
ರಕ್ಷಾ ಬಂಧನವು (Raksha Bandhan) ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದು. ಅಣ್ಣ ತಂಗಿಯರ ಸಂಬಂಧವನ್ನು ಗಟ್ಟಿಗೊಳಿಸುವ ಈ ಪವಿತ್ರ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯ ದಿನದಂದು ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತದೆ. ಈ ಬಾರಿ ಆಗಸ್ಟ್ 09 ರಂದು ರಕ್ಷಾ ಬಂಧನ ಅಥವಾ ನೂಲ ಹುಣ್ಣಿಮೆ ಹಬ್ಬವನ್ನು ಆಚರಿಸುತ್ತಾರೆ. ಈ ವಿಶೇಷ ದಿನದಂದು ಸಹೋದರಿಯರು ತಮ್ಮ ಸಹೋದರನ ಕೈಗೆ ರಕ್ಷಾ ದಾರವನ್ನು ಕಟ್ಟುತ್ತಾರೆ. ಇದು ಇಬ್ಬರ ನಡುವಿನ ಪ್ರೀತಿ, ಬಾಂಧವ್ಯವನ್ನು ಗಟ್ಟಿಗೊಳಿಸುವ ದಾರವಾಗಿದೆ. ಹೀಗಾಗಿ ಕೈಗೆ ಕಟ್ಟಿದ ದಾರವನ್ನು (Rakhi) ಎಷ್ಟು ದಿನಗಳ ಬಳಿಕ ತೆಗೆಯಬೇಕು?, ಈ ರಾಖಿಯನ್ನು ತೆಗೆದು ಏನು ಮಾಡಬೇಕು? ಈ ಕುರಿತಾದ ಮಾಹಿತಿ ಇಲ್ಲಿದೆ.
ಕೈಗೆ ಕಟ್ಟಿದ ರಾಖಿಯನ್ನು ಯಾವಾಗ ತೆಗೆಯುವುದು ಸೂಕ್ತ
ಪ್ರೀತಿಯಿಂದ ಸಹೋದರಿಯರು ಕಟ್ಟಿದ ರಾಖಿಯನ್ನು ಕೆಲ ಸಹೋದರರು ಹಾಗೆಯೇ ಕೈಯಲ್ಲೇ ಇಟ್ಟುಕೊಳ್ಳುತ್ತಾರೆ. ಇನ್ನು ಕೆಲವರು ಮಾರನೇ ದಿನವೇ ರಕ್ಷಾ ದಾರವನ್ನು ತೆಗೆದು ಬಿಡುತ್ತಾರೆ. ಆದರೆ ರಾಖಿ ಕಟ್ಟಿದ ನಂತರ ಅದನ್ನು ಯಾವಾಗ ತೆಗೆಯಬೇಕು ಎಂಬುದಕ್ಕೆ ಯಾವುದೇ ಕಟ್ಟುನಿಟ್ಟಾದ ನಿಯಮಗಳು ಇಲ್ಲ. ಹೀಗಾಗಿ ಕೈಗೆ ಕಟ್ಟಿದ ರಾಖಿಯನ್ನು ಯಾವಾಗ ಬೇಕಾದರೂ ತೆಗೆಯಬಹುದು.
ಇದನ್ನೂ ಓದಿ: Raksha Bandhan 2025: ರಾಖಿ ಖರೀದಿಸುವ ಬದಲು ನೀವೇ ಮನೆಯಲ್ಲಿ ಹೀಗೆ ತಯಾರಿಸಿ
ಕೈಯಿಂದ ತೆಗೆದ ರಾಖಿಯನ್ನು ಏನು ಮಾಡಬೇಕು?
ರಾಖಿಯನ್ನು ತೆಗೆದ ಬಳಿಕ ಎಲ್ಲೆಂದರಲ್ಲಿ ಎಸೆಯುವುದು ಸರಿಯಲ್ಲ. ಸಹೋದರಿಯೂ ಪ್ರೀತಿಯಿಂದ ಕಟ್ಟಿದ ರಕ್ಷಾ ದಾರವನ್ನು ನೀವು ನೆನಪಿಗಾಗಿ ಇಟ್ಟುಕೊಳ್ಳಬಹುದು. ಇಲ್ಲದಿದ್ದರೆ ಹರಿಯುವ ನೀರಿನಲ್ಲಿ ಬಿಡಬಹುದು ಅಥವಾ ಮರ ಕೆಳಗೆ ಇಡುವುದು ಸೂಕ್ತ.
ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ