ಕ್ರೀನ್‌ ಹಚ್ಚುವ ಅಭ್ಯಾಸವನ್ನು ರೂಢಿಸಿಕೊಳ್ಳುವ ಮಹತ್ವವನ್ನು ತಜ್ಞರು ಒತ್ತಿ ಹೇಳಿದ್ದಾರೆ. ದೇಶದಲ್ಲಿ ಚರ್ಮದ ಕ್ಯಾನ್ಸರ್‌ನ ದಾಖಲೆಯ ಮಟ್ಟವನ್ನು ಎದುರಿಸಲು ರಾಷ್ಟ್ರವ್ಯಾಪಿ ಉಪಕ್ರಮದ ಭಾಗವಾಗಿ ನೆದರ್ಲೆಂಡ್ಸ್‌ನ ನಾಗರಿಕರು ಈ ಬೇಸಿಗೆಯಲ್ಲಿ ಉಚಿತ ಸೂರ್ಯನ ರಕ್ಷಣೆಯನ್ನು ಪಡೆಯುತ್ತಾರೆ ಎಂದು ಗಾರ್ಡಿಯನ್ ವರದಿ ಮಾಡಿದೆ.

ಮತ್ತಷ್ಟು ವೈರಲ್​​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ