AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami Special Recipe : ರಾಮನಿಗಾಗಿ ಪಾನಕ, ದೂದ್ ಪೇಡ ರೂಪದಲ್ಲಿ ನೈವೇದ್ಯ ಅರ್ಪಿಸಿ

ಭಾರತದಾದ್ಯಂತ ಶ್ರೀರಾಮ ಹುಟ್ಟಿದ ದಿನದಂದು ರಾಮನವಮಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದು ಹಿಂದೂಗಳ ಪ್ರಮುಖ ಹಬ್ಬವಾಗಿದ್ದು, ಈ ಬಾರಿ ಏಪ್ರಿಲ್ 17 ರಂದು ರಾಮನವಮಿಯನ್ನು ಆಚರಿಸಲಾಗುತ್ತಿದೆ. ಹಬ್ಬದ ದಿನ ಪಾನಕ ಹಾಗೂ ದೂದ್ ಪೇಡ ಮಾಡಿ ರಾಮನಿಗೆ ನೈವೇದ್ಯವಾಗಿ ಅರ್ಪಿಸಿ ದೇವರ ಕೃಪೆಗೆ ಪಾತ್ರರಾಗಬಹುದು.

Ram Navami Special Recipe : ರಾಮನಿಗಾಗಿ ಪಾನಕ, ದೂದ್ ಪೇಡ ರೂಪದಲ್ಲಿ ನೈವೇದ್ಯ ಅರ್ಪಿಸಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Apr 17, 2024 | 9:26 AM

Share

ಶ್ರೀರಾಮನ ಹುಟ್ಟಿದ ಹಬ್ಬದಂದು ಮನೆಯಲ್ಲಿ ವಿವಿಧ ಖಾದ್ಯಗಳನ್ನು ತಯಾರಿಸಿ ನೈವೇದ್ಯವಾಗಿ ಇಡಲಾಗುತ್ತದೆ. ಆದರೆ ರಾಮನವಮಿ ಎಂದ ಕೂಡಲೇ ನೆನಪಿಗೆ ಬರುವುದೇ ಪಾನಕ. ಅದಲ್ಲದೇ ಹಬ್ಬದ ದಿನ ಎಲ್ಲರೂ ಸ್ವೀಟ್ ಗಳನ್ನು ಮಾಡಿ ಸವಿಯುತ್ತಾರೆ. ಹಿಂದೂಗಳ ಪ್ರಮುಖ ಹಬ್ಬವಾದ ’ಶ್ರೀ ರಾಮನವಮಿಗೆ ಪಾನಕ ಹಾಗೂ ದೂದ್ ಪೇಡ ಮಾಡಿ ನೈವೇದ್ಯವನ್ನಿಟ್ಟು, ಹಬ್ಬದ ಸಂಭ್ರಮವನ್ನು ಸವಿಯಬಹುದು.

ಪಾನಕ ಮಾಡಲು ಬೇಕಾಗುವ ಸಾಮಗ್ರಿಗಳು:

* ಬೆಲ್ಲ

* ಒಂದೆರಡು ಒಣಶುಂಠಿ

* ಅರ್ಧ ಚಮಚದಷ್ಟು ಕಾಳು ಮೆಣಸು

* ನಿಂಬೆ

* ಉಪ್ಪು

* ಏಲಕ್ಕಿ ಪುಡಿ

* ನೀರು

ಪಾನಕ ಮಾಡುವ ವಿಧಾನ:

* ಮೊದಲಿಗೆ ಬೆಲ್ಲ ಹಾಗೂ ಒಣಶುಂಠಿಯನ್ನು ಚೆನ್ನಾಗಿ ಕುಟ್ಟಿ ಪುಡಿ ಮಾಡಿಟ್ಟುಕೊಳ್ಳಬೇಕು.

* ಪಾನಕಕ್ಕೆ ಬೇಕಾಗುವ ಈ ಕಾಳು ಮೆಣಸನ್ನು ಸ್ವಲ್ಪ ಸ್ವಲ್ಪ ತರಿಯಾಗಿ ಪುಡಿ ಮಾಡಿಟ್ಟುಕೊಳ್ಳಬೇಕು.

* ಒಂದು ಪಾತ್ರೆಗೆ ನೀರು ಹಾಕಿ ನಿಂಬೆಯನ್ನು ಹಿಂಡಿಕೊಳ್ಳಿ. ಅದಕ್ಕೆ ಪುಡಿ ಮಾಡಿಟ್ಟ ಬೆಲ್ಲ, ಕಾಳು ಮೆಣಸು ಹಾಗೂ ಒಣಶುಂಠಿಯನ್ನು ಬೆರೆಸಬೇಕು.

* ಬೆಲ್ಲ ಕರಗಿದ ನಂತರ ಏಲಕ್ಕಿ ಪುಡಿ ಮತ್ತು ಉಪ್ಪು ಹಾಕಿ ಬೆರೆಸಿದರೆ ಬೆಲ್ಲದ ಪಾನಕ ಸವಿಯಲು ಸಿದ್ಧವಾಗುತ್ತದೆ.

ದೂದ್ ಪೇಡ ಮಾಡಲು ಬೇಕಾಗುವ ಸಾಮಗ್ರಿಗಳು:

*ಹಾಲಿನಪುಡಿ

* ಕಂಡೆನ್ಸ್ದ್ ಹಾಲು

* ಬೆಣ್ಣೆ

* ಏಲಕ್ಕಿ ಪುಡಿ

ಇದನ್ನೂ ಓದಿ: ರಾಮನವಮಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಹೀಗೆ ಶುಭಕೋರಿ

ಮಾಡುವ ವಿಧಾನ:

* ಮೊದಲು ಬೆಣ್ಣೆಯನ್ನು ಕರಗಿಸಿ,ಅದಕ್ಕೆ ಕಂಡೆನ್ಸ್ಡ್ ಮಿಲ್ಕ್ ,ಹಾಲಿನ ಪುಡಿಯನ್ನು ಹಾಕಿ, ಗಂಟು ಆಗದಂತೆ ಚೆನ್ನಾಗಿ ಬೆರೆಸಿಕೊಳ್ಳಬೇಕು.

* ಆಗಾಗ ಕೈಯಾಡಿಸುತ್ತ ಇರಬೇಕು. ಈ ಮಿಶ್ರಣವು ಗಟ್ಟಿಯಾದ ತಕ್ಷಣ ಅದಕ್ಕೆ ಏಲಕ್ಕಿ ಪುಡಿಯನ್ನು ಹಾಕಿ ಕಲಸಿಕೊಳ್ಳಿ.

* ತಳ ಬಿಡುತ್ತಿದ್ದಂತೆ ಬೇಕಾದ ಆಕಾರದಲ್ಲಿ ಪೇಡಗಳನ್ನು ತಯಾರಿಸಿದರೆ ರುಚಿ ರುಚಿಕರವಾದ ದೂದ್ ಪೇಡ ಸವಿಯಲು ಸಿದ್ಧ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:56 am, Tue, 16 April 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ