AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami Special Recipe : ರಾಮನಿಗಾಗಿ ಪಾನಕ, ದೂದ್ ಪೇಡ ರೂಪದಲ್ಲಿ ನೈವೇದ್ಯ ಅರ್ಪಿಸಿ

ಭಾರತದಾದ್ಯಂತ ಶ್ರೀರಾಮ ಹುಟ್ಟಿದ ದಿನದಂದು ರಾಮನವಮಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದು ಹಿಂದೂಗಳ ಪ್ರಮುಖ ಹಬ್ಬವಾಗಿದ್ದು, ಈ ಬಾರಿ ಏಪ್ರಿಲ್ 17 ರಂದು ರಾಮನವಮಿಯನ್ನು ಆಚರಿಸಲಾಗುತ್ತಿದೆ. ಹಬ್ಬದ ದಿನ ಪಾನಕ ಹಾಗೂ ದೂದ್ ಪೇಡ ಮಾಡಿ ರಾಮನಿಗೆ ನೈವೇದ್ಯವಾಗಿ ಅರ್ಪಿಸಿ ದೇವರ ಕೃಪೆಗೆ ಪಾತ್ರರಾಗಬಹುದು.

Ram Navami Special Recipe : ರಾಮನಿಗಾಗಿ ಪಾನಕ, ದೂದ್ ಪೇಡ ರೂಪದಲ್ಲಿ ನೈವೇದ್ಯ ಅರ್ಪಿಸಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Apr 17, 2024 | 9:26 AM

Share

ಶ್ರೀರಾಮನ ಹುಟ್ಟಿದ ಹಬ್ಬದಂದು ಮನೆಯಲ್ಲಿ ವಿವಿಧ ಖಾದ್ಯಗಳನ್ನು ತಯಾರಿಸಿ ನೈವೇದ್ಯವಾಗಿ ಇಡಲಾಗುತ್ತದೆ. ಆದರೆ ರಾಮನವಮಿ ಎಂದ ಕೂಡಲೇ ನೆನಪಿಗೆ ಬರುವುದೇ ಪಾನಕ. ಅದಲ್ಲದೇ ಹಬ್ಬದ ದಿನ ಎಲ್ಲರೂ ಸ್ವೀಟ್ ಗಳನ್ನು ಮಾಡಿ ಸವಿಯುತ್ತಾರೆ. ಹಿಂದೂಗಳ ಪ್ರಮುಖ ಹಬ್ಬವಾದ ’ಶ್ರೀ ರಾಮನವಮಿಗೆ ಪಾನಕ ಹಾಗೂ ದೂದ್ ಪೇಡ ಮಾಡಿ ನೈವೇದ್ಯವನ್ನಿಟ್ಟು, ಹಬ್ಬದ ಸಂಭ್ರಮವನ್ನು ಸವಿಯಬಹುದು.

ಪಾನಕ ಮಾಡಲು ಬೇಕಾಗುವ ಸಾಮಗ್ರಿಗಳು:

* ಬೆಲ್ಲ

* ಒಂದೆರಡು ಒಣಶುಂಠಿ

* ಅರ್ಧ ಚಮಚದಷ್ಟು ಕಾಳು ಮೆಣಸು

* ನಿಂಬೆ

* ಉಪ್ಪು

* ಏಲಕ್ಕಿ ಪುಡಿ

* ನೀರು

ಪಾನಕ ಮಾಡುವ ವಿಧಾನ:

* ಮೊದಲಿಗೆ ಬೆಲ್ಲ ಹಾಗೂ ಒಣಶುಂಠಿಯನ್ನು ಚೆನ್ನಾಗಿ ಕುಟ್ಟಿ ಪುಡಿ ಮಾಡಿಟ್ಟುಕೊಳ್ಳಬೇಕು.

* ಪಾನಕಕ್ಕೆ ಬೇಕಾಗುವ ಈ ಕಾಳು ಮೆಣಸನ್ನು ಸ್ವಲ್ಪ ಸ್ವಲ್ಪ ತರಿಯಾಗಿ ಪುಡಿ ಮಾಡಿಟ್ಟುಕೊಳ್ಳಬೇಕು.

* ಒಂದು ಪಾತ್ರೆಗೆ ನೀರು ಹಾಕಿ ನಿಂಬೆಯನ್ನು ಹಿಂಡಿಕೊಳ್ಳಿ. ಅದಕ್ಕೆ ಪುಡಿ ಮಾಡಿಟ್ಟ ಬೆಲ್ಲ, ಕಾಳು ಮೆಣಸು ಹಾಗೂ ಒಣಶುಂಠಿಯನ್ನು ಬೆರೆಸಬೇಕು.

* ಬೆಲ್ಲ ಕರಗಿದ ನಂತರ ಏಲಕ್ಕಿ ಪುಡಿ ಮತ್ತು ಉಪ್ಪು ಹಾಕಿ ಬೆರೆಸಿದರೆ ಬೆಲ್ಲದ ಪಾನಕ ಸವಿಯಲು ಸಿದ್ಧವಾಗುತ್ತದೆ.

ದೂದ್ ಪೇಡ ಮಾಡಲು ಬೇಕಾಗುವ ಸಾಮಗ್ರಿಗಳು:

*ಹಾಲಿನಪುಡಿ

* ಕಂಡೆನ್ಸ್ದ್ ಹಾಲು

* ಬೆಣ್ಣೆ

* ಏಲಕ್ಕಿ ಪುಡಿ

ಇದನ್ನೂ ಓದಿ: ರಾಮನವಮಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಹೀಗೆ ಶುಭಕೋರಿ

ಮಾಡುವ ವಿಧಾನ:

* ಮೊದಲು ಬೆಣ್ಣೆಯನ್ನು ಕರಗಿಸಿ,ಅದಕ್ಕೆ ಕಂಡೆನ್ಸ್ಡ್ ಮಿಲ್ಕ್ ,ಹಾಲಿನ ಪುಡಿಯನ್ನು ಹಾಕಿ, ಗಂಟು ಆಗದಂತೆ ಚೆನ್ನಾಗಿ ಬೆರೆಸಿಕೊಳ್ಳಬೇಕು.

* ಆಗಾಗ ಕೈಯಾಡಿಸುತ್ತ ಇರಬೇಕು. ಈ ಮಿಶ್ರಣವು ಗಟ್ಟಿಯಾದ ತಕ್ಷಣ ಅದಕ್ಕೆ ಏಲಕ್ಕಿ ಪುಡಿಯನ್ನು ಹಾಕಿ ಕಲಸಿಕೊಳ್ಳಿ.

* ತಳ ಬಿಡುತ್ತಿದ್ದಂತೆ ಬೇಕಾದ ಆಕಾರದಲ್ಲಿ ಪೇಡಗಳನ್ನು ತಯಾರಿಸಿದರೆ ರುಚಿ ರುಚಿಕರವಾದ ದೂದ್ ಪೇಡ ಸವಿಯಲು ಸಿದ್ಧ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:56 am, Tue, 16 April 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ