AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami Special Recipe : ರಾಮನಿಗಾಗಿ ಪಾನಕ, ದೂದ್ ಪೇಡ ರೂಪದಲ್ಲಿ ನೈವೇದ್ಯ ಅರ್ಪಿಸಿ

ಭಾರತದಾದ್ಯಂತ ಶ್ರೀರಾಮ ಹುಟ್ಟಿದ ದಿನದಂದು ರಾಮನವಮಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದು ಹಿಂದೂಗಳ ಪ್ರಮುಖ ಹಬ್ಬವಾಗಿದ್ದು, ಈ ಬಾರಿ ಏಪ್ರಿಲ್ 17 ರಂದು ರಾಮನವಮಿಯನ್ನು ಆಚರಿಸಲಾಗುತ್ತಿದೆ. ಹಬ್ಬದ ದಿನ ಪಾನಕ ಹಾಗೂ ದೂದ್ ಪೇಡ ಮಾಡಿ ರಾಮನಿಗೆ ನೈವೇದ್ಯವಾಗಿ ಅರ್ಪಿಸಿ ದೇವರ ಕೃಪೆಗೆ ಪಾತ್ರರಾಗಬಹುದು.

Ram Navami Special Recipe : ರಾಮನಿಗಾಗಿ ಪಾನಕ, ದೂದ್ ಪೇಡ ರೂಪದಲ್ಲಿ ನೈವೇದ್ಯ ಅರ್ಪಿಸಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Apr 17, 2024 | 9:26 AM

Share

ಶ್ರೀರಾಮನ ಹುಟ್ಟಿದ ಹಬ್ಬದಂದು ಮನೆಯಲ್ಲಿ ವಿವಿಧ ಖಾದ್ಯಗಳನ್ನು ತಯಾರಿಸಿ ನೈವೇದ್ಯವಾಗಿ ಇಡಲಾಗುತ್ತದೆ. ಆದರೆ ರಾಮನವಮಿ ಎಂದ ಕೂಡಲೇ ನೆನಪಿಗೆ ಬರುವುದೇ ಪಾನಕ. ಅದಲ್ಲದೇ ಹಬ್ಬದ ದಿನ ಎಲ್ಲರೂ ಸ್ವೀಟ್ ಗಳನ್ನು ಮಾಡಿ ಸವಿಯುತ್ತಾರೆ. ಹಿಂದೂಗಳ ಪ್ರಮುಖ ಹಬ್ಬವಾದ ’ಶ್ರೀ ರಾಮನವಮಿಗೆ ಪಾನಕ ಹಾಗೂ ದೂದ್ ಪೇಡ ಮಾಡಿ ನೈವೇದ್ಯವನ್ನಿಟ್ಟು, ಹಬ್ಬದ ಸಂಭ್ರಮವನ್ನು ಸವಿಯಬಹುದು.

ಪಾನಕ ಮಾಡಲು ಬೇಕಾಗುವ ಸಾಮಗ್ರಿಗಳು:

* ಬೆಲ್ಲ

* ಒಂದೆರಡು ಒಣಶುಂಠಿ

* ಅರ್ಧ ಚಮಚದಷ್ಟು ಕಾಳು ಮೆಣಸು

* ನಿಂಬೆ

* ಉಪ್ಪು

* ಏಲಕ್ಕಿ ಪುಡಿ

* ನೀರು

ಪಾನಕ ಮಾಡುವ ವಿಧಾನ:

* ಮೊದಲಿಗೆ ಬೆಲ್ಲ ಹಾಗೂ ಒಣಶುಂಠಿಯನ್ನು ಚೆನ್ನಾಗಿ ಕುಟ್ಟಿ ಪುಡಿ ಮಾಡಿಟ್ಟುಕೊಳ್ಳಬೇಕು.

* ಪಾನಕಕ್ಕೆ ಬೇಕಾಗುವ ಈ ಕಾಳು ಮೆಣಸನ್ನು ಸ್ವಲ್ಪ ಸ್ವಲ್ಪ ತರಿಯಾಗಿ ಪುಡಿ ಮಾಡಿಟ್ಟುಕೊಳ್ಳಬೇಕು.

* ಒಂದು ಪಾತ್ರೆಗೆ ನೀರು ಹಾಕಿ ನಿಂಬೆಯನ್ನು ಹಿಂಡಿಕೊಳ್ಳಿ. ಅದಕ್ಕೆ ಪುಡಿ ಮಾಡಿಟ್ಟ ಬೆಲ್ಲ, ಕಾಳು ಮೆಣಸು ಹಾಗೂ ಒಣಶುಂಠಿಯನ್ನು ಬೆರೆಸಬೇಕು.

* ಬೆಲ್ಲ ಕರಗಿದ ನಂತರ ಏಲಕ್ಕಿ ಪುಡಿ ಮತ್ತು ಉಪ್ಪು ಹಾಕಿ ಬೆರೆಸಿದರೆ ಬೆಲ್ಲದ ಪಾನಕ ಸವಿಯಲು ಸಿದ್ಧವಾಗುತ್ತದೆ.

ದೂದ್ ಪೇಡ ಮಾಡಲು ಬೇಕಾಗುವ ಸಾಮಗ್ರಿಗಳು:

*ಹಾಲಿನಪುಡಿ

* ಕಂಡೆನ್ಸ್ದ್ ಹಾಲು

* ಬೆಣ್ಣೆ

* ಏಲಕ್ಕಿ ಪುಡಿ

ಇದನ್ನೂ ಓದಿ: ರಾಮನವಮಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಹೀಗೆ ಶುಭಕೋರಿ

ಮಾಡುವ ವಿಧಾನ:

* ಮೊದಲು ಬೆಣ್ಣೆಯನ್ನು ಕರಗಿಸಿ,ಅದಕ್ಕೆ ಕಂಡೆನ್ಸ್ಡ್ ಮಿಲ್ಕ್ ,ಹಾಲಿನ ಪುಡಿಯನ್ನು ಹಾಕಿ, ಗಂಟು ಆಗದಂತೆ ಚೆನ್ನಾಗಿ ಬೆರೆಸಿಕೊಳ್ಳಬೇಕು.

* ಆಗಾಗ ಕೈಯಾಡಿಸುತ್ತ ಇರಬೇಕು. ಈ ಮಿಶ್ರಣವು ಗಟ್ಟಿಯಾದ ತಕ್ಷಣ ಅದಕ್ಕೆ ಏಲಕ್ಕಿ ಪುಡಿಯನ್ನು ಹಾಕಿ ಕಲಸಿಕೊಳ್ಳಿ.

* ತಳ ಬಿಡುತ್ತಿದ್ದಂತೆ ಬೇಕಾದ ಆಕಾರದಲ್ಲಿ ಪೇಡಗಳನ್ನು ತಯಾರಿಸಿದರೆ ರುಚಿ ರುಚಿಕರವಾದ ದೂದ್ ಪೇಡ ಸವಿಯಲು ಸಿದ್ಧ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:56 am, Tue, 16 April 24

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ