
ಭಾರತದ ಹೆಮ್ಮೆಯ ಪುತ್ರ ರವೀಂದ್ರನಾಥ ಟ್ಯಾಗೋರ್ ಅವರು ಏಷ್ಯಾದ ಮೊದಲ ನೊಬೆಲ್ ಪ್ರಶಸ್ತಿ ಪುರಸ್ಕೃತರು. ಶ್ರೇಷ್ಠ ಕವಿ ಮಾತ್ರವಲ್ಲದೆ ಮಾನವತವಾದಿಯಾಗಿದ್ದವರು. ತಮ್ಮ ಜೀವನದಲ್ಲಿ ಮಾನವೀಯತೆಗೆ ಮೊದಲ ಆದ್ಯತೆ ನೀಡಿದವರು. ಭಾರತದ ರಾಷ್ಟ್ರಗೀತೆಯ ಸೃಷ್ಟಿಕರ್ತರಾಗಿ, 2000ಕ್ಕೂ ಹೆಚ್ಚು ಗೀತೆಗಳನ್ನು ಹಾಗೂ ಹಲವಾರು ಕೃತಿಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡದಾದ ಕೊಡುಗೆಗಳನ್ನು ನೀಡಿದ್ದಾರೆ. ರವೀಂದ್ರನಾಥ ಠಾಗೋರ್ ಗಂಭೀರ ಕಾಯಿಲೆಯಿಂದ ತಮ್ಮ ಜೀವನದ ಕೊನೆಯ ನಾಲ್ಕು ವರ್ಷಗಳನ್ನು ಬಹಳ ನೋವಿನಿಂದಲೇ ಕೂಡಿತ್ತು. ಆಗಸ್ಟ್ 7 1941 ರಂದು ಕೊಲ್ಕತ್ತಾದಲ್ಲಿ 80ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು. ಇಂದು ಈ ಮಹಾನ್ ಕವಿಯ ಪುಣ್ಯತಿಥಿಯಾಗಿದ್ದು, ಅವರ ಸ್ಫೂರ್ತಿದಾಯಕ ಉಲ್ಲೇಖಗಳು ಹಾಗೂ ಸಂದೇಶಗಳು ನೀವಿಲ್ಲಿ ಓದಿ ಜೀವನಕ್ಕೆ ಸ್ಫೂರ್ತಿಯನ್ನು ಪಡೆಯಬಹುದು.
ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ